ಉಡುಪಿ: ಒಂಟಿ ವೃದ್ಧೆಯ ಕೊಲೆ


Team Udayavani, Jul 7, 2019, 11:26 AM IST

udupi-house

ಉಡುಪಿ: ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯನ್ನು ಕೊಂದು ಚಿನ್ನಾಭರಣ ದೋಚಿದ ಘಟನೆ ಠಾಣಾ ವ್ಯಾಪ್ತಿಯ ಪುತ್ತೂರು ಸುಬ್ರಹ್ಮಣ್ಯ ನಗರದಲ್ಲಿ ಸಂಭವಿಸಿದೆ.

ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ 5ನೇ ಕ್ರಾಸ್‌ ನಿವಾಸಿ ರತ್ನಾವತಿ ಜಿ.ಶೆಟ್ಟಿ (80) ಕೊಲೆಯಾದವರು. ಈ ದುಷ್ಕೃತ್ಯ ಶುಕ್ರವಾರ ತಡರಾತ್ರಿ ಬೆಳಕಿಗೆ ಬಂದಿದೆ. ಮೃತದೇಹ ಕೊಳೆತಿದ್ದು, ನಾಲ್ಕು ದಿನಗಳ ಹಿಂದೆಯೇ ಘಟನೆ ನಡೆದಿರ ಬಹುದೆಂದು ಪೊಲೀಸರು ಶಂಕಿಸಿದ್ದಾರೆ.

“ಜು.2ರ ಅಪರಾಹ್ನ 3 ಗಂಟೆಯಿಂದ ಜು.5ರ ರಾತ್ರಿ 8.30ರ ನಡುವೆ ಕೊಲೆ ನಡೆದಿರಬಹುದು’ ಎಂದು ರತ್ನಾವತಿ ಅವರ ಪುತ್ರಿ ಸುಪ್ರಭಾ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಬೆಡ್‌ರೂಮ್‌ನಲ್ಲಿದ್ದ ರತ್ನಾವತಿ ಶೆಟ್ಟಿ ಅವರನ್ನು ಕೊಲೆ ಮಾಡಿ ಅವರ ಮೈಮೇಲಿದ್ದ ಸರ, ಬಳೆ, ಬೆಂಡೋಲೆಗಳನ್ನು ದೋಚಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕಳವಾಗಿರುವ ಸೊತ್ತುಗಳ ಮಾಹಿತಿ ಸಿಕ್ಕಿಲ್ಲ.

9 ವರ್ಷಗಳಿಂದ ಒಂಟಿ ಜೀವನ
ರತ್ನಾವತಿ ಅವರು ನಿವೃತ್ತ ಶಿಕ್ಷಕ ದಿ| ಗೋಪಾಲ ಶೆಟ್ಟಿ ಅವರ ಪತ್ನಿ. ಗೋಪಾಲ ಶೆಟ್ಟಿ 2010ರಲ್ಲಿ ಮೃತಪಟ್ಟಿದ್ದರು. ಬಳಿಕ ಇವರು ಒಂಟಿಯಾಗಿದ್ದರು. ಇವರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಓರ್ವ ಪುತ್ರ ಬೆಂಗಳೂರಿನಲ್ಲಿ ಹಾಗೂ ಇನ್ನೋರ್ವ ಮುಂಬಯಿಯಲ್ಲಿದ್ದಾರೆ. ಓರ್ವ ಪುತ್ರಿ ಉಡುಪಿ ಅಂಬಲಪಾಡಿಯಲ್ಲಿ ಹಾಗೂ ಇನ್ನೊಬ್ಬರು ಕೊರಂಗ್ರಪಾಡಿ ಯಲ್ಲಿದ್ದಾರೆ. ಮಕ್ಕಳ ಮನೆಗೆ ಹೋಗಲು ಇವರು ಒಪ್ಪುತ್ತಿರಲಿಲ್ಲ. ಮಕ್ಕಳು ಆಗಾಗ ಬಂದು ಹೋಗುತ್ತಿದ್ದರು. ಶುಕ್ರವಾರ ರಾತ್ರಿ ಪಕ್ಕದ ಮನೆಯವರಿಗೆ ವಿಪರೀತ ವಾಸನೆ ಬಂದ ಕಾರ ಣ ರತ್ನಾವತಿಯ ಸಂಬಂಧಿಕರಿಗೆ ತಿಳಿಸಲಾಗಿತ್ತು.

