ನಾಗಮಂಡಲದಿಂದ ನಾಡಿಗೆ ಮಂಗಳ: ಒಡಿಯೂರು ಶ್ರೀ
Team Udayavani, Feb 22, 2017, 12:43 PM IST
ಹಕ್ಲಾಡಿ: ಚತುಃಪವಿತ್ರ ನಾಗಮಂಡಲ
ಕುಂದಾಪುರ: ಧರ್ಮ ಹಾಗೂ ಸಂಸ್ಕೃತಿ ಬೇರೆ ಬೇರೆಯಾಗಿ ಕಂಡುಬಂದರೂ ಧರ್ಮವನ್ನು ಬಿಟ್ಟು ಸಂಸ್ಕೃತಿ ಇಲ್ಲ; ಸಂಸ್ಕೃತಿಯನ್ನು ಬಿಟ್ಟು ಧರ್ಮ ಇಲ್ಲ. ಭಗವಂತನೇ ಅದರ ಧರ್ಮದ ಸ್ಥಾಪಕ. ನಾಗದೇವರು ಸಂಪತ್ತು ಕೊಡುವ ದೇವರಾಗಿದ್ದು, ಕಣ್ಣಿಗೆ ಕಾಣುವ ದೇವರಾಗಿದೆ. ನಾಗ ಮಂಡಲದಿಂದ ನಾಡಿಗೆ ಮಂಗಳ ಸಾಧ್ಯ ಎಂದು ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರು ದೇವದತ್ತ ಸಂಸ್ಥಾನದ ಶ್ರೀ ಗುರುದೇವಾ ನಂದ ಸ್ವಾಮೀಜಿ ನುಡಿದರು.
ಅವರು ಸೋಮವಾರ ಹಕ್ಲಾಡಿ ಬಾಳೆಮನೆ ಕುಟುಂಬಸ್ಥರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವದ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಬದುಕಿಗೊಂದು ಸಂವಿಧಾನ ಬೇಕು. ಆ ಸಂವಿಧಾನವೇ ಧರ್ಮ. ಅದನ್ನು ಬದುಕಿನಲ್ಲಿ ಅಳಡಿಸಿಕೊಂಡು ಹೋದಲ್ಲಿ ಬದುಕು ಪರಿಪೂರ್ಣವಾಗುತ್ತದೆ. ನಡೆ ಮತ್ತು ನುಡಿ ಎಂಬ ಎರಡು ಅಂಶಗಳು ಜೋಡಿಸಿಕೊಂಡು ಹೋದಾಗ ಬದುಕು
ಸಾರ್ಥಕ್ಯವನ್ನು ಪಡೆಯುತ್ತದೆ ಎಂದರು ಬಸೂÅರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಹೈದರಾಬಾದಿನ ಹೊಟೇಲ್ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಸಬ್ಲಾಡಿ ಮಂಜಯ್ಯ ಶೆಟ್ಟಿ, ಶಂಕರ ಹೆಗ್ಡೆ ಹೊಳ್ಮಗೆ, ಹಿರಿಯರಾದ ಕಾಸರಗೋಡಿನ ಬಾಬು ರೈ, ನರಸಿಂಹ ಶೆಟ್ಟಿ ಬಾಳೆಮನೆ, ಜಿ.ಪಂ. ಮಾಜಿ ಸದಸ್ಯ ಹಕ್ಲಾಡಿ ಬಾಳೆಮನೆ ಸಂತೋಷ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ನ್ಯಾಯವಾದಿ ಟಿ.ಬಿ. ಶೆಟ್ಟಿ ಸ್ವಾಗತಿಸಿ ಪ್ರಸ್ತಾವನೆಗೈದರು. ಪತ್ರಕರ್ತ ಕೆ.ಸಿ. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಕಿಶೋರ್ ಶೆಟ್ಟಿ ವಂದಿಸಿದರು.
ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ನಾಗದೇವರ ಸಂದರ್ಶನ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಹಾಲಿಟ್ಟು ಸೇವೆ, ರಾತಿ ಚತುಃಪವಿತ್ರ ನಾಗಮಂಡಲ ಸೇವೆ, ಡಮರು ಸೇವೆ, ನರ್ತನ ಸೇವೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