ಬ್ರಹ್ಮಾವರದ ಭವಿಷ್ಯಕ್ಕೆ ಪುರಸಭೆ ಅನಿವಾರ್ಯ

ತ್ವರಿತವಾಗಿ ಬೆಳೆಯುತ್ತಿರುವ ನಗರ

Team Udayavani, Jan 15, 2020, 6:36 AM IST

mk-18

ಬ್ರಹ್ಮಾವರ: ಇತ್ತೀಚಿನ ವರ್ಷಗಳಲ್ಲಿ ಬ್ರಹ್ಮಾವರ ಅತ್ಯಂತ ತ್ವರಿತವಾಗಿ ಬೆಳೆಯುತ್ತಿರುವ ನಗರ. ಇಲ್ಲಿ ತ್ಯಾಜ್ಯ ವಿಲೇವಾರಿ, ಕುಡಿಯುವ ನೀರು, ಸಂಪರ್ಕ ರಸ್ತೆಗಳು ಸಮಸ್ಯೆಯಾಗಿ ಕಾಡುತ್ತಿವೆ. ಸಕಾರಾತ್ಮಕ ಅಭಿವೃದ್ಧಿ ದೃಷ್ಟಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರುವುದು ಅನಿವಾರ್ಯವಾಗಿದೆ.

ಬಹು ಬೇಡಿಕೆ
ಚಾಂತಾರು, ವಾರಂಬಳ್ಳಿ, ಹಂದಾಡಿ ಗ್ರಾ.ಪಂ.ಗಳ ಜತೆಗೆ ಪರಿಸರದ ಹಾರಾಡಿ, ಆರೂರು, ನೀಲಾವರ ಪಂಚಾಯತ್‌ಗಳನ್ನು ಸೇರಿಸಿ ಪುರಸಭೆ ರಚಿಸಬೇಕೆಂಬ ಬೇಡಿಕೆ ಬಹಳ ವರ್ಷಗಳಿಂದ ಇದೆ. ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ ಉಡುಪಿ-ಬ್ರಹ್ಮಾವರ ಅವಳಿ ನಗರಗಳಾಗಲಿವೆ ಎಂಬ ಮಾತುಗಳೂ ಇವೆ.

ಕಾಡುವ ಸಮಸ್ಯೆಗಳು
ಬ್ರಹ್ಮಾವರ ಅಭಿವೃದ್ಧಿಯ ನಾಗಾಲೋಟದಲ್ಲಿ ಇರುವಂತೆ ಹಲವು ಸಮಸ್ಯೆಗಳೂ ಬಾಯ್ದೆರೆದಿವೆ. ಪೇಟೆಯಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲ. ಘನ ತಾಜ್ಯ ನಿರ್ವಹಣೆ, ಸಂಪರ್ಕ ರಸ್ತೆಗಳ ಅಭಿವೃದ್ಧಿ ಆಗಿಲ್ಲ. ಬ್ರಹ್ಮಾವರ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಗತ್ಯ. ಆರೂರು, ನೀಲಾವರ ಪಂಚಾಯತ್‌ಗಳನ್ನು ಸೇರಿಸಿಕೊಳ್ಳುವುದರಿಂದ ಇದಕ್ಕೆ ಪೂರಕವಾಗಲಿದೆ. ವಾರಾಹಿ ಯೋಜನೆಯೂ ಇಲ್ಲಿಗೆ ತಲುಪಬೇಕಿದೆ.

ಶೈಕ್ಷಣಿಕ ನಗರಿ
ಈಗಾಗಲೇ ಶೈಕ್ಷಣಿಕ ನಗರಿಯಾಗಿ ಗುರುತಿಸಿಕೊಂಡಿದ್ದು, ಆಂಗ್ಲ ಮಾಧ್ಯಮ ಶಾಲೆಗಳು, 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಸರಕಾರಿ ಬೋರ್ಡ್‌ ಶಾಲೆ ಹೃದಯ ಭಾಗದಲ್ಲಿದೆ.

