ನಳಿನ್, ಶೋಭಾಗೆ ಒಲಿದ ಬಿಜೆಪಿ ಸಂಸದೀಯ ಸಮಿತಿ ಸಚೇತಕ ಹುದ್ದೆ
Team Udayavani, Jun 13, 2019, 5:00 AM IST
ಮಂಗಳೂರು/ ಉಡುಪಿ: ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸಚೇತಕರಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. ನಳಿನ್ಗೆ ಕರ್ನಾಟಕದ 21 ಸಂಸದರ ಹೊಣೆಗಾರಿಕೆ ಮತ್ತು ಶೋಭಾ ಅವರಿಗೆ 12 ಮಂದಿ ಮಹಿಳಾ ಸಂಸದೆಯರ ಜವಾಬ್ದಾರಿ ವಹಿಸಲಾಗಿದೆ.
ಸತತ ಮೂರು ಬಾರಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾದ ನಳಿನ್ ಅವರಿಗೆ ಕೇಂದ್ರ ಸಚಿವ ಸ್ಥಾನಮಾನ ದೊರೆಯಬಹುದು ಎಂದು ನಿರೀಕ್ಷಿಸಲಾಗಿತ್ತಾದರೂ ಕರಾವಳಿಗೆ ಸಂಪುಟ ಸ್ಥಾನಮಾನ ದೊರೆತಿರಲಿಲ್ಲ. ಆದರೆ ಇದೀಗ ಇಬ್ಬರು ಸಂಸದರಿಗೆ ಬಿಜೆಪಿಯ ಸಂಸದೀಯ ಸಮಿತಿಯ ಸಚೇತಕ ಸ್ಥಾನ ದೊರೆಯುವ ಮೂಲಕ ಕರಾವಳಿಗೆ ವಿಶೇಷ ಸ್ಥಾನಮಾನ ದೊರೆತಂತಾಗಿದೆ.
2004ರಲ್ಲಿ ಜಿಲ್ಲಾ ಬಿಜೆಪಿಯ ಸಂಘಟನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಳಿನ್ 2009ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಜನಾರ್ದನ ಪೂಜಾರಿ ವಿರುದ್ಧ ಸ್ಪರ್ಧಿಸಿ 40,420 ಮತಗಳ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿದರು. 2014ರಲ್ಲಿ ಮತ್ತೆ ಪೂಜಾರಿ ವಿರುದ್ಧ 1,43,709 ಮತಗಳ ಅಂತರದಿಂದ ಗೆದ್ದಿದ್ದರು. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದ ನಳಿನ್ ಕೇರಳ ರಾಜ್ಯದಲ್ಲಿ ಬಿಜೆಪಿಯ ಪ್ರಭಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕೇಂದ್ರ ಸರಕಾರದ ವಿವಿಧ ಸಮಿತಿಗಳ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವOೆಯಲ್ಲಿ ಮತ್ತೂಮ್ಮೆ ದಾಖಲೆ ಮತಗಳ ಅಂತರದ ಗೆಲುವು ದಾಖಲಿಸಿ ಕರಾವಳಿಯಲ್ಲಿ ಬಿಜೆಪಿ ಕೋಟೆಯನ್ನು ಭದ್ರಗೊಳಿಸುವಲ್ಲಿ ಯಶಸ್ವಿಯಾಗಿದ್ದರು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರ ದಲ್ಲಿ 2014 ಮತ್ತು 2019ರಲ್ಲಿ 2 ಬಾರಿ ಸಂಸದೆಯಾಗಿ ಶೋಭಾ ಕರಂದ್ಲಾಜೆ ಅವರು ಆಯ್ಕೆಯಾ ಗಿದ್ದಾರೆ. 2010ರಲ್ಲಿ ರಾಜ್ಯ ಇಂಧನ ಸಚಿವರಾಗಿಯೂ ಇವರು ಕರ್ತವ್ಯ ನಿರ್ವಹಿಸಿ ಜನಮೆಚ್ಚುಗೆ ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್