ಅಭಿವೃದ್ಧಿ ಕಾಣಬೇಕಿದೆ ಹೊಸಹಿತ್ಲು ಬೀಚ್‌


Team Udayavani, Sep 26, 2019, 5:09 AM IST

hosa-hitle

ಬೈಂದೂರು: ಬೈಂದೂರು ತಾಲೂಕು ಪ್ರವಾಸೋದ್ಯಮ ಬೆಳವಣಿಗೆಗೆ ವಿಪುಲ ಅವಕಾಶಗಳಿರುವ ಪ್ರದೇಶವಾಗಿದೆ. ನೈಸರ್ಗಿಕವಾಗಿ ಕಂಗೊಳಿಸುವ ಹಲವು ಸ್ಥಳಗಳು ಪ್ರವಾಸಿಗರನ್ನು ಇಲ್ಲಿಗೆ ಕೈ ಬೀಸಿ ಕರೆಯುತ್ತಿವೆ. ಇಂತಹ ಪ್ರವಾಸಿ ತಾಣಗಳಲ್ಲಿ ಒಂದಾದ ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹೊಸಹಿತ್ಲು ಕಡಲ ಕಿನಾರೆ ಪ್ರವಾಸೋದ್ಯಮ ಇಲಾಖೆ ಸಹಕಾರದೊಂದಿಗೆ ಅಭಿವೃದ್ಧಿ ಕಾಣಬೇಕಾಗಿದೆ.

ನೈಸರ್ಗಿಕ ಸೌಂದರ್ಯ ಹೊಂದಿದ ಪ್ರದೇಶ
ಹೊಸಹಿತ್ಲು ಸಮುದ್ರ ಕಿನಾರೆ, ಮರವಂತೆ, ಸೋಮೇಶ್ವರ ಹೊರತುಪಡಿಸಿದರೆ ಅತೀ ವಿಶಾಲವ್ಯಾಪ್ತಿ ಹೊಂದಿದ ತೀರವಾಗಿದೆ. ಸೋಮೇಶ್ವರದಿಂದ 15 ಕಿ.ಮೀ. ಹಾಗೂ ಮರವಂತೆಯಿಂದ 10 ಕಿ.ಮೀ. ಅಂತರ ಹೊಂದಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 800 ಮೀಟರ್‌ ಅಂತರದಲ್ಲಿದೆ. ಖಂಬದಕೋಣೆ, ಹೇರೂರು, ನಾವುಂದ ಸೇರಿದಂತೆ ಸುತ್ತಲಿನ ಹತ್ತಾರು ಗ್ರಾಮದ ಜನರು ಸಂಜೆಯ ಸೂರ್ಯಾಸ್ತ ವೀಕ್ಷಿಸಲು ಇಲ್ಲಿಗೆ ಆಗಮಿಸುತ್ತಾರೆ. ಬಹುತೇಕವಾಗಿ ಕಡಲ ಕಿನಾರೆಯಲ್ಲಿ ಅಪರೂಪವಾಗಿರುವ ಮುಳ್ಳಿನ ಗಿಡಗಳು ಸುಮಾರು 200 ಮೀಟರ್‌ವರೆಗೂ ಹಬ್ಬಿದೆ. ಆದ್ರಗೋಳಿಯಿಂದ ಹೊಸಹಿತ್ಲು ಪ್ರದೇಶದವರೆಗೆ ಸುಮಾರು 200 ಮೀನುಗಾರಿಕಾ ಕುಟುಂಬಗಳಿವೆ.ಇಲ್ಲಿನ ಹೊಸಹಿತ್ಲು ಫ್ರೆಂಡ್ಸ್‌ ಮುಂದಾಳತ್ವದಲ್ಲಿ ಕಡಲ ತೀರ ಸ್ವತ್ಛತೆ ಪ್ರವಾಸಿಗರಿಗೆ ಕುಳಿತುಕೊಳ್ಳಲು ಬೆಂಚ್‌ ವ್ಯವಸ್ಥೆಗಳನ್ನು ದಾನಿಗಳ ನೆರವಿನಿಂದ ಮಾಡಿದೆ.

