ನಾಗರಾಜ್ ತಂತ್ರಿ ಅವರಿಗೆ ಬೀಳ್ಕೊಡುಗೆ, ಸಮ್ಮಾನ
Team Udayavani, May 16, 2019, 6:20 AM IST
ಉಡುಪಿ: ಎಸ್ಬಿಐ ಮಂಗಳೂರು ಮುಖ್ಯ ಶಾಖೆಯ ಮುಖ್ಯ ವ್ಯವಸ್ಥಾಪಕರಾಗಿದ್ದು, ಇದೀಗ ನಿವೃತ್ತಿ ಹೊಂದಿದ ನಾಗರಾಜ್ ತಂತ್ರಿ ಅವರನ್ನು ಸಮ್ಮಾನಿಸಲಾಯಿತು.
ನಾಗರಾಜ್ ತಂತ್ರಿ ದಂಪತಿಯನ್ನು ರಾಮಮೂರ್ತಿ, ಶಾಂತಾರಾಮ್ ಶೆಣೈ ಅವರು ಸಮ್ಮಾನಿಸಿ ಶುಭ ಹಾರೈಸಿದರು.
ಬ್ಯಾಂಕಿನ ವಿವಿಧ ಶಾಖೆಗಳಲ್ಲಿ 39 ವರ್ಷ ಸೇವೆ ಸಲ್ಲಿಸಿದ್ದ ನಾಗರಾಜ್ ಅವರು ಮಂಗಳೂರು ಶಾಖೆಯ 150ನೇ ವರ್ಷಾಚರಣೆಯನ್ನು ಅಕ್ಟೋಬರ್ನಲ್ಲಿ ಚೇರ್ಮನ್ ರಜನೀಶ್ ಕುಮಾರ್ ಅವರಿಂದ ಪ್ರಾರಂಭಿಸಿದ್ದರು. ಎನ್ಆರ್ಐ, ಅಂತರ್ದೇಶೀಯ ಬ್ಯಾಂಕಿಂಗ್, ವಿದೇಶೀ ವಿನಿಮಯಗಳಲ್ಲಿ ವಿಶೇಷ ಜ್ಞಾನ ಹೊಂದಿದ ಅವರು ಬೆಂಗಳೂರು ವೃತ್ತದ ಎಲ್ಲ ಶಾಖೆಗಳಿಗೆ ಮಾರ್ಗದರ್ಶನ ನೀಡಿದ್ದರು. ಎಸ್ಬಿಐ ಲೈಫ್, ಎಸ್ಬಿಐ ಮ್ಯುಚುವಲ್ ಫಂಡ್ನಲ್ಲೂ ಅತ್ಯುತ್ತಮ ವ್ಯವಹಾರ ನಡೆಸಿ ಚೇರ್ಮನ್ ಕ್ಲಬ್ ಮೆಂಬರ್ಶಿಪ್ ಪಡೆದಿದ್ದರು.
2 ಬಾರಿ ಸ್ಟಾರ್ ಎಂಡಿಆರ್ಟಿ, 7 ಬಾರಿ ಎಂಡಿಆರ್ಟಿ, 1 ಬಾರಿ ಸಿಒಟಿ ಬಿರುದು ಗಳಿಸಿದ್ದಾರೆ. 5 ವರ್ಷ ಇನ್ಸ್ಪೆಕ್ಷನ್ ವಿಭಾಗದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡಿನ ನೂರಕ್ಕೂ ಹೆಚ್ಚು ಶಾಖೆಗಳಲ್ಲಿ ಕರ್ತವ್ಯ ನಿಭಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್