ದಶಕಗಳಿಂದ ಹೊಂಡದಿಂದ ಕೂಡಿದ ಮುಂಡ್ಲಿ ಮುಖ್ಯರಸ್ತೆ

ತಾಲೂಕು ಕೇಂದ್ರ ಸಂಪರ್ಕಿಸುವ ಏಕೈಕ ರಸ್ತೆ

Team Udayavani, Nov 11, 2019, 5:20 AM IST

0611AJKE01

ಅಜೆಕಾರು: ಶಿರ್ಲಾಲು ಗ್ರಾ.ಪಂ. ವ್ಯಾಪ್ತಿಯ ಮುಂಡ್ಲಿ ಸಂಪರ್ಕ ರಸ್ತೆಯು ದಶಕಗಳಿಂದ ಸಂಪೂರ್ಣ ಹದಗೆಟ್ಟಿದ್ದು ಹೊಂಡಗಳಿಂದ ಆವೃತವಾಗಿ ವಾಹನ ಸಂಚಾರ ನಡೆಸುವುದೇ ಅಸಾಧ್ಯವಾಗಿದೆ.

ಮುಂಡ್ಲಿ ಗ್ರಾಮವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು ತೆಳ್ಳಾರುವಿನಿಂದ ಮುಂಡ್ಲಿವರೆಗೆ ಸುಮಾರು 5 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಈ ರಸ್ತೆ ಡಾಮಾರು ಕಾಣದೆ ಎರಡು ದಶಕ ಕಳೆದಿದ್ದು ಇತ್ತೀಚಿನ ದಿನಗಳಲ್ಲಿ ತೇಪೆ ಕಾರ್ಯವೂ ನಡೆದಿಲ್ಲ. ಎರಡು ವರ್ಷಗಳ ಹಿಂದೆ ಸ್ವಲ್ಪ ಮಟ್ಟಿನ ಗುಂಡಿ ಮುಚ್ಚುವ ಕಾರ್ಯ ನಡೆದಿತ್ತಾದರೂ ಕಾಮಗಾರಿ ನಡೆದು ಮೂರು ತಿಂಗಳಲ್ಲಿ ಮತ್ತೆ ರಸ್ತೆಯಲ್ಲಿ ಬೃಹತ್‌ ಹೊಂಡ ನಿರ್ಮಾಣವಾಗಿದೆ.ಈ ಕುರಿತು ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರಂತರ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲವಾಗಿದೆ ಎಂಬುದು ಸ್ಥಳೀಯರ ಆರೋಪ.

ರಸ್ತೆಗೆ ಹಾಕಲಾದ ಡಾಮಾರು ಎದ್ದು ಜಲ್ಲಿಕಲ್ಲುಗಳ ರಾಶಿ ರಸ್ತೆಯುದ್ದಕ್ಕೂ ಬಿದ್ದು ಮಣ್ಣಿನ ರಸ್ತೆ ನಿರ್ಮಾಣವಾಗಿದೆ. ಮುಂಡ್ಲಿ ಗ್ರಾಮಸ್ಥರು ತಾಲೂಕು ಕೇಂದ್ರವನ್ನು ಸಂಪರ್ಕಿಸಲು ಇರುವ ಏಕೈಕ ರಸ್ತೆ ಇದಾಗಿದೆ. ಬಸ್‌ ಮತ್ತು ದ್ವಿಚಕ್ರ ಸವಾರರೂ ರಸ್ತೆ ದುಸ್ಥಿತಿಯಿಂದ ನಿತ್ಯ ಅಫ‌ಘಾತಗಳಾಗುತ್ತಿವೆ. ಈ ಮಾರ್ಗವಾಗಿ ಕಾರ್ಕಳ ಮುಂಡ್ಲಿ ನಡುವೆ ಸಂಚರಿಸುತ್ತಿದ್ದ ಬಹುತೇಕ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದ್ದು ವಿದ್ಯಾರ್ಥಿಗಳಿಗೆ ಹಾಗೂ ನಿತ್ಯ ಉದ್ಯೋಗಕ್ಕಾಗಿ ತೆರಳುವವರಿಗೆ ತೀವ್ರ ತೊಂದರೆಯಾಗಿದೆ.
ಮಳೆಗಾಲದಲ್ಲಿ ರಸ್ತೆಯ ಇಕ್ಕೆಲ ಗಳಲ್ಲಿ ಸೂಕ್ತ ಚರಂಡಿ ಇಲ್ಲದೆ ಮಳೆ ನೀರು ರಸ್ತೆಯಲ್ಲಿಯೇ ಹರಿದರೆ ಬೇಸಗೆಯಲ್ಲಿ ಈ ರಸ್ತೆ ಸಂಪೂರ್ಣ ಧೂಳಿ ನಿಂದ ಆವೃತವಾಗುತ್ತದೆ. ತುರ್ತು ಸಂದರ್ಭ ಬಾಡಿಗೆ ವಾಹನ ಮಾಲಕರು ಬರಲು ಹಿಂದೇಟು ಹಾಕುತ್ತಾರೆ.

