ಉಡುಪಿ ನಗರಸಭೆ ಚುನಾವಣೆ: ಕೈ-ಕಮಲಕ್ಕೆ ಬಂಡಾಯದ ಬಿಸಿ 


Team Udayavani, Aug 24, 2018, 1:50 AM IST

udupi-nagarasabhe-600.jpg

ಉಡುಪಿ: ನಗರಸಭೆ ಚುನಾವಣೆಯ ಅಂತಿಮ ಕಣದ ಚಿತ್ರಣ ಹೊರಬಿದ್ದಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳಿಗೆ ಬಂಡಾಯದ ಬಿಸಿ ತಟ್ಟಿದೆ. ವಳಕಾಡು, ಈಶ್ವರ ನಗರ, ಶೆಟ್ಟಿಬೆಟ್ಟು ವಾರ್ಡ್‌ನಲ್ಲಿ ಬಿಜೆಪಿಗೆ ಹಾಗೂ ಮೂಡಬೆಟ್ಟು ಮತ್ತು ಅಂಬಲಪಾಡಿಯಲ್ಲಿ ಕಾಂಗ್ರೆಸ್‌ಗೆ ಬಂಡಾಯ ಎದುರಾಗಿದೆ.

ಬಿಜೆಪಿಯಿಂದ ಎರಡು ಬಾರಿ ಸದಸ್ಯೆಯಾಗಿರುವ ಹಾಲಿ ಸದಸ್ಯೆ ಗೀತಾ ರವಿ ಶೇಟ್‌ ಅವರು ಒಳಕಾಡಿನಲ್ಲಿ ಬಿಜೆಪಿಯಿಂದ ಅವಕಾಶ ಸಿಗದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅಂತೆಯೇ ಈ ಹಿಂದೆ (ಕಳೆದ ಬಾರಿ ಅಲ್ಲ) ನಗರಸಭಾ ಸದಸ್ಯರಾಗಿದ್ದ ಗಣಪತಿ ಶೆಟ್ಟಿಗಾರ್‌ ಅವರು ಕಾಂಗ್ರೆಸ್‌ ಜತೆ ಮುನಿಸಿಕೊಂಡು ಮೂಡಬೆಟ್ಟು ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ. ಅಂಬಲಪಾಡಿಯಲ್ಲಿ ಕಾಂಗ್ರೆಸ್‌ ಮುಂದಾಳು ಕೆ. ಸುರೇಂದ್ರ ಶೆಟ್ಟಿ ಪಕ್ಷೇತರನಾಗಿ ಕಣಕ್ಕಿಳಿದಿದ್ದಾರೆ. ಈಶ್ವರ ನಗರದಲ್ಲಿ ಬಿಜೆಪಿಯ ಜಯರಾಮ ಶೆಟ್ಟಿಗಾರ್‌, ಕಕ್ಕುಂಜೆಯಲ್ಲಿ ಬಿಜೆಪಿಯ ವತ್ಸಲಾ ನಾಗೇಶ್‌ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿದ್ದಾರೆ.

ಗಣಪತಿ ಶೆಟ್ಟಿಗಾರ್‌ ಅವರು 1997ರಲ್ಲಿ ಮೂಡಬೆಟ್ಟು ವಾರ್ಡ್‌ನಲ್ಲಿ ಪಕ್ಷೇತರರಾಗಿ ಆಯ್ಕೆಯಾಗಿದ್ದರು. ಅನಂತರ ಕಾಂಗ್ರೆಸ್‌ ಮುಖಂಡರ ಮನವಿ ಮೇರೆಗೆ ಕಾಂಗ್ರೆಸ್‌ ಸೇರ್ಪಡೆಯಾಗಿ ನಾಮನಿರ್ದೇಶಿತ ಸದಸ್ಯನಾಗಿಯೂ ಆಯ್ಕೆಯಾಗಿದ್ದರು. ಇವರ ಪತ್ನಿ ಜಾನಕಿ ಗಣಪತಿ ಶೆಟ್ಟಿಗಾರ್‌ ಮೂಡಬೆಟ್ಟಿನಲ್ಲಿ ಒಮ್ಮೆ ಪಕ್ಷೇತರರಾಗಿ, ಕೊಡಂಕೂರಿನಲ್ಲಿ 2 ಬಾರಿ ಕಾಂಗ್ರೆಸ್‌ನಿಂದ ನಗರಸಭಾ ಸದಸ್ಯೆಯಾಗಿ ಆಯ್ಕೆಯಾಗಿದ್ದರು. ಬಿಜೆಪಿಯ ಜಯರಾಮ ಶೆಟ್ಟಿಗಾರ್‌ ಮತ್ತು ಕಾಂಗ್ರೆಸ್‌ನ ಸುರೇಂದ್ರ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರಾಗಿ ದುಡಿದವರು. 

