ಮೂಳೂರು ಹಿಂದು ರಕ್ಷಾ ವೆಲ್‌ ಫೇರ್ ಟ್ರಸ್ಟ್ : ಆಟಿ ಕಷಾಯ ವಿತರಣೆ

1200ಕ್ಕೂ ಅಧಿಕ ಮಂದಿಗೆ 80 ಲೀಟರ್ ಕಷಾಯ ವಿತರಣೆ

Team Udayavani, Aug 1, 2019, 5:26 PM IST

Maddu-726

ಕಾಪು: ಮೂಳೂರು ಹಿಂದು ರಕ್ಷಾ ವೆಲ್‌ ಫೇರ್ ಟ್ರಸ್ಟ್ ನ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಆ. 1ರಂದು ಹಾಲೆ ಮರದ ತೊಗಟೆಯ ಕಷಾಯವನ್ನು ಸಿದ್ಧಪಡಿಸಿ ಸಾರ್ವಜನಿಕರಿಗೆ ಮತ್ತು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.

ಹಿಂದು ರಕ್ಷಾ ವೆಲ್‌ಫೇರ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ. ಪಿ. ಮಾತನಾಡಿ, ತುಳುನಾಡ ಸಂಸ್ಕೃತಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆಯು ಧಾರ್ಮಿಕವಾಗಿ, ವೈಜ್ಞಾನಿಕವಾಗಿ ಅತ್ಯಂತ ಮಹತ್ವವನ್ನು ಪಡೆದಿದೆ. ಉಡುಪಿ ಕುತ್ಪಾಡಿ ಶ್ರೀ ಧರ್ಮಸ್ಥಳ ಆಯುರ್ವೇದ ಕಾಲೇಜಿನ ಜನಪದ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಆಟಿ ಅಮಾವಾಸ್ಯೆಯ ದಿನ ಹಾಲೆ ಮರದ ತೊಗಟೆಯಲ್ಲಿ ಔಷಧೀಯ ಗುಣಧರ್ಮ ಹೆಚ್ಚಾಗಿರುವದನ್ನು ಸಂಶೋಧನೆಯ ಮೂಲಕ ಧೃಢಪಡಿಸಿದೆ. ಈ ಧಾರ್ಮಿಕ ಆಚರಣೆಯನ್ನು ನಿರಂತರವಾಗಿರಿಸುವ ಉದ್ದೇಶದಿಂದ ಕಳೆದ ನಾಲ್ಕು ವರ್ಷಗಳಿಂದ ಆಟಿ ಕಷಾಯ ವಿತರಿಸಿಕೊಂಡು ಬರಲಾಗುತ್ತಿದೆ ಎಂದರು.

ಮೂಳೂರು ಪಡು ಹಳೆ ಭಜನಾ ಮಂದಿರ ಮತ್ತು ಮಹಾಲಕ್ಷ್ಮೀ ನಗರದ ಬಳಿ ಬೆಳಿಗ್ಗೆ 6.00ರಿಂದ ಕಷಾಯದ ವಿತರಣೆ ಮಾಡಲಾಗಿದ್ದು, ಸರ್ವಧರ್ಮೀಯರ ಸಹಿತ ಸುಮಾರು 1,200ಕ್ಕೂ ಅಧಿಕ ಮಂದಿ ಹಾಳೆ ಮರದ ತೊಗಟೆಯಿಂದ ತಯಾರಿಸಿದ ಮದ್ದನ್ನು ಸ್ವೀಕರಿಸಿದರು. ಕೈಪುಂಜಾಲು, ಕಾಪು, ಪೊಲಿಪು, ಎರ್ಮಾಳು, ಉಚ್ಚಿಲ, ಪಣಿಯೂರು, ಮೂಳೂರು ಮತ್ತಿತರ ಪ್ರದೇಶಗಳಿಂದ ಆಗಮಿಸಿ ಮದ್ದು ಪಡೆದುಕೊಂಡಿದ್ದಾರೆ.

