ನಾಡ: ಸಂತೆ ಮಾರುಕಟ್ಟೆ ಅಭಿವೃದ್ಧಿಗೆ ಬೇಡಿಕೆ

 ನಿರ್ವಹಣೆಯಲ್ಲಿದೆ ಸೊರಗಿದ ಸಂತೆ ಮಾರುಕಟ್ಟೆ

Team Udayavani, Oct 12, 2021, 5:17 AM IST

ನಾಡ: ಸಂತೆ ಮಾರುಕಟ್ಟೆ ಅಭಿವೃದ್ಧಿಗೆ ಬೇಡಿಕೆ

ನಾಡ: ನಿರ್ವಹಣೆಯಿಲ್ಲದೆ ಅವ್ಯವಸ್ಥೆಯ ತಾಣವಾಗಿರುವ ನಾಡ ಗ್ರಾ.ಪಂ. ಅಧೀನದ ವಾರದ ಸಂತೆ ಮಾರುಕಟ್ಟೆ ಅಭಿವೃದ್ಧಿಗೆ ಸಾರ್ವಜನಿಕ ವಲಯದಿಂದ ಬೇಡಿಕೆ ಕೇಳಿ ಬಂದಿದೆ. ಪ್ರತೀ ಬುಧವಾರ ಇಲ್ಲಿ ವಾರದ ಸಂತೆ ನಡೆಯುತ್ತಿದ್ದು, ಸರಿಯಾದ ವ್ಯವಸ್ಥೆಯಿಲ್ಲದೆ ಇಲ್ಲಿಗೆ ವ್ಯಾಪಾರಕ್ಕೆ ಬರುವ ವರ್ತಕರು ಹಾಗೂ ಖರೀದಿಗೆ ಬರುವ ಗ್ರಾಹಕರಿಗೆ ಸಮಸ್ಯೆಯಾಗುತ್ತಿದೆ.

ಬೈಂದೂರು ತಾಲೂಕಿನ ದೊಡ್ಡ ಗ್ರಾ.ಪಂ.ಗಳಲ್ಲಿ ನಾಡ ಸಹ ಒಂದಾಗಿದ್ದು, ಇಲ್ಲಿನ ವಾರದ ಸಂತೆಗೆ ನಾಡ, ಸೇನಾಪುರ, ಬಂಟ್ವಾಡಿ, ಮತ್ತಿತರ ಭಾಗಗಳಿಂದ ಖರೀದಿಗೆ ಜನ ಬರುತ್ತಾರೆ. ದೊಡ್ಡ ಪೇಟೆ ದೂರ ಇರುವುದರಿಂದ ಸಾಕಷ್ಟು ಮಂದಿ ಅಗತ್ಯ ವಸ್ತುಗಳು ಹಾಗೂ ತರಕಾರಿ ಇನ್ನಿತರ ಖರೀದಿಗೆ ವಾರದ ಸಂತೆಯನ್ನೇ ನೆಚ್ಚಿಕೊಂಡಿದ್ದಾರೆ.

ಸ್ವಚ್ಛತೆಯಿಲ್ಲ
ನಾಡ ಗ್ರಾ.ಪಂ. ವ್ಯಾಪ್ತಿಯ ಈ ಸಂತೆ ಮಾರುಕಟ್ಟೆಯ ಆವರಣವು ಒಟ್ಟಾರೆ 1.20 ಎಕರೆ ವಿಸ್ತೀರ್ಣವನ್ನು ಹೊಂದಿದೆ. ಇದರಲ್ಲಿ 2 ದೊಡ್ಡ ಕಟ್ಟಡ ಹಾಗೂ ಇನ್ನು ಕೆಲವು ಸಣ್ಣ- ಸಣ್ಣ ಕಟ್ಟಡ ಹಾಗೂ ಕಟ್ಟೆಗಳಿವೆ. ಆವರಣವಿಡೀ ನಿರ್ವಹಣೆಯಿಲ್ಲದೆ ಹುಲ್ಲುಗಳೆಲ್ಲ ಬೆಳೆದು ನಿಂತಿದ್ದು, ವ್ಯಾಪಾರಿಗಳು ಮಾರಾಟ ಮಾಡುವ ಜಾಗವು ಸ್ವಚ್ಛತೆಯಿಂದ ಕೂಡಿರುವುದಿಲ್ಲ.