ಮನವೊಲಿಕೆ ವಿಫ‌ಲ
ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ತಮ್ಮ ಬಂಡಾಯ ಅಭ್ಯರ್ಥಿಗಳ ಮನವೊಲಿಕೆಗೆ ನಡೆಸಿರುವ ಕಸರತ್ತು ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ. ಕಕ್ಕುಂಜೆಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಹಾಲಿ ಸದಸ್ಯೆ ಶೋಭಾ ಕಕ್ಕುಂಜೆ ಅವರನ್ನು ಮಾತ್ರ ಮನವೊಲಿಸುವಲ್ಲಿ ಕಾಂಗ್ರೆಸ್‌ ಸಫ‌ಲವಾಗಿದೆ. ಅಂಬಲಪಾಡಿಯಲ್ಲಿ ಸುರೇಂದ್ರ ಶೆಟ್ಟಿ ಅವರ ನಾಮಪತ್ರ ವಾಪಸ್‌ ಪಡೆದುಕೊಳ್ಳಲು ನಡೆಸಿದ ಕಾಂಗ್ರೆಸ್‌ ಯತ್ನ ಫ‌ಲ ನೀಡಿಲ್ಲ. ಬಿಜೆಪಿ ಕೂಡ ಬಂಡಾಯ ಶಮನಕ್ಕೆ ಒಂದು ಹಂತದ ಪ್ರಯತ್ನ ನಡೆಸಿ ವಿಫ‌ಲವಾಗಿದೆ. ಬಂಡಾಯ ಅಭ್ಯರ್ಥಿಗಳಿಂದ ಹೊಡೆತ ಬೀಳದು ಎಂಬುದು ಪಕ್ಷದ ಮುಖಂಡರ ಹೇಳಿಕೆ. ಗೆದ್ದೇ ಗೆಲ್ಲುವೆವು ಎಂಬ ವಿಶ್ವಾಸ ಬಂಡಾಯ ಅಭ್ಯರ್ಥಿಗಳದ್ದು.

ಬಿಜೆಪಿಯಿಂದ ಓರ್ವ ಹಾಲಿ ಮಹಿಳಾ ಸದಸ್ಯೆ
ಪ್ರಸ್ತುತ ಸದಸ್ಯೆಯಾಗಿರುವವರ ಪೈಕಿ ಈ ಬಾರಿ ಪರ್ಕಳದ ಸುಮಿತ್ರಾ ನಾಯಕ್‌ ಮಾತ್ರ ಸ್ಪರ್ಧಿಸುತ್ತಿದ್ದಾರೆ. ಉಳಿದಂತೆ ಬಿಜೆಪಿಯ ಮಹಿಳಾ ಅಭ್ಯರ್ಥಿಗಳು ಹೊಸಬರು. ನಿಟ್ಟೂರಿನಲ್ಲಿ ಈ ಬಾರಿ ಹಿಂದುಳಿದ ವರ್ಗ ‘ಎ’ ಮೀಸಲಾತಿ ನಿಗದಿಯಾಗಿರುವುದರಿಂದ ಇಲ್ಲಿ ಸದಸ್ಯೆಯಾಗಿದ್ದ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಅವರಿಗೆ ಅವಕಾಶ ತಪ್ಪಿ ಹೋಗಿದೆ. ಅವರ ಪತಿ ಬಾಲಕೃಷ್ಣ ಶೆಟ್ಟಿ ಅವರಿಗೆ ಕಕ್ಕುಂಜೆಯಲ್ಲಿ ಅವಕಾಶ ನೀಡಲಾಗಿದೆ. ಹಾಲಿ ಸದಸ್ಯ ಹರೀಶ್‌ ರಾಮ್‌ ಬನ್ನಂಜೆ ಅವರ ಪತ್ನಿ ಸವಿತಾ ಹರೀಶ್‌ ರಾಮ್‌ ಬನ್ನಂಜೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇಂದಿರಾನಗರದಲ್ಲಿ ಹಾಲಿ ಕಾಂಗ್ರೆಸ್‌ ಸದಸ್ಯೆ ಹೇಮಲತಾ ಅವರ ಪತಿ ಹಿಲರಿ ಜತ್ತನ್ನ ಅವರಿಗೆ ಅವಕಾಶ ನೀಡಿದೆ. ಕಳೆದ ಬಾರಿ ಕರಂಬಳ್ಳಿ ವಾರ್ಡ್‌ನಿಂದ ಪ್ರತಿನಿಧಿಸಿದ್ದ ಕಾಂಗ್ರೆಸ್‌ನ ಸೆಲಿನಾ ಕರ್ಕಡ ಅವರು ಮೂಡುಪೆರಂಪಳ್ಳಿಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅಜ್ಜರಕಾಡಿನಲ್ಲಿ ಕಳೆದ ಬಾರಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪರಾಭವಗೊಂಡಿದ್ದ ಸುರೇಂದ್ರ ಆಚಾರ್ಯ ಅವರ ಪತ್ನಿ ಸುಮನಾ ಸುರೇಂದ್ರ ಆಚಾರ್ಯ ಅವರು ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ. ನಗರಸಭೆಯ ಅಧ್ಯಕ್ಷೆ ಕಾಂಗ್ರೆಸ್‌ನ ಮೀನಾಕ್ಷಿ ಮಾಧವ ಕೊಡವೂರು ವಾರ್ಡ್‌ನಲ್ಲಿ, ಕಾಂಗ್ರೆಸ್‌ನ ಹಾಲಿ ಸದಸ್ಯೆ ಅಮೃತಾ ಕೃಷ್ಣಮೂರ್ತಿ ಕಿನ್ನಿಮೂಲ್ಕಿ ವಾರ್ಡ್‌ನಿಂದ ಕಣಕ್ಕಿಳಿದಿದ್ದಾರೆ.

ಬಂಡಾಯ ಯಾರು?
ಬಿಜೆಪಿ: ವಳಕಾಡು (ಗೀತಾ ರವಿ ಶೇಟ್‌), ಈಶ್ವರನಗರ (ಜಯರಾಮ ಶೆಟ್ಟಿಗಾರ್‌), ಶೆಟ್ಟಿಬೆಟ್ಟು (ವತ್ಸಲಾ ನಾಗೇಶ್‌).
ಕಾಂಗ್ರೆಸ್‌: ಅಂಬಲಪಾಡಿ (ಸುರೇಂದ್ರ ಶೆಟ್ಟಿ), ಮೂಡಬೆಟ್ಟು (ಗಣಪತಿ ಶೆಟ್ಟಿಗಾರ್‌).

— ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.