ಮೈ ಕೊರೆಯುವ ಚಳಿ: ರೈತರಿಗೆ ಬೆಳೆ ಲೆಕ್ಕಾಚಾರ


Team Udayavani, Jan 18, 2019, 12:50 AM IST

mango.jpg

ಕಾಪು : ಕರಾವಳಿಯಲ್ಲಿ  ಈ ಬಾರಿ ಚಳಿ ಜೋರಾಗಿದೆ. ಚಳಿ ಮನುಷ್ಯನನ್ನು ಬಹುವಾಗಿ ಕಾಡುತ್ತಿದ್ದರೆ, ಪ್ರಕೃತಿ ಮೈದುಂಬಲು ಸಿದ್ಧತೆ ನಡೆಸಿದೆ.  

ಚಳಿ ಹೆಚ್ಚಾದಷ್ಟು ಹಣ್ಣು ಹಂಪಲುಗಳ ಗಿಡಗಳಲ್ಲಿ ಹೂ ಬಿಟ್ಟು, ಇಳುವರಿ ಹೆಚ್ಚುತ್ತದೆ ಎಂಬ ನಂಬಿಕೆಯಿದೆ. ಚಳಿಯ ವಾತಾವರಣದಿಂದಾಗಿ ಕಾಡು ಹಣ್ಣು ಹಂಪಲುಗಳು ಈ ಬಾರಿ ಬಂಪರ್‌ ಬೆಳೆ ಕೊಡುವ ಸಾಧ್ಯತೆ ಇದೆ. ಆದರೆ ತರಕಾರಿಮತ್ತು ದ್ವಿದಳ ಧಾನ್ಯಗಳ ಬೆಳೆಗಳು ಆಪತ್ತಿನ ಪರಿಸ್ಥಿತಿಯನ್ನು ಎದುರಿಸುತ್ತಿವೆ ಕೃಷಿಕರ ನಿರೀಕ್ಷೆಗೆ ಪೂರಕವಾಗಿ ಮಾವು, ಗೇರು, ಹಲಸು, ಹೆಬ್ಬಲಸು ಸಹಿತ ವಿವಿಧ ಜಾತಿಯ ಹಣ್ಣಿನ ಗಿಡಗಳು ಹೂ ಬಿಟ್ಟಿದ್ದು,  ವಾಣಿಜ್ಯ ಬೆಳೆಗಳಾದ ಕಾಳು ಮೆಣಸು, ಚಿಕ್ಕು, ಬಾಳೆ ಉತ್ತಮ ಫಸಲು ನೀಡುವ ಲಕ್ಷಣಗಳಿವೆ.  

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಳಿಯ, ಪ್ರಮಾಣ ಹೆಚ್ಚಾಗಿದೆ. ಚಳಿಗಾಲದಲ್ಲಿ ಮೋಡದ ವಾತಾವರಣ ಇದ್ದರೆ ಮಾವು ಮತ್ತು ಗೇರು  ಹೂವುಗಳು ಮುರುಟಿ ಹೋಗುವ ಅಪಾಯ ಎದುರಿಸುತ್ತವೆ. 

ಆದರೆ ಈ ಬಾರಿ ಆ ಸಮಸ್ಯೆ ಕಂಡುಬಂದಿಲ್ಲ.  

ದ್ವಿದಳ ಧಾನ್ಯ – ತರಕಾರಿ ಬೆಳೆಗೆ ಆಪತ್ತು ವಿಪರೀತ ಚಳಿ ದ್ವಿದಳ ಧಾನ್ಯ ಮತ್ತು ತರಕಾರಿ ಬೆಳೆಗಳಿಗೆ ಪ್ರಯೋಜನಕಾರಿಯಲ್ಲ.  ನೆಲಗಡಲೆ, ಎಳ್ಳು, ಹುರುಳಿ, ಉದ್ದು, ಆವಡೆ ಇತ್ಯಾದಿ ದ್ವಿದಳ ಧಾನ್ಯಗಳು, ಮತ್ತು ಬಸಳೆ, ಹರಿವೆ, ಬೆಂಡೆ, ಅಲಸಂಡೆ, ಕಲ್ಲಂಗಡಿ, ಸೌತೆ ಬೆಳೆಗಳಿಗೆ ಮಾರಕವಾಗಿವೆ. 
ಜತೆಗೆ ಶಂಕರಪುರ ಮಲ್ಲಿಗೆ ಮತ್ತು ಮಟ್ಟುಗುಳ್ಳ ಕೃಷಿಗೂ ಚಳಿ ಉಪಕಾರಿಯಲ್ಲ ಎನ್ನುವ ಅಭಿಪ್ರಾಯ ಕೃಷಿಕರದ್ದಾಗಿದೆ.  