ಸ್ಥಳೀಯರಾದ ಸಂಜೀವ ಅಮೀನ್ ಸಹಕಾರದೊಂದಿಗೆ ಟ್ರಸ್ಟ್ ನ ಸದಸ್ಯರು ಜೊತೆ ಸೇರಿ ಹಾಲೆ ಮರದ ಕೆತ್ತೆಯಿಂದ ಕಷಾಯವನ್ನು ಸಿದ್ಧಪಡಿಸಿದ್ದರು.


ಮೂಳೂರು ಹಿಂದು ರಕ್ಷಾ ವೆಲ್‌ಫೇರ್ ಟ್ರಸ್ಟ್ ನ ಅಧ್ಯಕ್ಷ ಚಂದ್ರಕಾಂತ್ ಕೆ. ಮೆಂಡನ್, ಗೌರವ ಸಲಹೆಗಾರ ಅಶೋಕ್ ಪುತ್ರನ್, ಉಪಾಧ್ಯಕ್ಷ ಪ್ರದೀಪ್ ಎಸ್. ಪುತ್ರನ್, ದಿನೇಶ್ ಪಾಣಾರ, ಸಂಜೀವ ಅಮೀನ್, ಸುಖೇಶ್ ಡಿ,. ಪ್ರತೀಕ್ ಸುವರ್ಣ, ನಾಗೇಶ್, ಮಧುಕಿರಣ್ ಶ್ರೀಯಾನ್, ಅರುಣ್ ಕುಲಾಲ್, ಸುನಿಲ್ ಕರ್ಕೇರ, ಜಿತೇಶ್ ಕುಮಾರ್, ಪತ್ರಕರ್ತರಾದ ಬಾಲಕೃಷ್ಣ ಪೂಜಾರಿ, ವಾದಿರಾಜ ರಾವ್ ಮೊದಲಾದವರು ಉಪಸ್ಥಿತರಿದ್ದರು.

ಸಾಮಾನ್ಯವಾಗಿ ಹಾಲೆ ಮರವು ಹೂ ಬಿಡುವ ಒಂದು ತಿಂಗಳ ಮೊದಲೇ ಆಟಿ ಅಮಾವಾಸ್ಯೆ ಬರುವುದರಿಂದ ಮರದ ತೊಗಟೆಯಲ್ಲಿ ಔಷಧೀಯ ಗುಣಧರ್ಮ ಹೆಚ್ಚಿರುತ್ತದೆ. ಈ ಸಂದರ್ಭರ್ದಲ್ಲಿ ತಯಾರಿಸಿದ ಕಷಾಯ ಕುಡಿಯುವುದರಿಂದ ಮನುಷ್ಯನನ್ನು ಕಾಡುವ ಅನೇಕ ರೋಗ ರುಜಿನಗಳು ದೂರವಾಗುತ್ತವೆ ಎಂಬ ನಂಬಿಕೆಯಿದೆ. ಈ ನಂಬಿಕೆಯನ್ನು ಪುರಾಣ ಕಥೆಗಳು ಮತ್ತು ವೈಜ್ಞಾನಿಕ ಸಂಶೋಧಕರು ಕೂಡ ‘ಧೃಢಪಡಿಸಿರುವುದರಿಂದ ಹಾಲೆ ಮರದ ಕಷಾಯಕ್ಕೆ ಜನರು ಹೆಚ್ಚು ಮಹತ್ವ ನೀಡುತ್ತಾರೆ.
– ಧೀರೇಶ್ ಡಿ. ಪಿ., ಪ್ರಧಾನ ಕಾರ್ಯದರ್ಶಿ, ಹಿಂದೂ ರಕ್ಷಾ ವೆಲ್‌ ಫೇರ್ ಟ್ರಸ್ಟ್, ಮೂಳೂರು


ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.