ಮುನಿಯಾಲು: ಪದವಿ ಕಾಲೇಜು ಕಟ್ಟಡ ಉದ್ಘಾಟನೆ


Team Udayavani, Feb 10, 2019, 12:35 AM IST

0902ajke02.jpg

ಅಜೆಕಾರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣದ ಅನಂತರ ವಿದ್ಯಾಭ್ಯಾಸವನ್ನು ಮುಂದುವರಿಸಲು ಅಸಾಧ್ಯವಾಗಿ ಶಿಕ್ಷಣ ಮೊಟಕುಗೊಳಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗವಾದ ಮುನಿಯಾಲುವಿಗೆ ಪದವಿ ಕಾಲೇಜನ್ನು ಒದಗಿಸಲಾಗಿದ್ದು ಈ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಸುನಿಲ್‌ ಕುಮಾರ್‌ ಹೇಳಿದರು.

ಮುನಿಯಾಲು ಚಟ್ಕಲ್‌ಪಾದೆ ಬಳಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜಿಗೆ ಮೂಲ ಸೌಕರ್ಯ ಒದಗಿಸುವ ಜತೆಗೆ ಮುಂದಿನ ವರ್ಷದಲ್ಲಿ ಸುಮಾರು 2.50 ಕೋಟಿ ವೆಚ್ಚದಲ್ಲಿ ಮುಂದುವರಿದ ಕಾಮಗಾರಿ ನಡೆಸಲಾಗುವುದು. ತಾಲೂಕಿನಾದ್ಯಂತ ದಾಖಲೆಯ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದ್ದು ಮುಂದಿನ ಆರ್ಥಿಕ ವರ್ಷದಲ್ಲಿ ಮುನಿಯಾಲು ಚಟ್ಕಲ್‌ಪಾದೆಯಿಂದ ಕಾಡುಹೊಳೆ ಸೇತುವೆವರೆಗೆ ರಸ್ತೆಯನ್ನು ಅಗಲಗೊಳಿಸಿ ಚತುಷ್ಪಥ ಕಾಮಗಾರಿ ನಡೆಸಲಾಗುವುದು ಎಂದರು.

ಅಧ್ಯಕ್ಷತೆಯನ್ನು ವರಂಗ ಗ್ರಾ.ಪಂ. ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ ವಹಿಸಿದ್ದರು.ಈ ಸಂದರ್ಭ ಸುನಿಲ್‌ ಕುಮಾರ್‌ ಅವರನ್ನು ಗ್ರಾಮಸ್ಥರ ಪರವಾಗಿ ಸಮ್ಮಾನಿಸಲಾಯಿತು.ಸಭಾ ಕಾರ್ಯಕ್ರಮಕ್ಕೂ ಮುನ್ನ ದಿನೇಶ್‌ ಪೈ ಅವರ ನೇತೃತ್ವದಲ್ಲಿ ಅರ್ಚಕ ಬಂಗಾರ್‌ ಭಟ್ ಅವರು ವಿವಿಧ ಧಾರ್ಮಿಕ ಕಾರ್ಯಗಳನ್ನು ಕಟ್ಟಡದಲ್ಲಿ ನೆರವೇರಿಸಿದರು.