ಬಾಡಿಗೆ ಮನೆ ನಿರ್ವಹಣೆ
ಮನೆ ಹಿಂಭಾಗದಲ್ಲಿ 4 ಸಣ್ಣ ಬಾಡಿಗೆ ಕೋಣೆಗಳಿವೆ. ಇದರ ವ್ಯವಹಾರವನ್ನು ರತ್ನಾವತಿಯೇ ನೋಡಿಕೊಳ್ಳುತ್ತಿದ್ದರು.

ಕತ್ತಿ ಪತ್ತೆ
ಮೃತದೇಹ ಬೆಡ್‌ರೂಮ್‌ನ ಮಂಚದ ಮೇಲಿತ್ತು. ಮನೆಯ ಟಾಯ್ಲೆಟ್‌ನಲ್ಲಿದ್ದ ನೀರು ತುಂಬಿದ ಬಕೆಟ್‌ನಲ್ಲಿ ಕತ್ತಿಯೊಂದು ಪತ್ತೆಯಾಗಿದ್ದು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಇದನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಆದರೆ ಕೊಲೆ ಹೇಗೆ ನಡೆದಿದೆ ಎಂಬುದನ್ನು ಪತ್ತೆ ಹಚ್ಚಲು ಇದುವರೆಗೆ ಸಾಧ್ಯವಾಗಿಲ್ಲ. ದೇಹ ಪೂರ್ಣ ಕೊಳೆತ ಸ್ಥಿತಿಯಲ್ಲಿರುವುದರಿಂದ ಮರಣೋತ್ತರ ಪರೀಕ್ಷಾ ವರದಿ ಕೈ ಸೇರಿದ ಬಳಿಕವೇ ಈ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಎಸ್‌ಪಿ ನಿಶಾ ಜೇಮ್ಸ್‌, ಶ್ವಾನದಳ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಶುಕ್ರವಾರ ತಡರಾತ್ರಿಯೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಸಾಗಿಸಲು ನೆರವಾದರು.

ಬಾಡಿಗೆಗೆಂದು ಬಂದ ಜೋಡಿಯ ಕೃತ್ಯ?
ಕಳೆದ ಸೋಮವಾರ(ಜು.1)ದಂದು ದಂಪತಿ ಎಂದು ಪರಿಚಯಿಸಿಕೊಂಡು ಬಂದಿದ್ದ ಯುವಜೋಡಿಯೊಂದು ಬಾಡಿಗೆ ಮನೆಯನ್ನು ಪಡೆದುಕೊಂಡಿತ್ತು. ಆ ಜೋಡಿ ಒಂದು ದಿನ ಮಾತ್ರ ಇದ್ದು ಬಳಿಕ ನಾಪತ್ತೆಯಾಗಿದ್ದರು. ಹಾಗಾಗಿ ಅವರೇ ಈ ಕೃತ್ಯ ನಡೆಸಿರಬಹುದು ಎಂಬ ಶಂಕೆ ಬಲವಾಗಿದೆ. ಆ ಜೋಡಿ ಸೋಮವಾರ ಮಧ್ಯಾಹ್ನ ವೇಳೆಗೆ ಆಟೋರಿಕ್ಷಾದಲ್ಲಿ ಬಂದು ರತ್ನಾವತಿ ಜತೆ ತುಂಬಾ ಹೊತ್ತು ಮಾತನಾಡಿ ವಾಪಸಾಗಿದ್ದರು. ಅನಂತರ ಅದೇ ರಿಕ್ಷಾದಲ್ಲಿ ಅಪರಾಹ್ನ ವಾಪಸ್‌ ಬಂದಿದ್ದರು.  ಮಂಗಳವಾರ ಯುವಕ ಆ ಪರಿಸರದವರಲ್ಲಿ “ನಾವು ಇಲ್ಲಿ ಬಾಡಿಗೆ ಮನೆ ಪಡೆದು ಕೊಂಡಿದ್ದೇವೆ. ನನಗೆ ಕೆಲಸವಿದ್ದರೆ ತಿಳಿಸಿ’ ಎಂದಿದ್ದ. ಅನಂತರ ಪತ್ತೆಯಾಗಿಲ್ಲ. ಇನ್ನುಳಿದ ಎರಡು ಬಾಡಿಗೆ ಕೋಣೆಗಳಲ್ಲಿ ಇಬ್ಬರು ವಾಸವಾಗಿದ್ದರು. ಅವರು ಕೆಲವು ದಿನಗಳ ಹಿಂದೆ ಬಾಡಿಗೆ ಕೋಣೆ ಬಿಟ್ಟು ಹೊರ ಹೋಗಿದ್ದರು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.