ಮುಂಡ್ಲಿ ಗ್ರಾಮಸ್ಥರ ಅತ್ಯಾವಶ್ಯಕವಾದ ಈ ರಸ್ತೆ ಶೀಘ್ರ ದುರಸ್ತಿಗೊಳ್ಳಬೇಕಾಗಿದ್ದು ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ಮುಖ್ಯ ರಸ್ತೆಯ ಡಾಮರು ನಡೆಸಿ ಸ್ಥಳೀಯರ ಸಮಸ್ಯೆಗೆ ಸ್ಪಂದಿಸಬೇಕಿದೆ.

ಟೆಂಡರ್‌ ಪ್ರಕ್ರಿಯೆಲ್ಲಿದೆ
ಮುಂಡ್ಲಿ ರಸ್ತೆ ಅಭಿವೃದ್ಧಿಗೆ ಪಿಆರ್‌ಇಡಿಯಿಂದ 25 ಲಕ್ಷ ರೂ. ಅನುದಾನ ಇಡಲಾಗಿದ್ದು ಟೆಂಡರ್‌ ಪ್ರಕ್ರಿಯೆಯಲ್ಲಿದೆ. ಪ್ರಕ್ರಿಯೆ ಪೂರ್ಣಗೊಂಡ ತತ್‌ಕ್ಷಣ ಕಾಮಗಾರಿ ನಡೆಸಲಾಗುವುದು.
-ಉದಯ ಕೋಟ್ಯಾನ್‌,,
ಜಿಲ್ಲಾ ಪಂಚಾಯತ್‌ ಸದಸ್ಯ

ಆಶ್ವಾಸನೆಗಷ್ಟೇ ಸೀಮಿತ
ದಶಕಗಳಿಂದ ರಸ್ತೆ ದುರಸ್ತಿಪಡಿಸುವಂತೆ ಮನವಿ ಮಾಡುತ್ತಾ ಬಂದಿದ್ದರೂ ಅಭಿವೃದ್ಧಿ ನಡೆದಿಲ್ಲ. ಕೇವಲ ಆಶ್ವಾಸನೆಗಷ್ಟೇ ಅನುದಾನ ಸೀಮಿತವಾಗಿದ್ದು ಕಾರ್ಯರೂಪಕ್ಕೆ ಬರುತ್ತಿಲ್ಲ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ರಸ್ತೆ ಅವ್ಯವಸ್ಥೆ ವಿರೋಧಿಸಿ ಚುನಾವಣಾ ಬಹಿಷ್ಕಾರ ನಡೆಸುವ ಬಗ್ಗೆ ಗ್ರಾಮಸ್ಥರು ನಿರ್ಧಾರ ಕೈಗೊಂಡಿದ್ದರೂ ಸಹ ಜಿಲ್ಲಾಧಿಕಾರಿಗಳ ಭರವಸೆಯಂತೆ ಚುನಾವಣೆಯಲ್ಲಿ ಪಾಲ್ಗೊಳ್ಳಲಾಗಿತ್ತು. ಆದರೆ ಮುಂಬರುವ ಚುನಾವಣೆಯ ಮುನ್ನ ರಸ್ತೆ ಅಭಿವೃದ್ಧಿಗೊಳ್ಳದಿದ್ದಲ್ಲಿ ಚುನಾವಣೆ ಬಹಿಷ್ಕಾರ ಅಚಲ.
-ಸುಜಿತ್‌ ಕುಮಾರ್‌ ಶೆಟ್ಟಿ, ತಾ.ಪಂ. ಮಾಜಿ ಸದಸ್ಯರು

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.