ಕಾಡು ಹಣ್ಣು ಹಂಪಲು ಗಿಡಗಳಿಗೆ ಸೊಳ್ಳೆ ಬಾಧೆ
ವಿಪರೀತ ಚಳಿ ಇದ್ದು, ಅದರ ನಡುವೆ ಮೋಡ ಮುಸುಕಿದ ಲಕ್ಷಣಗಳಿದ್ದರೆ  ಟೀ ಜಾತಿಯ ಸೊಳ್ಳೆ ಸಂತಾನೋತ್ಪತ್ತಿಗೆ ಅನುಕೂಲಕರ ಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದಾಗಿ ಹಣ್ಣು ಹಂಪಲು ಗಿಡಗಳಿಗೂ ಸೊಳ್ಳೆ ಬಾಧೆ ಕಾಣಿಸುತ್ತದೆ. ಹೂ ಬಿಡುವ ಮರಗಳನ್ನು ವ್ಯಾಪಿಸಿಕೊಳ್ಳುವ ಈ ಸೊಳ್ಳೆಯು ಹೂವಿನ ಕಾಂಡದ ರಸ ಹೀರುತ್ತದೆ. ಇದರಿಂದಾಗಿ ಇಡೀ ಹೂ ಗೊಂಚಲು ಒಣಗಿ ಹೋಗುತ್ತದೆ. ಮೋಡದ ವಾತಾವರಣದಲ್ಲಿ ತೇವಾಂಶ ಹೆಚ್ಚುವುದರಿಂದ ಹೂ ಅಥವಾ ಮಿಡಿ ಫಸಲುಗಳಿಗೆ ಶಿಲೀಂಧ್ರ ವ್ಯಾಪಿಸಿ ಬೆಳವಣಿಗೆಗೆ ತೊಂದರೆ ಮಾಡುತ್ತವೆ.  

ಪ್ರಕೃತಿದತ್ತ ಕೊಡುಗೆ
ಚಳಿಯ ಕಾರಣದಿಂದಾಗಿ ಮಾವು, ಗೇರು ಮತ್ತು ಹಲಸು ಅಧಿಕ ಇಳುವರಿ ಕೊಡುವ ನಿರೀಕ್ಷೆಯಿದೆ. ಹೆಬ್ಬಲಸಿನ ಗಿಡಗಳು ಹಿಂದಿಗಿಂತಲೂ ಉತ್ತಮವೆಂಬಂತೆ ಈ ಬಾರಿ ಬಲು ಬೇಗನೆ ಫಸಲು ಬಿಟ್ಟಿವೆ. ಹೂ ಬಿಟ್ಟ ಸಂದರ್ಭ ಮೋಡ ಬಂದರೆ ಅದರಿಂದ ವಿವಿಧ ರೀತಿಯ ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಈ ಬಗ್ಗೆಯೂ ಎಚ್ಚರ ವಹಿಸುವ ಅಗತ್ಯತೆಯಿದೆ.
– ರಾಮಕೃಷ್ಣ ಶರ್ಮ  ಬಂಟಕಲ್ಲು, ಅಧ್ಯಕ್ಷರು, ಉಡುಪಿ ಜಿಲ್ಲಾ ಕೃಷಿಕ ಸಂಘ

– ರಾಕೇಶ್ ಕುಂಜೂರು 

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.