ಹೊಸ ತಾ| ಕೇಂದ್ರಗಳಲ್ಲಿ ನಗರಾಡಳಿತ ಸಂಸ್ಥೆ

ಬೈಂದೂರು, ಸೋಮೇಶ್ವರ ಅಧಿಸೂಚನೆ; ಬ್ರಹ್ಮಾವರ, ಹೆಬ್ರಿ, ಕಡಬ ಪ್ರಸ್ತಾವನೆ

Team Udayavani, Mar 5, 2020, 6:25 AM IST

ಹೊಸ ತಾ| ಕೇಂದ್ರಗಳಲ್ಲಿ ನಗರಾಡಳಿತ ಸಂಸ್ಥೆ

ಉಡುಪಿ: ನೂತನವಾಗಿ ನಿರ್ಮಾಣಗೊಂಡ ತಾಲೂಕಿನ ಕೇಂದ್ರ ಪ್ರದೇಶವನ್ನು ಪಟ್ಟಣ ಪಂಚಾಯತ್‌ ಅಥವಾ ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ತಾಲೂಕು ಮತ್ತು ಜಿಲ್ಲಾಡಳಿತಗಳು ಅಗತ್ಯ ಕಡತ ತಯಾರಿಯಲ್ಲಿ ತೊಡಗಿವೆ. ನಗರ ಸಂಸ್ಥೆಗಳನ್ನು ರೂಪಿಸುವಾಗ ಒಂದುಗೂಡಿಸುವ ಗ್ರಾ.ಪಂ.ಗಳ ಒಟ್ಟು ಜನಸಂಖ್ಯೆ 20,000ಕ್ಕಿಂತ ಕಡಿಮೆ ಇದ್ದರೆ ಅದನ್ನು ಪಟ್ಟಣ ಪಂಚಾಯತ್‌ ಆಗಿಯೂ ಅದಕ್ಕಿಂತ ಹೆಚ್ಚಿಗೆ ಇದ್ದರೆ ಪುರಸಭೆಯನ್ನಾಗಿಯೂ ರಚಿಸಲಾಗುತ್ತಿದೆ. ಇದರಂತೆ ಬೈಂದೂರು ಮತ್ತು ಹೆಬ್ರಿಯನ್ನು ಪ.ಪಂ., ಬ್ರಹ್ಮಾವರ ವನ್ನು ಪುರಸಭೆಯಾಗಿ ಮಾರ್ಪಡಿಸುವ ಪ್ರಸ್ತಾವವಿದೆ.

ಬೈಂದೂರು ತಾಲೂಕಿನ ಬೈಂದೂರಿನ ಆಸುಪಾಸಿನಲ್ಲಿ ಬೈಂದೂರು- ತಗ್ಗರ್ಸೆ ಗ್ರಾಮಗಳು ಸೇರಿ ಬೈಂದೂರು ಗ್ರಾ.ಪಂ., ಯಡ್ತರೆ ಗ್ರಾ.ಪಂ., ಪಡುವರಿ ಗ್ರಾ.ಪಂ.ಗಳಿದ್ದವು. ಈಗ ಇವು ಮೂರನ್ನೂ ಸೇರಿಸಿ ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಲು ಸರಕಾರದ ಅಧಿಸೂಚನೆ ಹೊರಟಿದ್ದು ಆಕ್ಷೇಪಣೆ ಕೋರಿದ ಅವಧಿಯೂ ಮುಗಿದಿದೆ. 1997ರಲ್ಲಿ ಬೈಂದೂರು ಪ.ಪಂ. ಆಗಿತ್ತು, ಬಳಿಕ ಗ್ರಾ.ಪಂ.ಗಳಾದವು. ಈಗ ಮತ್ತೆ ಪ.ಪಂ. ಆಗುತ್ತಿದೆ.