ಜಿ.ಪಂ. ಸದಸ್ಯೆ ಜ್ಯೋತಿಹರೀಶ್‌, ಕಾರ್ಕಳ ಎಪಿಎಂಸಿ ನಿಕಟಪೂರ್ವ ಅಧ್ಯಕ್ಷ ಮುಟ್ಲುಪಾಡಿ ಸತೀಶ್‌ ಶೆಟ್ಟಿ, ತಾ.ಪಂ. ಅಧ್ಯಕ್ಷರಾದ ಮಾಲಿನಿ ಜೆ. ಶೆಟ್ಟಿ, ಸದಸ್ಯರಾದ ಸುಲತಾ ನಾಯ್ಕ, ರಮೇಶ್‌ ಕುಮಾರ್‌, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಗೋಪಿನಾಥ್‌ ಭಟ್, ಸದಸ್ಯರಾದ ದಿನೇಶ್‌ ಪೈ, ಗುತ್ತಿಗೆದಾರರಾದ ಉದಯ್‌ ಕುಮಾರ್‌ ಶೆಟ್ಟಿ ಮುನಿಯಾಲು, ಮುನಿಯಾಲು ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾದ ಶ್ರೀಧರ್‌ ಪೈ, ಉದ್ಯಮಿಗಳಾದ ಶಂಕರ್‌ ಶೆಟ್ಟಿ, ಮಂಜುನಾಥ್‌ ಕೆ., ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಬಾಯರಿ ಉಪಸ್ಥಿತರಿದ್ದರು

ಗೋಪಿನಾಥ್‌ ಭಟ್ ಸ್ವಾಗತಿಸಿದರು. ವರುಣ್‌ ಭಟ್ ಪ್ರಾರ್ಥಿಸಿದರು, ಸೀತಾರಾಮ್‌ ಹೆಬ್ಟಾರ್‌ ಹಾಗೂ ಸುಹಾಸ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದಿನೇಶ್‌ ಪೈ ಪ್ರಸ್ತಾವನೆಗೈದರು. ರತ್ನಾಕರ್‌ ಪೂಜಾರಿ ವಂದಿಸಿದರು.

ಮುನಿಯಾಲುವಿನಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗಿದ್ದು ಸುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳ ಬೇಕಾದರೆ ಸರಕಾರಿ ಬಸ್ಸಿನ ವ್ಯವಸ್ಥೆ ಅತ್ಯಗತ್ಯ ಈ ನಿಟ್ಟಿನಲ್ಲಿ ಶಾಸಕರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸತೀಶ್‌ ಶೆಟ್ಟಿ ಮುಟ್ಲುಪಾಡಿ ಮನವಿ ಮಾಡಿದರು. ಕೆರ್ವಾಶೆ, ಶಿರ್ಲಾಲು, ಅಂಡಾರು, ಮುನಿಯಾಲು ಮಾರ್ಗವಾಗಿ ಹೆಬ್ರಿಗೆ ಹಾಗೂ ಕಬ್ಬಿನಾಲೆ, ಮುನಿಯಾಲು ಮಾರ್ಗವಾಗಿ ಪಡುಕುಡೂರು ಸಂಪರ್ಕಿಸುವಂತೆ ಸರಕಾರಿ ಬಸ್ಸಿನ ವ್ಯವಸ್ಥೆ ಆಗಬೇಕಿದೆ ಎಂದು ಹೇಳಿದರು.

ಸರಕಾರಿ ಬಸ್‌ಗೆ ಮನವಿ
ಮುನಿಯಾಲುವಿನಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗಿದ್ದು ಸುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳ ಬೇಕಾದರೆ ಸರಕಾರಿ ಬಸ್ಸಿನ ವ್ಯವಸ್ಥೆ ಅತ್ಯಗತ್ಯ ಈ ನಿಟ್ಟಿನಲ್ಲಿ ಶಾಸಕರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸತೀಶ್‌ ಶೆಟ್ಟಿ ಮುಟ್ಲುಪಾಡಿ ಮನವಿ ಮಾಡಿದರು. ಕೆರ್ವಾಶೆ, ಶಿರ್ಲಾಲು, ಅಂಡಾರು, ಮುನಿಯಾಲು ಮಾರ್ಗವಾಗಿ ಹೆಬ್ರಿಗೆ ಹಾಗೂ ಕಬ್ಬಿನಾಲೆ, ಮುನಿಯಾಲು ಮಾರ್ಗವಾಗಿ ಪಡುಕುಡೂರು ಸಂಪರ್ಕಿಸುವಂತೆ ಸರಕಾರಿ ಬಸ್ಸಿನ ವ್ಯವಸ್ಥೆ ಆಗಬೇಕಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.