ಕಾರ್ಯಕರ್ತನಾಗಿ ಬೆಂಬಲಿಸಿದ ಮತದಾರ
ತವರು ನೆಲದ ಅಭಿನಂದನ ಸಭೆಯಲ್ಲಿ ನಳಿನ್ ಕುಮಾರ್ ಕಟೀಲು ಅಭಿಮತ
Team Udayavani, May 25, 2019, 6:00 AM IST
ಪುತ್ತೂರು: ಸಂಘ ಪರಿವಾರದ ತವರು ನೆಲ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಬಿಜೆಪಿ ಅತಿ ಹೆಚ್ಚು ಮತಗಳನ್ನು ಗಳಿಸುವ ಮೂಲಕ ಸಂಘಟನೆಯ ತಂತ್ರಗಳು ಇಲ್ಲಿ ಇಂದಿಗೂ ಉಳಿದಿವೆ ಎನ್ನುವುದು ಸಾಬೀತಾಗಿದೆ. ಇಂದು ಮತದಾರನು ಕಾರ್ಯಕರ್ತನಾಗಿ ಬೆಳೆದು ನಿಂತಿದ್ದಾನೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಶುಕ್ರವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅವರು ಕಾರ್ಯಕರ್ತರು, ಮುಖಂಡರ ಅಭಿ ನಂದನ ಸಭೆಯಲ್ಲಿ ಮಾತನಾಡಿದರು.
ದೇಶ, ರಾಜ್ಯ, ಜಿಲ್ಲೆ ಇಂದು ಕಾಂಗ್ರೆಸ್ ಮುಕ್ತವಾಗಿದೆ. ಯಾವುದೇ ಸರ್ವೇಗೂ ನಿಲುಕದ ಫಲಿತಾಂಶವನ್ನು ಜಿಲ್ಲೆಯ ಮತದಾರರು ನೀಡಿದ್ದಾರೆ. ಮೋದಿಯವರ ತ್ಯಾಗಮಯಿ ಜೀವನ, ರಾಷ್ಟ್ರಕ್ಕಾಗಿ ಸಿದ್ಧಾಂತವನ್ನು ಜನತೆ ಸ್ವೀಕಾರ ಮಾಡಿದ್ದಾರೆ. ಪರಮ ವೈಭವದ ಭಾರತದತ್ತ ನಾವು ಹೆಜ್ಜೆ ಹಾಕುತ್ತಿದ್ದೇವೆ ಎಂದರು.
ಆತ್ಮಾವಲೋಕನ ಮಾಡಲಿ
ವಿಧಾನಸಭೆಯಲ್ಲಿ ಅಪವಿತ್ರ ಮೈತ್ರಿ ಮಾಡಿಕೊಂಡಾಗಲೇ ಸಿದ್ದ ರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಳ್ಳಬೇಕಿತ್ತು. ಈಗಲಾದರೂ ಎಚ್ಚೆತ್ತುಕೊಂಡರೆ ಲೋಕಸಭೆಯಲ್ಲಿ ಗೆದ್ದಿರುವ ಒಂದು ಸ್ಥಾನವಾದರೂ ಉಳಿದೀತು. ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳುವ ಸಮಯವಿದು ಎಂದರು.
ಪ್ರಾಮಾಣಿಕ ಪ್ರಯತ್ನ
ಟೀಕೆಯಲ್ಲೂ ಇರುವ ಒಳ್ಳೆಯ ಅಂಶಗಳನ್ನು ತೆಗೆದುಕೊಂಡು ಮುಂದಿನ 5 ವರ್ಷಗಳಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿಪರ ಕೆಲಸ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದ ನಳಿನ್, ಮತದಾರರಿಗೆ ಅಭಿನಂದನೆ ಸಲ್ಲಿಸಿದರು.
ನಳಿನ್ ಅವರಿಗೆ ಹಾರಾರ್ಪಣೆ ಮಾಡಿ ಅಭಿನಂದಿಸಲಾಯಿತು. ಮೀನಾಕ್ಷಿ ಶಾಂತಿಗೋಡು, ಮಲ್ಲಿಕಾ ಪ್ರಸಾದ್, ಗೋಪಾಲಕೃಷ್ಣ ಹೇರಳೆ, ಜೀವಂಧರ್ ಜೈನ್ ಉಪಸ್ಥಿತರಿದ್ದರು.
ಪುತ್ತೂರಲ್ಲಿ ವಿಜಯೋತ್ಸವ
ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಸಂಜೀವ ಮಠಂದೂರು ಶಾಸಕರಾಗಿ ವರ್ಷ ಪೂರೈಸಿದ ಮತ್ತು ನಳಿನ್ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ನಡೆಯಲಿದೆ ಎಂದರು. ಡಿ. ಶಂಭು ಭಟ್ ವಂದಿಸಿದರು.
ಪ್ರಜಾಪ್ರಭುತ್ವ ಹಬ್ಬದ ಸಾರ್ಥಕತೆ
ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ದಿಗ್ವಿಜಯದ ಮೂಲಕ ದೇಶದಲ್ಲಿ ಇತಿಹಾಸ ನಿರ್ಮಾಣವಾಗಿದೆ. ತಾಯಿ-ಮಗ, ತಂದೆ-ಮಗನ ವಂಶಾಡಳಿತ ಬೇಡ ಎಂದು ತಿರಸ್ಕರಿಸಿರುವ ಜನತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಟ್ಟ ಕಡೆಯ ವ್ಯಕ್ತಿ ಆಡಳಿತ ಮಾಡಲು ಅವಕಾಶ ನೀಡಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆತ್ಮಾವಲೋಕನಕ್ಕೆ ಅವಕಾಶ ಎಂದವರು ಭಾವಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್