ಹೊಸ ತಾಲೂಕುಗಳಲ್ಲಿ ಒಂದಾದ ಬ್ರಹ್ಮಾವರದ ಆಸುಪಾಸಿನ ವಾರಂಬಳ್ಳಿ, ಚಾಂತಾರು (ಚಾಂತಾರು- ಹೇರೂರು ಗ್ರಾಮ), ಹಂದಾಡಿ (ಹಂದಾಡಿ, ಮಟಪಾಡಿ, ಕುಮ್ರಗೋಡು ಗ್ರಾಮ), ಹಾರಾಡಿ (ಹಾರಾಡಿ, ಬೈಕಾಡಿ ಗ್ರಾಮ) ಗ್ರಾ.ಪಂ.ಗಳನ್ನು ಸೇರಿಸಿ ಪುರಸಭೆ ಯಾಗಿ ಸೃಜಿಸುವ ಪ್ರಸ್ತಾವವಿದೆ. ಈ ಮುನ್ನ ಇದಕ್ಕೆ ಆರೂರು ಮತ್ತು ನೀಲಾವರ ಗ್ರಾಮಗಳನ್ನು ಸೇರಿಸುವ ಪ್ರಸ್ತಾವವಿದ್ದರೂ ತೀರಾ ಗ್ರಾಮಾಂತರ ಮತ್ತು ಬ್ರಹ್ಮಾವರಕ್ಕೆ ದೂರ ಇರುವ ಕಾರಣ ಇದನ್ನು ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.

ಕಾರ್ಕಳದಿಂದ ಬೇರ್ಪಟ್ಟ ತಾಲೂಕು ಹೆಬ್ರಿ. ಇಲ್ಲಿ ಹೆಬ್ರಿ ಮತ್ತು ಚಾರ ಗ್ರಾ.ಪಂ.ಗಳನ್ನು ಒಂದು ಸೇರಿಸಿ ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದೆ. ಈಗಾಗಲೇ ಅಸ್ತಿತ್ವದಲ್ಲಿರುವ ಕಾಪು ಪುರಸಭೆಗೆ ಬಡಾ ಗ್ರಾ.ಪಂ.ನ್ನು ಸೇರಿಸುವ ಬೇಡಿಕೆಯೂ ಪ್ರಸ್ತಾವನೆಯಲ್ಲಿದೆ.

ದ.ಕ. ಜಿಲ್ಲೆಯ ಸೋಮೇಶ್ವರದಲ್ಲಿ ಈಗಾಗಲೇ ಪ.ಪಂ. ಆಗಿ ಅಧಿಸೂಚನೆ ಹೊರಡಿಸಲಾಗಿದೆ. ಕಡಬ ಗ್ರಾ.ಪಂ.ನ ಕಡಬ ಮತ್ತು ಕೋಡಿಂಬಾಳ ಗ್ರಾಮಗಳನ್ನು ಸೇರಿಸಿ ಪ.ಪಂ. ಆಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸರಕಾರದ ಮಟ್ಟದಲ್ಲಿದೆ.

ಹೀಗಾಗಿ ಎಪ್ರಿಲ್‌ ತಿಂಗಳಲ್ಲಿ ಬರುವ ಗ್ರಾ.ಪಂ. ಚುನಾವಣೆಯಲ್ಲಿ ಇದುವರೆಗೆ ಅಧಿಸೂಚನೆ ಹೊರಟ ಗ್ರಾ.ಪಂ.ಗಳಿಗೆ ಚುನಾವಣೆ ನಡೆಯು ತ್ತಿಲ್ಲ. ಪ್ರಸ್ತಾವವಿರುವ ಪ.ಪಂ./ ಪುರಸಭೆ ಗಳನ್ನು ಘೋಷಿಸಿದಲ್ಲಿ ಈ ಗ್ರಾ.ಪಂ.ಗಳಲ್ಲಿಯೂ ಚುನಾವಣೆ ನಡೆಸುವುದಿಲ್ಲ. ಗ್ರಾ.ಪಂ. ಚುನಾವಣೆ ಬಳಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇಲ್ಲಿ ನಡೆಸಲಾಗುವುದು. ಜನಸಂಖ್ಯೆ, ಜನಸಾಂದ್ರತೆ, ಸರ್ವೇ ನಂಬರ್‌, ಭೂನಕಾಶೆ ಇತ್ಯಾದಿ ಮಾಹಿತಿಗಳನ್ನು ಆಯಾ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಸಂಗ್ರಹಿಸಿ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ.

ಹೊಸ ತಾಲೂಕು ಕೇಂದ್ರಗಳ ಕೇಂದ್ರ ಸ್ಥಾನಗಳನ್ನು ನಗರ ಸ್ಥಳೀಯ ಸಂಸ್ಥೆಯಾಗಿ ಮೇಲ್ದರ್ಜೆ ಗೇರಿಸುವ ಪ್ರಸ್ತಾವ ಸರಕಾರದ ಮುಂದಿದ್ದು ಅಗತ್ಯ ಪ್ರಕ್ರಿಯೆಗಳು ನಡೆಯುತ್ತಿವೆ.
– ನಾರಾಯಣ ಗೌಡ, ಪೌರಾಡಳಿತ ಸಚಿವರು

–  ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.