ಮುಂಡ್ಕೂರು-ಪೇರೂರು ರಸ್ತೆ: ಅಪಾಯ ಆಹ್ವಾನಿಸುತ್ತಿರುವ ಆಲದ ಮರಗಳು


Team Udayavani, Sep 11, 2019, 5:45 AM IST

aladamara

ಬೆಳ್ಮಣ್‌: ಮುಂಡ್ಕೂರು-ಮೂಡಬಿದಿರೆ ಮುಖ್ಯ ರಸ್ತೆಯ ಪೇರೂರು ಬಳಿ ರಸ್ತೆಗೆ ತಾಗಿ ಕೊಂಡಿರುವ ಎರಡು ಬೃಹತ್‌ ಆಲದ ಮರಗಳು ವಾಲಿಕೊಂಡ ಸ್ಥಿತಿಯಲ್ಲಿದ್ದು, ಅಪಾಯ ಆಹ್ವಾನಿ ಸುತ್ತಿವೆ.

ಕಿನ್ನಿಗೋಳಿ, ಬೆಳ್ಮಣ್‌ ಕಡೆಯಿಂದ ಮೂಡುಬಿದಿರೆ ಮತ್ತು ಕೊಡ್ಯಡ್ಕಗಳಿಗೆ ಪ್ರಯಾಣಿಸುವವರಿಗೂ ಈ ರಸ್ತೆ ಅನಿವಾರ್ಯವಾಗಿರುವ ಕಾರಣ ಮರಗಳ ತೆರವಿಗೆ ಲೋಕೋಪಯೋಗಿ ಇಲಾಖೆ ಶೀಘ್ರ ಮುಂದಾಗಬೇಕೆಂಬ ಆಗ್ರಹ ಸಾರ್ವಜನಿಕ ವಲಯ ದಿಂದ ಕೇಳಿ ಬಂದಿದೆ.

ಖಾಸಗಿ ಜಾಗದಲ್ಲಿರುವ ಮರಗಳು

ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಈ ಆಲದ ಮರಗಳು ಇರುವುದು ಖಾಸಗಿ ಜಾಗದಲ್ಲಿ. ಸಾರ್ವಜನಿಕ ಹಿತದೃಷ್ಟಿಯಿಂದ ಇಲಾಖೆ ಖಾಸಗಿಯವರ ಮನವೊಲಿಸಿ ಈ ಮರಗಳನ್ನು ತೆರವುಗೊಳಿಸಬೇಕೆಂಬ ಸಲಹೆಗಳೂ ಕೇಳಿ ಬಂದಿವೆ. ಈ ಮರಗಳು ಭಾರೀ ಗಾಳಿಮಳೆಗೆ ರಸ್ತೆಗೆ ಉರುಳಿದಲ್ಲಿ ದೊಡ್ಡ ಅವಘಡ ಸಂಭವಿಸುವ ಸಾಧ್ಯತೆ ಇದೆ ಎಂಬುದು ಸ್ಥಳೀಯರ ಅಭಿಪ್ರಾಯ.

ಇಕ್ಕಟ್ಟಾದ ರಸ್ತೆ, ಸೇತುವೆ

ಈ ರಸ್ತೆ ಭಾರೀ ಇಕ್ಕಟ್ಟಾಗಿದ್ದು ಕಿರು ಸೇತುವೆ ಯನ್ನೂ ವಿಸ್ತರಿಸಬೇಕೆಂಬುದು ಈ ಭಾಗದ ಜನರ ಬಹುದಿನಗಳ ಬೇಡಿಕೆ. ಈ ಪ್ರದೇಶದಲ್ಲಿ ಹಲವು ಅಪಘಾತಗಳು ನಡೆದರೂ ಇಲಾಖೆ ಮಾತ್ರ ಇನ್ನೂ ಸ್ಪಂದಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಚಾರ ಕಷ್ಟ

ರಸ್ತೆ ಹಾಗೂ ಕಿರುಸೇತುವೆ ಇಕ್ಕಟ್ಟಾಗಿರುವ ಕಾರಣ ವಾಹನ ಸಂಚಾರ ಕಷ್ಟವಾಗಿದೆ. ಇದರ ನಡುವೆ ಆಲದ ಮರಗಳೂ ರಸ್ತೆಗೆ ವಾಲಿಕೊಂಡು ಅಪಾಯ ಆಹ್ವಾನಿಸುತ್ತಿವೆ. ಸಂಬಂಧ ಪಟ್ಟ ಇಲಾಖೆ ರಸ್ತೆ ವಿಸ್ತರಣೆಯ ಜತೆಗೆ ಇವುಗಳ ತೆರವಿಗೆ ಮುಂದಾಗಬೇಕು.
– ರಾಜೇಶ್‌ ಕಡಂದಲೆ, ಬಸ್‌ ಚಾಲಕ
ಲೋಕೋಪಯೋಗಿ ಇಲಾಖೆಗೆ ಪತ್ರ

ಈ ಆಲದ ಮರಗಳ ಬಗ್ಗೆ ಏಕಾಏಕಿ ಪಂಚಾಯತ್‌ ಕ್ರಮಕೈಗೊಳ್ಳುವಂತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆಗೆ ಪಂಚಾಯತ್‌ ವತಿಯಿಂದ ಪತ್ರ ಬರೆಯಲಾಗುವುದು.
– ಶುಭಾ ಪಿ. ಶೆಟ್ಟಿ, ಅಧ್ಯಕ್ಷೆ, ಮುಂಡ್ಕೂರು ಗ್ರಾ.ಪಂ.
ಹಲವು ಅಪಘಾತ

ಇಲ್ಲಿ ಈ ಹಿಂದೆಯೂ ಹಲವಾರು ಅಪಘಾತಗಳು ನಡೆದಿವೆ. ಅಪಘಾತಗಳಿಗೆ ರಸ್ತೆ ಇಕ್ಕಟ್ಟಾಗಿರುವುದೇ ಮುಖ್ಯ ಕಾರಣ.
– ಪುರಂದರ ಪೊಸ್ರಾಲು, ಸ್ಥಳೀಯರು

ಟಾಪ್ ನ್ಯೂಸ್

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.