ಅನುದಾನ ಮಂಜೂರಾತಿಯಾಗಿದೆ, ಬಿಡುಗಡೆಯಾಗಿಲ್ಲ
ಹೊಸಹಿತ್ಲು ಬೀಚ್‌ ಅಭಿವೃದ್ಧಿಗೆ ಇಲ್ಲಿನ ಸ್ಥಳೀಯರು 2010ರಿಂದಲೇ ಪ್ರಸ್ತಾವ ಸಲ್ಲಿಸಿದ್ದರು. ಇಲ್ಲಿನ ಬೇಡಿಕೆಗೆ ಸ್ಪಂದಿಸಿದ ಅಂದಿನ ಶಾಸಕರು ಪ್ರವಾಸೋದ್ಯಮ ಇಲಾಖೆಗೆ ಈ ಸ್ಥಳದ ಅಭಿವೃದ್ಧಿ ಕುರಿತು ವರದಿ ಕೇಳಲಾಗಿತ್ತು. ಇಲಾಖೆ ಹೊಸಹಿತ್ಲು ಬೀಚ್‌ ಸಂಪೂರ್ಣ ಅಭಿವೃದ್ಧಿಗಾಗಿ 98 ಲಕ್ಷ ರೂ. ಬೇಡಿಕೆಯ ಪಟ್ಟಿ ತಯಾರಿಸಿದೆ. ಇದರಲ್ಲಿ ಹೈಮಾಸ್ಟ್‌ ಅಳವಡಿಕೆ, ರಸ್ತೆ, ಶೌಚಾಲಯ, ಪಾರ್ಕಿಂಗ್‌ ಒಳಗೊಂಡಿತ್ತು. ಬಳಿಕ ಕಳೆದ ಅವಧಿಯಲ್ಲಿ 15 ಲಕ್ಷ ರೂ. ಪ್ರವಾಸೋದ್ಯಮ ಇಲಾಖೆಯಿಂದ ಮಂಜೂ ರಾಗಿದೆ. ಆದರೆ ಈ ಅನುದಾನದಲ್ಲಿ ಯಾವೆಲ್ಲಾ ಕಾಮಗಾರಿ ನಡೆಸಬೇಕೆನ್ನುವ ಸ್ಪಷ್ಟತೆಯಿಲ್ಲದ ಕಾರಣ ಇದುವರೆಗೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಪ್ರಸ್ತುತ ರಾಜ್ಯ ಹಾಗೂ ಕೇಂದ್ರ ಸರಕಾರ ಪ್ರವಾಸೋ ದ್ಯಮಕ್ಕೆ ವಿಶೇಷ ಒಲವು ನೀಡುತ್ತಿರುವ ಹಿನ್ನೆಲೆಯಲ್ಲಿ ಹೊಸಹಿತ್ಲು ಬೀಚ್‌ ಅಭಿವೃದ್ಧಿ ಶೀಘ್ರ ಕೈಗೆತ್ತಿಕೊಳ್ಳಬೇಕು ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.

ಅಭಿವೃದ್ಧಿಗೆ ಇಲಾಖೆ ಮುಂದಾಗಲಿ
ಕರಾವಳಿ ಪ್ರದೇಶದ ಸುಂದರ ತಾಣಗಳ ಲ್ಲೊಂದಾದ ಹೊಸಹಿತ್ಲು ಬೀಚ್‌ ಅಭಿವೃದ್ಧಿಗೆ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಮನಸ್ಸು ಮಾಡಬೇಕಾಗಿದೆ. ಪ್ರಾಥಮಿಕ ಹಂತದಲ್ಲಿ ಮೂಲ ಸೌಕರ್ಯಗಳನ್ನು ಒದಗಿ ಸುವ ಪ್ರಯತ್ನ ನಡೆಯಬೇಕಾಗಿದೆ.ಘೋಷಣೆಯಾದ ಅನುದಾನ ಬಿಡುಗಡೆ ಕುರಿತು ಜನಪ್ರತಿನಿಧಿಗಳು ಪ್ರಯತ್ನಿಸಬೇಕು.
-ಸಂತೋಷ ಚಂದನ್‌, ಹೊಸಹಿತ್ಲು ಫ್ರೆಂಡ್ಸ್‌

ಹಂತ ಹಂತವಾಗಿ ಅಭಿವೃದ್ಧಿ
ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡಲಾಗಿದೆ. ಹೊಸಹಿತ್ಲು ಬೀಚ್‌ ಮೂಲ ಸೌಕರ್ಯ ಈಡೇರಿಕೆಗೆ ಇಲಾಖೆ ಅನುದಾನ ನೀಡಲು ಪತ್ರ ನೀಡಿದ್ದು ಮೊದಲ ಹಂತದಲ್ಲಿ 15 ಲಕ್ಷ ರೂ. ಬಿಡುಗಡೆಯಾಗಲಿದೆ. ಸಮುದ್ರ ಕೊರೆತ ನಿಯಂತ್ರಣ ರಸ್ತೆ ಸೇರಿದಂತೆ ಅಗತ್ಯ ಕಾಮಗಾರಿಗೆ ಮೊದಲಿಗೆ ಆದ್ಯತೆ ನೀಡಿ ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು.
-ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಶಾಸಕ

ವಿಶೇಷ ಆದ್ಯತೆ
ಹೊಸಹಿತ್ಲು ಬೀಚ್‌ ಅಭಿವೃದ್ಧಿಗೆ ಪ್ರಸ್ತಾವನೆ ಬಂದಿದೆ. ಶಾಸಕರ ಶಿಫಾರಸ್ಸಿನೊಂದಿಗೆ ಮೊದಲ ಹಂತದಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಅತಿ ಅಗತ್ಯ ಕಾಮಗಾರಿಗಾಗಿ 15 ಲಕ್ಷ ರೂ.ಅನುದಾನ ಮಂಜೂರಾಗಿದೆ. ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇಲಾಖೆ ವಿಶೇಷ ಆದ್ಯತೆ ನೀಡಿದೆ.
-ಚಂದ್ರಶೇಖರ, ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಉಡುಪಿ

– ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.