ಕೊಲೆಯತ್ನ, ದರೋಡೆ: ಜೀವಾವಧಿ ಶಿಕ್ಷೆ


Team Udayavani, Apr 25, 2018, 12:41 PM IST

jail.jpg

ಕುಂದಾಪುರ:  ತಾಲೂಕಿನ ಕೆದೂರು ಸಮೀಪದ ಕೊರ್ಗಿಯ ಹೊಸ್ಮಠ ಗ್ರಾಮದಲ್ಲಿ ಎರಡೂವರೆ ವರ್ಷಗಳ ಹಿಂದೆ ತನ್ನ ಅಜ್ಜಿ ಮನೆಗೆ ಪ್ರವೇಶಿಸಿ ಕೊಲೆ ಯತ್ನ ನಡೆಸಿ, ದರೋಡೆ ಮಾಡಿದ್ದ   ರಂಜಿತ್‌ ಶೆಟ್ಟಿಗೆ ಮಂಗಳವಾರ ಇಲ್ಲಿನ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 

ಕುಂದಾಪುರದ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾ ಲಯದ ನ್ಯಾಯಾಧೀಶ ಎಂ. ಪ್ರಕಾಶ್‌ ಖಂಡೇರಿ ಅವರು ತೀರ್ಪು ಪ್ರಕಟಿಸಿದ್ದು ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಸಂತ್ರಸ್ತರ ಪರ ವಾದ ಮಂಡಿಸಿದ್ದರು.  

ಘಟನೆ ವಿವರ
ಕೊರ್ಗಿಯ ಹೊಸ್ಮಠc ಗ್ರಾಮದ ಮೆಕ್ಕೆಮನೆ ಕುಷ್ಟಪ್ಪ ಶೆಟ್ಟಿ ಅವರ ಸಂಬಂಧಿಯೇ ಆದ  ರಂಜಿತ್‌ ಶೆಟ್ಟಿ  2016ರ ಜ.4ರಂದು ಮಧ್ಯರಾತ್ರಿ 1.30ರ ವೇಳೆಯಲ್ಲಿ ಕುಷ್ಟಪ್ಪ ಅಲಿಯಾಸ್‌  ಕೃಷ್ಣಯ್ಯ ಶೆಟ್ಟಿ  ಮನೆಗೆ ತೆರಳಿದ್ದ. ಅಲ್ಲಿ ಕುಷ್ಟಪ್ಪ, ಕೊರಗಮ್ಮ ಶೆಡ್ತಿ ಹಾಗೂ ಅವರ ಪುತ್ರಿ ಚಂದ್ರಮತಿ ಶೆಟ್ಟಿ ಇದ್ದರು. ಕುಷ್ಟಪ್ಪ  ತಡರಾತ್ರಿ  ಮೂತ್ರ ವಿಸರ್ಜನೆಗೆಂದು ಹೊರ ಬಂದಾಗ  ರಂಜಿತ್‌  ಹಿಂದಿನಿಂದ  ಬಂದು ತಲೆ ಹಾಗೂ ಬೆನ್ನಿಗೆ ಕತ್ತಿ ಯಿಂದ ಕಡಿದಿದ್ದಾನೆ.

ತಂದೆಯನ್ನು ರಕ್ಷಿಸಲು ಬಂದ ಪುತ್ರಿ ಚಂದ್ರಮತಿ ಶೆಡ್ತಿಗೂ  ಕಡಿದು ಅವರಿಬ್ಬರನ್ನು ಐದು ಗಂಟೆಗಳ ಕಾಲ ಕೂಡಿ ಹಾಕಿದ್ದ.  ಚಿನ್ನ ಮತ್ತು ಹಣದ ಆಸೆಗಾಗಿ ತನ್ನ ಅಜ್ಜಿ 90ರ ವಯಸ್ಸಿನ ಕೊರಗಮ್ಮ ಶೆಡ್ತಿ  ಮೇಲೆ ಎರಗಿ ಕತ್ತಿ ಯಿಂದ ಕಡಿದಿದ್ದ. ಮರುದಿನ ಮುಂಜಾನೆಯಷ್ಟೆ ವಿಷಯ ಹೊರ ಜಗತ್ತಿಗೆ ಗೊತ್ತಾಗಿತ್ತು.

