ಮುಂಡ್ಲಿ  ಸೇತುವೆ ದುರಸ್ತಿಗೆ ಕೊನೆಗೂ ಪ್ರಸ್ತಾವನೆ ಸಲ್ಲಿಕೆ


Team Udayavani, Mar 17, 2019, 3:43 AM IST

mundli.png

ಅಜೆಕಾರು: ಅಪಾಯಕಾರಿಯಾಗಿ ಬಿರುಕು ಬಿಟ್ಟಿರುವ ಮುಂಡ್ಲಿ ಸೇತುವೆ ದುರಸ್ತಿ ಪಡಿಸುವಂತೆ ಸ್ಥಳೀಯರು ನಿರಂತರ ಮನವಿ ಮಾಡುತ್ತಾ ಬಂದಿದ್ದು  ಶಿರ್ಲಾಲು ಗ್ರಾ.ಪಂ. ಅಧಿಕಾರಿಗಳು ಜನರ ಮನವಿಯಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. 

ಸುಮಾರು 35 ವರ್ಷಗಳ ಹಿಂದೆ ನಿರ್ಮಾಣವಾಗಿರುವ ಮುಂಡ್ಲಿ ಸೇತುವೆಯ ಆಧಾರ ಸ್ತಂಭಗಳು ಬಿರುಕು ಬಿಟ್ಟು ಅಪಾಯಕಾರಿ ಸ್ಥಿತಿಯಲ್ಲಿರುವ ಬಗ್ಗೆ ಗ್ರಾಮಸ್ಥರು ಹಲವು ಗ್ರಾಮ ಸಭೆಗಳಲ್ಲಿ ಪ್ರಸ್ತಾವ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಇತ್ತೀಚೆಗೆ ನಡೆದ ಗ್ರಾಮ ಸಭೆಯಲ್ಲಿ ಮತ್ತೆ ಸೇತುವೆ ದುರಸ್ತಿ ಬಗ್ಗೆ ಪ್ರಸ್ತಾವ ಮಾಡಿದ ಗ್ರಾಮಸ್ಥರು ಮಳೆಗಾಲದ ಮೊದಲು ಸೇತುವೆ ಅಭಿವೃದ್ದಿಪಡಿಸದಿದ್ದಲ್ಲಿ ಕಳೆದ ಮಳೆಗಾಲದಲ್ಲಿ ಬಂಟ್ವಾಳ ತಾಲೂಕಿನ ಸೇತುವೆ ಮಳೆ ನೀರಿಗೆ ಕೊಚ್ಚಿ ಹೋದಂತೆ ಮುಂಡ್ಲಿ ಸೇತುವೆಯು ಕೊಚ್ಚಿ ಹೋಗಲಿದೆ ಎಂದು ಎಚ್ಚರಿಸಿದ್ದರು. ಈ ಬಗ್ಗೆ ಗ್ರಾಮ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಪಂಚಾಯತ್‌ ಅಧಿಕಾರಿ ಗಳು ಈಗ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಸೇತುವೆಯು ಸುಮಾರು 100 ಮೀ. ಉದ್ದವಿದ್ದು ಕಾರ್ಕಳದಿಂದ ತೆಳ್ಳಾರು ಮಾರ್ಗವಾಗಿ ಮುಂಡ್ಲಿ, ಶಿರ್ಲಾಲು, ಕೆರ್ವಾಶೆ ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ಸಂಪರ್ಕ ಕೊಂಡಿಯಾಗಿದೆ.  ಸೇತುವೆ ತಳಭಾಗದಲ್ಲಿ 7 ಆಧಾರ ಸ್ತಂಭಗಳಿದ್ದು ಇದರಲ್ಲಿ 4 ಆಧಾರ ಸ್ತಂಭಗಳು ಬಿರುಕು ಬಿಟ್ಟಿದ್ದು ತಳದಿಂದ ಮೇಲ್ಭಾಗದವರೆಗೂ ಸಿಮೆಂಟ್‌ ಕಾಂಕ್ರೀಟ್‌ ಕೊಚ್ಚಿಹೋಗಿ ಆಧಾರ ಸ್ತಂಭಗಳಿಗೆ ಅಳವಡಿಸಲಾದ ಕಬ್ಬಿಣದ ಸಲಾಕೆಗಳು ಹೊರಬಂದಿವೆೆ.

