ಅಪಘಾತ ವಲಯವಾಗುತ್ತಿರುವ ಮುಳ್ಳಿಕಟ್ಟೆ ಜಂಕ್ಷನ್‌

ಆಲೂರು - ಹಕ್ಲಾಡಿ ಕಡೆಯಿಂದ ಬರುವ ವಾಹನಗಳಿಗೆ ಸಮಸ್ಯೆ

Team Udayavani, Mar 3, 2020, 4:39 AM IST

mullikatte-Junction

ಹೆಮ್ಮಾಡಿ: ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಮುಳ್ಳಿಕಟ್ಟೆ ಜಂಕ್ಷನ್‌ ದಿನೇ ದಿನೇ ಅಪಾಯಕಾರಿಯಾಗಿ ಮಾರ್ಪಟ್ಟಿದ್ದು, ಇಲ್ಲಿ ಸಮರ್ಪಕವಾದ ರಸ್ತೆ ಸುರಕ್ಷಿತ ಕ್ರಮಗಳಿಲ್ಲದೆ ಆಗಾಗ ಅಪಘಾತಗಳು ಸಂಭವಿಸುತ್ತಲೇ ಇದೆ. ಹೆದ್ದಾರಿ ಕಾಮಗಾರಿ ಆರಂಭವಾದ ಬಳಿಕ ಇದೇ ಜಂಕ್ಷನ್‌ನಲ್ಲಿ 3 ಮಂದಿ ಅಸುನೀಗಿರುವುದೇ ಇದಕ್ಕೆ ಸಾಕ್ಷಿ.

ಕುಂದಾಪುರ, ಬೈಂದೂರು, ಗಂಗೊಳ್ಳಿ ಹಾಗೂ ನಾಡ ಗುಡ್ಡೆಯಂಗಡಿ – ಆಲೂರು – ಹಕ್ಲಾಡಿ ಹೀಗೆ ನಾಲ್ಕು ಕಡೆಗಳ ರಸ್ತೆಗಳು ಮುಳ್ಳಿಕಟ್ಟೆಯ ಜಂಕ್ಷನ್‌ನಲ್ಲಿ ಸಂಧಿಸುತ್ತದೆ. ಆದರೆ ಇಲ್ಲಿ ಬ್ಯಾರಿಕೇಡ್‌ ಒಂದನ್ನು ಅಳವಡಿಸಿದ್ದು ಬಿಟ್ಟರೆ ಬೇರೆ ಯಾವುದೇ ಸುರಕ್ಷಿತ ಕ್ರಮಗಳನ್ನು ಕೈಗೊಂಡಿಲ್ಲ.

ರಸ್ತೆ ದಾಟುವುದೇ ಸಮಸ್ಯೆ
ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ವಾಹನಗಳು ರಸ್ತೆಗಳ ಎರಡು ಕಡೆಗಳಿಂದಲೂ ನಿರಂತರವಾಗಿ ಸಂಚರಿಸುತ್ತಲೇ ಇರುವುದರಿಂದ ಇಲ್ಲಿ ಪಾದಚಾರಿಗಳು ಒಂದು ಕಡೆಯಿಂದ ಮತ್ತೂಂದು ಕಡೆಗೆ ರಸ್ತೆ ದಾಟುವುದೇ ಒಂದು ದೊಡ್ಡ ಸಾಹಸ. ಇಲ್ಲಿ ಬಸ್‌ಗಳಲ್ಲಿ ಸಂಚರಿಸುವ ಶಾಲಾ- ಕಾಲೇಜು ಮಕ್ಕಳಿದ್ದು, ಬೆಳಗ್ಗೆ ಮತ್ತು ಸಂಜೆ ವೇಳೆ ಅವರಿಗೆ ಸಮಸ್ಯೆಯಾಗುತ್ತಿದೆ. ಈ ಜಂಕ್ಷನ್‌ ಪ್ರದೇಶ ಯಾವಾಗಲೂ ಜನದಟ್ಟಣೆಯಿಂದ ಕೂಡಿದ್ದು, ಪಾದಚಾರಿಗಳು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿ ಯಾವುದೇ ಸೂಚನಾ ಫಲಕ, ಸಿಗ್ನಲ್‌ ಲೈಟ್‌ ಅಳವಡಿಸಿಲ್ಲ.