ಕ್ಷಿಪ್ರ ಕಾರ್ಯಾಚರಣೆ
ತನ್ನ ಖರ್ಚಿಗಾಗಿ ಒಡವೆ  ಕೇಳಿದ್ದ  ರಂಜಿತ್‌, ಅದು ಈಡೇರದಾಗ   ಈ  ಕೃತ್ಯವೆಸಗಿದ್ದ. ಅನಂತರ ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಒಡವೆ ಗಳನ್ನು ದೋಚಿ ಪರಾರಿಯಾಗಿದ್ದ.  ಅದರಲ್ಲಿ ಆತನ ತಾಯಿಯ ಒಡವೆಗಳೂ ಇದ್ದವು. ಲೂಟಿ ಮಾಡಿದ ಚಿನ್ನವನ್ನು ಕೋಟೇಶ್ವರದ ಚಿನ್ನದ ಅಂಗಡಿ.ಲ್ಲಿ ಮಾರಲು ಯತ್ನಿಸಿದಾಗ  ಪೊಲೀಸರಿಗೆ ಸಿಕ್ಕಿಬಿದ್ದಿದ್ದ.

ರಂಜಿತ್‌ನ ತಾಯಿ ಮತ್ತು ಸಹೋದರಿ ಮನೆ ಬಿಟ್ಟು ಬೇರಡೆ ವಾಸವಾಗಿದ್ದರು. ರಂಜಿತ್‌ ಕೊರಗಮ್ಮ ಶೆಡ್ತಿ ಅವರ ಹಿರಿಯ ಪುತ್ರಿಯ ಮಗ.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಸರ್ಕಲ್‌ ಇನ್ಸ್‌ ಪೆಕ್ಟರ್‌ ಪಿ.ಎಂ.ದಿವಾಕರ  ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.   

ಶಿಕ್ಷೆ ವಿವರ
ಕೊಲೆಯತ್ನ ನಡೆಸಿದ್ದಕ್ಕೆ ಜೀವಾವಧಿ ಶಿಕ್ಷೆ ಮತ್ತು 5 ಸಾ. ರೂ. ದಂಡ. ದಂಡ ತೆರಲು ತಪ್ಪಿದರೆ 1 ತಿಂಗಳು ಸಜೆ. ಮನೆಯೊಳಗೆ ಅಕ್ರಮ ಪ್ರವೇಶ ಮಾಡಿದ್ದಕ್ಕೆ 5 ವರ್ಷ ಕಠಿನ ಸಜೆ ಹಾಗೂ 5 ಸಾ. ರೂ. ದಂಡ. ದಂಡ ತೆರಲು ತಪ್ಪಿದರೆ 1 ತಿಂಗಳು ಜೈಲು. ಜೀವ ಬೆದರಿಕೆ ಹಾಕಿದ್ದಕ್ಕೆ 1 ವರ್ಷದ ಶಿಕ್ಷೆ ಮತ್ತು 1 ಸಾ. ರೂ. ದಂಡ. ದಂಡ ತೆರಲು ತಪ್ಪಿದರೆ 10 ದಿನಗಳ ಸಜೆ. ಹಲ್ಲೆ ಮಾಡಿ ಸಾಮಾನ್ಯ ಗಾಯ ಉಂಟು ಮಾಡಿದ್ದಕ್ಕೆ 2 ವರ್ಷದ ಶಿಕ್ಷೆ ಹಾಗೂ 3 ಸಾ. ರೂ. ದಂಡ. ದಂಡ ತೆರಲು ತಪ್ಪಿದರೆ 20 ದಿನಗಳ ಶಿಕ್ಷೆ. ಹಲ್ಲೆ ಮಾಡಿ ತೀವ್ರತರ ಗಾಯಗೊಳಿಸಿದ್ದಕ್ಕೆ 5 ವರ್ಷಗಳ ಶಿಕ್ಷೆ ಹಾಗೂ 5 ಸಾ. ರೂ. ದಂಡ. ದಂಡ ಕೊಡದಿದ್ದರೆ 1 ತಿಂಗಳ ಸಜೆ. ಸುಲಿಗೆ ಮಾಡಿದ್ದಕ್ಕೆ 7 ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ಗಾಯಾಳುಗಳು ಪರಿಹಾರ ಪಡೆಯಲು ಕಾನೂನು ಸೇವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದೆಂದು ಸೂಚಿಸಿದ್ದಾರೆ. 

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.