 ಮೇಲ್ಭಾಗದ ಕಾಂಕ್ರೀಟ್‌ ಸಹ ಕಿತ್ತುಹೋಗಿ ಅಳವಡಿಸಲಾದ ಕಬ್ಬಿಣದ ಸಲಾಕೆಗಳಗೆ ತುಕ್ಕು ಹಿಡಿದು ಸೇತುವೆಯಲ್ಲಿ ರಂದ್ರಗಳು ಉಂಟಾಗಿವೆೆ. ದುರ್ಬಲಗೊಂಡಿರುವ ಈ ಸೇತುವೆ ಮೇಲಿಂದ ವಾಹನಗಳು ಸಂಚರಿಸುವಾಗ ಸೇತುವೆಯು ಕಂಪಿಸುತ್ತಿದ್ದು ಪ್ರಯಾಣಿಕ ರಲ್ಲಿ ಭಯಭೀತಿ ಹುಟ್ಟಿಸುತ್ತಿದೆ.

ಹಲವು ಬಾರಿ ಮನವಿ ಮಾಡಿ ನಿಷ್ಪ್ರಯೋಜಕವಾಗಿದ್ದರೂ ಈ ಬಾರಿ ಪಂಚಾಯತ್‌ ಮೂಲಕ ಮೇಲಾಧಿಕಾರಿ ಗಳಿಗೆ ಪ್ರಸ್ತಾವನೆ ಹೋಗಿರುವುದರಿಂದ ಸೇತುವೆಯ ಅಭಿವೃದ್ಧಿ ಕಾಮಗಾರಿ ನಡೆಯಬಹುದೆಂಬ ಆಶಾಭಾವನೆಯಲ್ಲಿ ಸ್ಥಳೀಯರಿದ್ದಾರೆ.

ಪ್ರತಿ ವರ್ಷ ಕುಸಿಯುವ  ರಸ್ತೆ
ಪವರ್‌ ಪ್ರಾಜೆಕ್ಟ್ ನಿರ್ಮಾಣಗೊಂಡ ಬಳಿಕ ಪ್ರತಿ ವರ್ಷ ಸೇತುವೆಯ ಒಂದು ಪಾರ್ಶ್ವದ ಸಂಪರ್ಕ ರಸ್ತೆಯು ಕುಸಿಯುತಿದ್ದು ಮಳೆಗಾಲದಲ್ಲಿ ಸಂಚಾರ ನಡೆಸಲು ಸಂಕಷ್ಟಪಡಬೇಕಾಗಿದೆ. 2014ರಲ್ಲಿ ಸೇತುವೆಯ ಪಕ್ಕದಲ್ಲಿಯೇ ನೀರಿನ ಭಾರೀ ಸೆಳೆತಕ್ಕೆ ರಸ್ತೆ ಕೊಚ್ಚಿಹೋಗಿ ಸಂಪರ್ಕ ಕಡಿತಗೊಂಡಿತ್ತು. ಕಳೆದ ಮಳೆಗಾಲದಲ್ಲಿಯೂ  ಸುರಿದ ಭಾರೀ ಮಳೆಗೆ ರಸ್ತೆಯ ಅಂಚು ಸಂಪೂರ್ಣ ಕುಸಿದಿದ್ದು ತಾತ್ಕಾಲಿಕವಾಗಿ ಅರ್ಧ ಭಾಗಕ್ಕೆ ಮರಳಿನ ಚೀಲ ಇಡಲಾಗಿತ್ತು. ರಸ್ತೆ ಕುಸಿದ ಸಂದರ್ಭಗಳಲ್ಲಿ ಸೌಹಾರ್ದ ಫ್ರೆಂಡ್ಸ್‌ ಕ್ಲಬ್‌ ಜಾರ್ಕಳ  ಮುಂಡ್ಲಿ ಹಾಗೂ ಗ್ರಾಮಸ್ಥರು ಸೇರಿ ಜಲ್ಲಿ ಹಾಗೂ ಕಲ್ಲುಗಳನ್ನು ಹಾಕಿ ತಾತ್ಕಾಲಿಕ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡುತ್ತಾರೆಯೇ ವಿನಃ  ಇಲಾಖಾಧಿಕಾರಿಗಳು ಯಾವುದೇ ಸಹಾಯಕ್ಕೆ ಬರುವುದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಪ್ರಸ್ತಾವನೆ ಸಲ್ಲಿಕೆ
ಮುಂಡ್ಲಿ ಸೇತುವೆ ದುರ್ಬಲ ಗೊಂಡಿರುವ ಬಗ್ಗೆ  ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತುರ್ತು ದುರಸ್ತಿಯ ಬಗ್ಗೆ ಮತ್ತೆ ಮನವಿ ಮಾಡಲಾಗುವುದು.
ಸಂಗಮೇಶ ಬಣಾಕಾರ,  ಪಿಡಿಒ, ಶಿರ್ಲಾಲು ಗ್ರಾ.ಪಂ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.