ಸರಕಾರಿ ಕಚೇರಿಗಳ ತಾಣ
ಮುಖ್ಯವಾಗಿ ವಾರ್ಷಿಕ 12 ಕೋಟಿ ರೂ. ಮಿಕ್ಕಿ ಆದಾಯ ತರುವ ಉಪ ನೋಂದವಣಾಧಿಕಾರಿ ಕಚೇರಿ, ತಹಶೀಲ್ದಾರ್‌ ಕಚೇರಿ, ಉಪ ಖಜಾನೆ ಕಚೇರಿ, ಪೊಲೀಸ್‌ ವೃತ್ತ ನಿರೀಕ್ಷಕರು, ಉಪನಿರೀಕ್ಷಕರ ಕಚೇರಿ, ಮೆಸ್ಕಾಂ, ಪಾಸ್‌ಪೋರ್ಟ್‌ ಕೇಂದ್ರ, ಶಿಕ್ಷಣಾಧಿಕಾರಿ ಕಚೇರಿ, ಸಮುದಾಯ ಆರೋಗ್ಯ ಕೇಂದ್ರ, ಖಾಸಗಿ ಆಸ್ಪತ್ರೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳು, 20ಕ್ಕೂ ಹೆಚ್ಚು ಸಹಕಾರಿ ಸಂಘಗಳನ್ನು ಹೊಂದಿದೆ. ಗಾಂಧಿ ಮೈದಾನ ಕ್ರೀಡಾಂಗಣ ಅಭಿವೃದ್ಧಿ ಹಂತದಲ್ಲಿದೆ. ಮಿನಿ ವಿಧಾನ ಸೌಧಕ್ಕೆ ಶಂಕುಸ್ಥಾಪನೆ ನೆರವೇರಿದ್ದು, ತಾಲೂಕಿಗೆ ಇನ್ನಷ್ಟು ಇಲಾಖೆಗಳು ಬರಲಿವೆ. ಕೃಷಿ ವಿಜ್ಞಾನ ಕೇಂದ್ರ, ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಡಿಪ್ಲೊಮಾ ಕಾಲೇಜು ಕಾರ್ಯಾಚರಿಸುತ್ತಿದ್ದು, ಕೃಷಿ ಕಾಲೇಜಿಗೆ, ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಬೇಡಿಕೆ ಇದೆ. ಆಡಳಿತಾತ್ಮಕ ಬೆಳವಣಿಗೆಯಾಗಿ ಪುರಸಭೆ ಅವಶ್ಯ.

ಪಟ್ಟಣವಾಗಿ ಬೆಳವಣಿಗೆ
ಚಾಂತಾರು ಗ್ರಾಮವೊಂದರಲ್ಲೇ 10ಕ್ಕೂ ಹೆಚ್ಚು ವಸತಿ ಸಮುಚ್ಚಯಗಳಿವೆ. ವಾರಂಬಳ್ಳಿ, ಹಂದಾಡಿಯಲ್ಲಿಯೂ ಹಲವು ವಸತಿ ಕಟ್ಟಡಗಳಿವೆ. ಇದರ ಜತೆಗೆ ವಾಣಿಜ್ಯ ಸಂಕೀರ್ಣಗಳು, ಸಿಟಿ ಸೆಂಟರ್‌, ಹತ್ತಾರು ವಸತಿ ಲೇಔಟ್‌, ಧಾರ್ಮಿಕ ಕೇಂದ್ರಗಳಿವೆ. ಹೃದಯ ಭಾಗದ ಇಂದಿರಾನಗರದಲ್ಲಿ 600ಕ್ಕೂ ಮಿಕ್ಕಿ ಮನೆಗಳಿವೆ. ಘನ, ದ್ರವ ತ್ಯಾಜ್ಯ ವಿಲೇವಾರಿ ನಿಟ್ಟಿನಲ್ಲಿ ಪುರಸಭೆ ರಚನೆ ಬಹಳಷ್ಟು ಪ್ರಯೋಜನಕಾರಿಯಾಗಲಿದೆ. ಅಲ್ಲದೆ ಬ್ರಹ್ಮಾವರ ಪೇಟೆಯನ್ನು ಮೂರು ಪಂಚಾಯತ್‌ಗಳು ಹಂಚಿಕೊಂಡಿದ್ದು, ಪುರಸಭೆಯಿಂದ ಗಡಿ ಸಮಸ್ಯೆಯೂ ನಿವಾರಣೆಯಾಗಲಿದೆ.