ಅಭಿವೃದ್ಧಿಗೆ ಬೇಡಿಕೆ
ಈ ಸಂತೆ ಮಾರುಕಟ್ಟೆಯ ಸುತ್ತಲೂ ಆವರಣ ಗೋಡೆಯನ್ನು ನಿರ್ಮಿಸಿ, ಈಗಿರುವ ಎರಡು ಪ್ರವೇಶ ದ್ವಾರಗಳನ್ನು ಮುಚ್ಚಿ, ಗೇಟು ಮಾಡಿ, ಆ ಮೂಲಕ ಒಂದೇ ಕಡೆ ಪ್ರವೇಶಕ್ಕೆ ಅನುಕೂಲ ಮಾಡಿಕೊಡಬೇಕು. ಇದಲ್ಲದೆ ಮಳೆಗಾಲದಲ್ಲಿ ಈ ಆವರಣ ಕೆಸರುಮಯ ಆಗುವುದರಿಂದ ತೊಂದರೆಯಾಗುತ್ತಿದ್ದು, ಅದಕ್ಕೆ ಇಂಟರ್‌ಲಾಕ್‌ ಹಾಕಿದರೆ ಪ್ರಯೋಜನವಾಗಬಹುದು ಎನ್ನುವ ಬೇಡಿಕೆ ಸಾರ್ವಜನಿಕರದ್ದಾಗಿದೆ.

ನಿರ್ವಹಣೆಯೇ ಇಲ್ಲ
ಇಲ್ಲಿನ ವಾರದ ಸಂತೆ ನಡೆಯುವ ಸಂತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಯೇ ಮಾಡುತ್ತಿಲ್ಲ. ಸರಿಯಾದ ನಿರ್ವಹಣೆಯಿಲ್ಲದೆ, ಈ ಆವರಣವಿಡೀ ಹುಲ್ಲು ಬೆಳೆದು, ಗುಡ್ಡದ ರೀತಿಯಾಗಿದೆ. ಇನ್ನಾದರೂ ಪಂಚಾಯತ್‌ನವರು ಇದನ್ನು ಅಭಿವೃದ್ಧಿಪಡಿಸಿ, ಸರಿಯಾದ ನಿರ್ವಹಣೆ ಮಾಡಲಿ ಎನ್ನುವುದಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಪ್ರಿಯಾಂಕಾ ಹಿಂದೂ ಆಗಿದ್ದು ಯಾವಾಗ?…ಆಕೆ ಊಸರವಳ್ಳಿ: ತೆಲಂಗಾಣ ಬಿಜೆಪಿ ಮುಖಂಡ

ಶೌಚಾಲಯಕ್ಕೂ ಬೀಗ
ಈ ಸಂತೆ ಮಾರುಕಟ್ಟೆ ಪ್ರದೇಶದಲ್ಲಿಯೇ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಲಾಗಿದ್ದು, ಅದಕ್ಕೆ ಬಹಳಷ್ಟು ಸಮಯಗಳಿಂದ ಬೀಗ ಹಾಕಲಾಗಿದೆ. ನಾಡದಲ್ಲಿಯೂ ಹತ್ತಾರು ಮಳಿಗೆಗಳು, ಕಚೇರಿಗಳಿದ್ದು, ಎಲ್ಲ ಕಡೆಗಳಲ್ಲಿ ಶೌಚಾಲಯ ಇಲ್ಲದಿರುವುದರಿಂದ ಈ ಸಾರ್ವಜನಿಕ ಶೌಚಾಲಯವನ್ನು ಶುಚಿಗೊಳಿಸಿ, ತೆರೆದಿಟ್ಟರೆ ಸಾರ್ವಜನಿಕರು, ಕೆಲಸ ಮಾಡುವ ಅನೇಕ ಮಂದಿಗೆ ಅನುಕೂಲವಾಗಬಹುದು.

ಪ್ರಸ್ತಾವನೆ ಸಲ್ಲಿಕೆ
ನಾಡ ಗ್ರಾಮದ ವಾರದ ಸಂತೆ ಮಾರುಕಟ್ಟೆಯ ಆವರಣ ಗೋಡೆ, ಗೇಟು, ಇಂಟರ್‌ಲಾಕ್‌ ಅಳವಡಿಕೆ ಬಗ್ಗೆ ಪಟ್ಟಿ ಮಾಡಿ, ಈಗಗಾಲೇ ಎಪಿಎಂಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನು ಆವರಣದಲ್ಲಿ ಬೆಳೆದಿರುವ ಹುಲ್ಲು, ಗಿಡಗಂಟಿಗಳನ್ನು ಕೂಡಲೇ ಸ್ವಚ್ಛ ಮಾಡಲಾಗುವುದು. ಮಳೆ ಇದ್ದುದರಿಂದ ಇಷ್ಟು ದಿನ ಮಾಡಿರಲಿಲ್ಲ.
– ಹರೀಶ್‌, ನಾಡ ಗ್ರಾ.ಪಂ. ಪಿಡಿಒ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.