ಬಸ್‌ ನಿಲ್ದಾಣವಿಲ್ಲ
ಆಲೂರು, ನಾಡಾ-ಪಡುಕೋಣೆ, ನೂಜಾಡಿ, ಹಕ್ಲಾಡಿ ಮೊದಲಾದೆಡೆಯಿಂದ ಬರುವ ಬಸ್‌ ಮತ್ತಿತರ ವಾಹನಗಳು ಮುಳ್ಳಿಕಟ್ಟೆ ಜಂಕ್ಷನ್‌ ಮೂಲಕ ಕುಂದಾಪುರಕ್ಕೆ ನಿತ್ಯ ಸಂಚರಿಸುತ್ತವೆ. ಗುಜ್ಜಾಡಿ – ನಾಯಕವಾಡಿ, ಗಂಗೊಳ್ಳಿ ಮೊದಲಾದೆಡೆಯಿಂದ ಹತ್ತಾರು ಬಸ್‌ಗಳು ಸಂಚರಿಸುತ್ತವೆ. ಆದರೆ ಇಲ್ಲಿ ಬಸ್‌ ನಿಲ್ದಾಣವಿಲ್ಲ. ಜನರು ಸುಡು ಬಿಸಿಲಿನಲ್ಲಿಯೇ ನಿಂತು ಕೊಳ್ಳಬೇಕಾದ ಸ್ಥಿತಿಯಿದೆ. ಇಲ್ಲಿ ಸರ್ವಿಸ್‌ ರಸ್ತೆಯೂ ನಿರ್ಮಾಣವಾಗದೇ ಇರುವುದರಿಂದ ಬಸ್‌ಗಳು ಹೆದ್ದಾರಿಯಲ್ಲಿಯೇ ನಿಲ್ಲಿಸಿ, ಜನರನ್ನು ಹತ್ತಿಸಿ, ಇಳಿಸಬೇಕಾಗಿದೆ.

ಹರಸಾಹಸ
ಇನ್ನು ಮುಳ್ಳಿಕಟ್ಟೆ – ಆಲೂರು – ಹಕ್ಲಾಡಿ ಕಡೆ ಯಿಂದ ಗಂಗೊಳ್ಳಿ ಕಡೆಗೆ ವಾಹನ ದಟ್ಟಣೆ ಹೆಚ್ಚಿ ರುವ ಸಂದರ್ಭಗಳಲ್ಲಿ ಸಂಚರಿಸಬೇಕಾದರೆ ದೊಡ್ಡ ಸಾಹಸವೇ ಮಾಡಬೇಕು. ಮುಳ್ಳಿ ಕಟ್ಟೆಯಿಂದ ಹೆದ್ದಾರಿಗೆ ಸಂಪರ್ಕಿಸುವ ರಸ್ತೆಯು ಕೆಳ ಮಟ್ಟದಲ್ಲಿದೆ. ಆ ಕಡೆಯಿಂದ ಬರುವವರಿಗೆ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ವಾಹನಗಳು ತಿಳಿಯದ ಸ್ಥಿತಿ ಇಲ್ಲಿದೆ.