ವಿಶೇಷ ಪ್ರಯತ್ನ
ಪುರಸಭೆ ರಚಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಸದರಿಗೆ ಈಗಾಗಲೇ ಮನವಿ ನೀಡಿದ್ದೇವೆ. ಜ. 24ರಂದು ಬ್ರಹ್ಮಾವರದ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಿನಂತಿ ಮಾಡಲಿದ್ದೇವೆ. ಈ ಕುರಿತು ವಿಶೇಷ ಪ್ರಯತ್ನದಲ್ಲಿದ್ದೇವೆ.
-ಕೆ. ರಘುಪತಿ ಭಟ್‌, ಶಾಸಕರು, ಉಡುಪಿ

ಅನಿವಾರ್ಯವಿದೆ
ಎಲ್ಲಾ ರೀತಿಯಲ್ಲಿ ಅರ್ಹತೆ ಇದ್ದರೂ ಕಳೆದ ಬಾರಿ ಪುರಸಭೆ ಕೈತಪ್ಪಿತ್ತು. ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಈಗ ಪುರಸಭೆ ಅನಿವಾರ್ಯ. ಎಲ್ಲ ಜನಪ್ರತಿನಿಧಿಗಳನ್ನು, ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಪ್ರಯತ್ನದಲ್ಲಿದ್ದೇವೆ.
– ಬಾರಕೂರು ಸತೀಶ್‌ ಪೂಜಾರಿ, ಅಧ್ಯಕ್ಷರು, ತಾಲೂಕು ಹೋರಾಟ ಸಮಿತಿ

ಮೇಲ್ದರ್ಜೆಗೇರಬೇಕು
ಸುಮಾರು 25 ವರ್ಷಗಳಿಂದ, ಅದರಲ್ಲೂ 10 ವರ್ಷಗಳಿಂದ ಬ್ರಹ್ಮಾವರ ಆಮೂಲಾಗ್ರ ಬದಲಾವಣೆ ಕಂಡಿದೆ. ಹೊಸ ಕಟ್ಟಡ, ವ್ಯವಸ್ಥೆಗಳು ಬಂದಂತೆ ತ್ಯಾಜ್ಯ ವಿಲೇವಾರಿ ದೊಡ್ಡ ಸಮಸ್ಯೆಯಾಗಿದೆ. ಎಲ್ಲ ದೃಷ್ಟಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಬೇಕು.
-ಎಚ್‌. ಸುದರ್ಶನ ಹೆಗ್ಡೆ, ಉದ್ಯಮಿ ಬ್ರಹ್ಮಾವರ

ಎಲ್ಲ ಅರ್ಹತೆಗಳಿವೆ
ತಾಲೂಕು ಕೇಂದ್ರವಾದ ಬ್ರಹ್ಮಾವರವು ಪುರಸಭೆಯಾಗಿ ಮೇಲ್ದರ್ಜೆಗೇರಲು ಎಲ್ಲ ಅರ್ಹತೆಗಳಿವೆ. ನಾಲ್ಕು ಪಂಚಾಯತ್‌ಗಳ ಸಂಖ್ಯೆಯೇ ಜನಸಂಖ್ಯೆಯೇ 31,203 ಮೀರಿರುವುದರಿಂದ ಈ ಆಧಾರದಲ್ಲಿಯೂ ಪುರಸಭೆಗೆ ಸೂಕ್ತವಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.