ಮುಂಡ್ಕೂರು ಮೋಕ್ಷಧಾಮ ರಸ್ತೆಗೆ ಮೋಕ್ಷ ಎಂದು?
Team Udayavani, Dec 28, 2018, 5:25 PM IST
ಬೆಳ್ಮಣ್: ಮೋಕ್ಷಧಾಮ ಹೆಸರಿನ ಮುಂಡ್ಕೂರಿನ ಸಾರ್ವಜನಿಕ ಹಿಂದು ರುದ್ರಭೂಮಿ ಸಹಿತ ವಿವಿಧ ಸಂಸ್ಥೆಗಳ ಸಂಪರ್ಕ ರಸ್ತೆಯ ಜಲ್ಲಿ ,ಡಾಮರು ಕಿತ್ತು ಹೋಗಿ ವಾಹನ ಸವಾರರ ಸಹಿತ ಪಾದಾಚಾರಿಗಳು ನರಕಯಾತನೆ ಅನುಭವಿಸುವಂತಾಗಿದೆ.
ಪಂಚಾಯತ್ನ ಪಕ್ಕದಲ್ಲೇ ಇದೆ
ಮುಂಡ್ಕೂರು ಗ್ರಾಮ ಪಂಚಾಯತ್ ಕಟ್ಟಡದಿಂದ ಅನತಿ ದೂರದಲ್ಲಿರುವ ಈ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಈ ರಸ್ತೆಯಲ್ಲಿ ಜಲ್ಲಿ ಹಾಗೂ ಟಾರು ಚೆಲ್ಲಾಪಿಲ್ಲಿಯಾಗಿದೆ. ಮುಂಡ್ಕೂರಿನ ಸಾರ್ವಜನಿಕ ಹಿಂದೂ ರುದ್ರಭೂಮಿ ಹಾಗೂ ಮಸೀದಿಗೆ ಸಾಗುವ ಪ್ರಮುಖ ರಸ್ತೆಯಾದರೂ ರಸ್ತೆ ದುರಸ್ತಿ ಬಗ್ಗೆ ಯಾರೂ ತಲೆ ಕೆಡಿಸಿಕೊಂಡಿಲ್ಲ.
ಗ್ರಾಮ ಪಂಚಾಯತ್ ಸಹಿತ ಅಂಚೆ ಕಛೇರಿ, ಕಂದಾಯ ಇಲಾಖೆ, ಗ್ರಂಥಾಲಯ, ಜಿಮ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಲು ಉತ್ಪಾದಕರ ಸಂಘ, ಪಶು ಆಸ್ಪತ್ರೆ, ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ಇನ್ನಿತರ ವ್ಯವಸ್ಥೆಗಳಿಗೆ ನಿತ್ಯ ಬಹಳ ಸಂಖ್ಯೆಯಲ್ಲಿ ವಾಹನಗಳು ಹಾದು ಹೋಗುತ್ತವೆ.
ಆಶ್ವಾಸನೆ ಮಾತ್ರ
ಕಳೆದ ಬಾರಿಯ ವಿಧಾನಸಭಾ ಚುನಾವಣೆಯ ಸಂದರ್ಭ ಈ ರಸ್ತೆಯನ್ನು ಡಾಮರೀಕರಣಕ್ಕಾಗಿ ಅಗೆತ ಮಾಡಿದ್ದರು. ಆದರೆ ಬಳಿಕ ಜಲ್ಲಿಕಲ್ಲು ಕೂಡ ಹಾಕಿಲ್ಲ. ಆದ್ದರಿಂದ ಈ ಬಾರಿಯಾದರೂ ರಸ್ತೆಗೆ ಮೋಕ್ಷ ಕಲ್ಪಿಸಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಬರೀ ಆಶ್ವಾಸನೆ
ರಸ್ತೆಯಲ್ಲಿ ಹಲವಾರು ಬಾರಿ ವಾಹನಗಳು ಸ್ಕಿಡ್ ಆಗಿ ಸವಾರರು ನೆಲಕ್ಕೆ ಉರುಳಿದ್ದಾರೆ. ಜನಪ್ರತಿನಿಧಿಗಳು ಬರೀ ಆಶ್ವಾಸನೆ ನೀಡುತ್ತಿದ್ದಾರೆ.
– ಗುರುಪ್ರಸಾದ್ ಭಟ್,
ಸ್ಥಳಿಯರು
ಪರಿಶೀಲನೆ ನಡೆಸಲಾಗುವುದು
ಈ ರಸ್ತೆ ದುರಸ್ತಿಗೆ ಕೂಡಲೇ ಕ್ರಮಕೈಗೊಳ್ಳಲಾಗುವುದು. ಕಾಮಗಾರಿ ನಿಲುಗಡೆಗೊಂಡ ಬಗ್ಗೆ ಪರಿಶೀಲನೆ ನಡೆಸಲಾಗುವುದು.
– ಶುಭಾ ಪಿ.ಶೆಟ್ಟಿ,
ಮೂಂಡ್ಕೂರು ಗ್ರಾ.ಪಂ. ಅಧ್ಯಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