3 ಮಂದಿ ದುರ್ಮರಣ
ಇದೇ ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ಕಳೆದ 3 ವರ್ಷಗಳಲ್ಲಿ ರಸ್ತೆ ಅಪಘಾತದಲ್ಲಿ 3 ಮಂದಿ ಮೃತಪಟ್ಟಿದ್ದಾರೆ. 2017 ರ ಡಿಸೆಂಬರ್‌ನಲ್ಲಿ ಪಾದಚಾರಿಗೆ ಟೆಂಪೋ ಢಿಕ್ಕಿಯಾಗಿ ಸಾವನ್ನಪ್ಪಿದ್ದರೆ, 2019ರ ನವೆಂಬರ್‌ನಲ್ಲಿ ಟಿಟಿ ವಾಹನವು ಆಲೂರು ಕಡೆಯಿಂದ ಗಂಗೊಳ್ಳಿ ಕಡೆಗೆ ಸಂಚರಿಸುತ್ತಿದ್ದ ಬೈಕ್‌ಗೆ ಢಿಕ್ಕಿಯಾದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅದಕ್ಕೂ ಹಿಂದೆ ಅಂದರೆ 2015 ರಲ್ಲಿ ಕಾರು – ಲಾರಿ – ಟೆಂಪೋ ಮಧ್ಯೆ ಸರಣಿ ಅಪಘಾತದಲ್ಲಿ ಟೆಂಪೋ ಚಾಲಕ ಗಂಭೀರ ಗಾಯಗೊಂಡಿದ್ದರು. ಇನ್ನು ಈ ಜಂಕ್ಷನ್‌ನಲ್ಲಿ ಆಗಾಗ ಅಪಘಾತಗಳು ನಡೆಯುತ್ತಲೇ ಇರುತ್ತದೆ.

ಅಪಘಾತ ವಲಯ
ಹೆದ್ದಾರಿ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ರಸ್ತೆ ಸುರಕ್ಷಿತ ಕ್ರಮಗಳಿಲ್ಲದೆ ಸ್ಥಳೀಯರಿಗೆ ತುಂಬಾ ತೊಂದರೆಯಾಗುತ್ತಿದೆ. 4 ಕಡೆಗಳಿಂದ ವಾಹನಗಳು ಹಾದು ಹೋಗುವ ಜಂಕ್ಷನ್‌ ಆಗಿದ್ದರೂ ಬೀದಿ ದೀಪಗಳಿಲ್ಲ. ಟೋಲ್‌ ಆರಂಭವಾದರೂ, ಇಲ್ಲಿ ಮಾತ್ರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಅದಕ್ಕಿಂತಲೂ ಪ್ರಮುಖವಾಗಿ ಆಲೂರು, ಹಕ್ಲಾಡಿ, ಹೊಸಾಡು ಕಡೆಗಳಿಂದ ಬರುವ ವಾಹನಗಳು ಗಂಗೊಳ್ಳಿಗೆ ತೆರಳಬೇಕಾದರೆ ಭಾರೀ ಸಮಸ್ಯೆಯಾಗುತ್ತಿದೆ. ಇದೊಂದು ರೀತಿಯಲ್ಲಿ “ಐಆರ್‌ಬಿ ಪ್ರಾಯೋಜಿತ ಅಪಘಾತ ವಲಯ’ವಾಗಿ ಮಾರ್ಪಟ್ಟಿದೆ.
– ಅನಂತ್‌ ಮೋವಾಡಿ,
ಮಾಜಿ ಜಿ.ಪಂ. ಸದಸ್ಯರು, ಸ್ಥಳೀಯರು

ಗಮನಕ್ಕೆ ಬಂದಿದೆ
ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ಆಗುತ್ತಿರುವ ಅಪಘಾತಗಳ ಬಗ್ಗೆ ಗಮನಕ್ಕೆ ಬಂದಿದ್ದು, ಅಪಾಯಕಾರಿ ವಲಯ ಎಂದು ಪರಿಗಣಿಸಲಾಗಿದೆ. ಈ ಬಗ್ಗೆ ಸ್ಥಳೀಯ ಪಂಚಾಯತ್‌ನವರು ನನಗೆ ಇಲ್ಲಿ ಜನರು, ವಾಹನ ಸವಾರರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪತ್ರವನ್ನು ಸಲ್ಲಿಸಲಿ. ಅದನ್ನು ಕೂಡಲೇ ಕಾಮಗಾರಿ ನಿರ್ವಹಿಸುತ್ತಿರುವ ಐಆರ್‌ಬಿ ಗಮನಕ್ಕೂ ತಂದು, ಸೂಕ್ತ ಕ್ರಮಕೈಗೊಳ್ಳಲು ಸೂಚಿಸಲಾಗುವುದು.
– ಹರಿರಾಂ ಶಂಕರ್‌, ಎಎಸ್‌ಪಿ ಕುಂದಾಪುರ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.