ಮುಡಾರು: ಡಾಮರುಗೊಳ್ಳದ ಹೆಪೆಜಾರು-ಐಡಿಯಲ್‌ ರಸ್ತೆ

ರಾಶಿ ಬಿದ್ದಿರುವ ಜಲ್ಲಿಕಲ್ಲಿನಿಂದ ಪ್ರಯಾಣಕ್ಕೆ ರಿಕ್ಷಾ ಚಾಲಕರ ಹಿಂದೇಟು

Team Udayavani, Oct 18, 2019, 5:26 AM IST

1610PALLI01A

ಬಜಗೋಳಿ: ಮುಡಾರು ಗ್ರಾ. ಪಂ. ವ್ಯಾಪ್ತಿಯ ಹೆಪೆಜಾರು ಐಡಿಯಲ್‌ ಸಂಪರ್ಕ ರಸ್ತೆ ಸುಮಾರು 20 ವರ್ಷಗಳಿಂದ ಡಾಮರನ್ನೇ ಕಾಣದೆ ಹೊಂಡಗುಂಡಿಗಳಿಂದ ಸಂಚಾರಕ್ಕೆ ದುಸ್ತರವಾಗಿದೆ. 2002ರಲ್ಲಿ ಮಣ್ಣಿನ ರಸ್ತೆಗೆ ಜಲ್ಲಿಕಲ್ಲು ಅಳವಡಿಸಿದ ಬಳಿಕ ಯಾವುದೇ ರೀತಿಯ ಪ್ರಗತಿಯಾಗಿಲ್ಲ.

ಈ ರಸ್ತೆಯ ಭಾಗದಲ್ಲಿ ಸುಮಾರು 100ಕ್ಕೂ ಅಧಿಕ ಮನೆಗಳಿದ್ದು, ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಇಲ್ಲಿಯ ಗ್ರಾಮಸ್ಥರು ತಮ್ಮ ದೈನಂದಿನ ಚಟುವಟಿಕೆಗೆ ಬಜಗೋಳಿ ಪೇಟೆಯನ್ನು ಅವಲಂಬಿಸಿದ್ದು, ಈ ರಸ್ತೆ ಮೂಲಕವೇ ಸಂಚರಿಸಬೇಕಾಗಿದೆ. ಮುಡಾರು ಗ್ರಾಮ ಪಂಚಾಯತ್‌, ಗ್ರಾಮಕರಣಿಕರ ಕಚೇರಿ, ಆರೋಗ್ಯ ಇಲಾಖೆ, ಅಂಗನವಾಡಿ, ಶಾಲೆ, ಅಂಚೆ ಕಚೇರಿ, ಬಜಗೋಳಿ ಪರಿಸರದಲ್ಲಿಯೇ ಇದ್ದು, ಪಂಚಾಯತ್‌ ವ್ಯಾಪ್ತಿಯ ಗ್ರಾಮಸ್ಥರು ಈ ರಸ್ತೆ ಮೂಲಕವೇ ದೈನಂದಿನ ಕಾರ್ಯಗಳಿಗಾಗಿ ಪ್ರತಿನಿತ್ಯ ಸಂಚರಿಸಬೇಕಾಗಿದೆ. ರಸ್ತೆಯುದ್ದಕ್ಕೂ ಜಲ್ಲಿಕಲ್ಲುಗಳ ರಾಶಿಯೇ ಬಿದ್ದಿದ್ದು ವಾಹನ ಸವಾರರು ನಿರಂತರ ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ.

ಇಲ್ಲಿಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಬಜಗೋಳಿ, ಕಾರ್ಕಳ ನಗರಕ್ಕೆ ತೆರಳಲು ಈ ರಸ್ತೆಯನ್ನು ಬಳಸುತ್ತಾರೆ. ಮಳೆಗಾಲದಲ್ಲಿ ಇಲ್ಲಿಯ ರಸ್ತೆ ಕೆಸರುಮಯವಾದರೆ ಬೇಸಗೆಯಲ್ಲಿ ದೂಳಿನಿಂದ ಆವೃತವಾಗುತ್ತದೆ.

ರಿಕ್ಷಾ ಚಾಲಕರ ಹಿಂದೇಟು
ಈ ರಸ್ತೆಯ ದುಸ್ಥಿತಿಯಿಂದ ರಿಕ್ಷಾ ಚಾಲಕರು ಇಲ್ಲಿ ಸಂಚರಿಸಲು ಹಿಂದೇಟು ಹಾಕುತ್ತಾರೆ. ತುರ್ತು ಸಂದರ್ಭ ಹಾಗೂ ದಿನಬಳಕೆಯ ವಸ್ತುಗಳನ್ನು ಮನೆಗೆ ಕೊಂಡೊಯ್ಯಲು ಇಲ್ಲಿಯವರಿಗೆ ಅನನುಕೂಲವಾಗಿದೆ.

ಹಲವು ಬಾರಿ ಆಶ್ವಾಸನೆ
ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಗೊಂಡಿದ್ದು, ಶೀಘ್ರ ಕಾಮಗಾರಿ ನಡೆಯಲಿದೆ ಎಂದು ಭರವಸೆ ನೀಡಿದ್ದರೂ ಇದುವರೆಗೂ ಯಾವುದೇ ಪ್ರಗತಿಯಾಗಿಲ್ಲ ಎಂದು ಗ್ರಾಮಸ್ಥರು ದೂರುತ್ತಾರೆ.ಜನಪ್ರತಿನಿಧಿಗಳು, ಅಧಿಕಾರಿಗಳು ಸಮಸ್ಯೆಗೆ ಶೀಘ್ರ ಸ್ಪಂದಿಸಬೇಕಾಗಿದೆ.

ಟೆಂಡರ್‌ ಪ್ರಕ್ರಿಯೆಯಲ್ಲಿ ವಿಳಂಬ
ಈ ರಸ್ತೆ ಬಗ್ಗೆ ಕೇಂದ್ರ ರಸ್ತೆ ನಿಧಿ ಯೋಜನೆಯಡಿ 1 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಹಿಂದಿನ ಸರಕಾರ ಟೆಂಡರ್‌ ಪ್ರಕ್ರಿಯೆ ನಡೆಸುವಲ್ಲಿ ವಿಳಂಬ ನೀತಿ ತೋರಿರುವುದರಿಂದ ಕಾಮಗಾರಿ ಕುಂಠಿತಗೊಂಡಿದೆ. ಈ ಬಗ್ಗೆ ಶಾಸಕರ ಗಮನ ಸೆಳೆದು ತತ್‌ಕ್ಷಣ ಡಾಮರು ಕಾಮಗಾರಿಗೆ ಪ್ರಯತ್ನಿಸಲಾಗುವುದು.
ರಜತ್‌ರಾಮ್‌ ಮೋಹನ್‌,
ವಾರ್ಡ್‌ನ ಗ್ರಾಮ ಪಂಚಾಯತ್‌ ಸದಸ್ಯರು

ಬೇಡಿಕೆ ಈಡೇರಿಸಿ
ಶೀಘ್ರ ರಸ್ತೆ ಡಾಮರುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡು ಈ ಭಾಗದ ಸ್ಥಳೀಯರ ಬಹು ದಿನಗಳ ಬೇಡಿಕೆ ಈಡೇರಿಸಬೇಕಿದೆ.
-ಅನಿಲ್‌ ಶೆಟ್ಟಿ ,ಗ್ರಾಮಸ್ಥರು

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.