ಫೆ. 11, 12: ಸ್ಥಳೀಯ ಉದ್ಯಮಗಳ ನಮ್ಮ ಸಂತೆ


Team Udayavani, Feb 10, 2023, 9:30 AM IST

ಫೆ. 11, 12: ಸ್ಥಳೀಯ ಉದ್ಯಮಗಳ ನಮ್ಮ ಸಂತೆ

ಮಣಿಪಾಲ:  ಸ್ಥಳೀಯವಾಗಿ ಉತ್ಪಾದನೆಯಾಗುತ್ತಿರುವ ಹಲವು ಬಗೆಯ ವಸ್ತುಗಳು, ಸಾವಯವ ಉತ್ಪನ್ನಗಳು, ಖಾದಿ, ಜವಳಿ ದಿರಿಸು ಸಹಿತ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವೇ “ನಮ್ಮ ಸಂತೆ’.

ಉದಯವಾಣಿ, ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯೂನಿಕೇಶನ್‌ (ಎಂಐಸಿ) ಒಟ್ಟಾಗಿ ಫೆ. 11 ಮತ್ತು 12ರಂದು ಉದಯವಾಣಿ ಕಚೇರಿ ಬಳಿಯ ಎಂಐಸಿ ಕ್ಯಾಂಪಸ್‌ನಲ್ಲಿ ಬೆಳಗ್ಗೆ 9.30ರಿಂದ ರಾತ್ರಿ 8 ಗಂಟೆಯ ವರೆಗೆ ಆಯೋಜಿಸಿರುವ ನಮ್ಮ ಸಂತೆಗೆ ಈಗಾಗಲೇ ಸ್ಥಳೀಯರು ಸಹಿತವಾಗಿ ವಿವಿಧ ಜಿಲ್ಲೆಗಳಿಂದ ಕರಕುಶಲ ಉತ್ಪನ್ನಗಳ ತಯಾರಕರು ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸುತ್ತಿದ್ದಾರೆ.

ಆಧುನಿಕ ಹೊಡೆತಕ್ಕೆ ಕುಗ್ಗಿ ಹೋಗುತ್ತಿರುವ ಪಾರಂಪರಿಕ ಕಲೆ, ಕರಕುಶಲ ವಸ್ತುಗಳಿಗೆ ಹೊಸ ರೂಪ ನೀಡಿ, ಆ ಮೂಲಕ ಜನರಿಗೆ ಸ್ಥಳೀಯ, ದೇಸೀಯ ಉತ್ಪನ್ನಗಳನ್ನು ಒದಗಿಸುತ್ತಿರುವ ಕರಕುಶಲಕರ್ಮಿಗಳ ಸಮಾಗಮವೂ ನಮ್ಮ ಸಂತೆಯಲ್ಲಿ ಆಗಲಿದೆ. ಅನೇಕರು ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳನ್ನು ಸಿದ್ಧಪಡಿಸಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದರೂ ಜನಪ್ರಿಯತೆ ಪಡೆದಿರುವುದಿಲ್ಲ. ನಮ್ಮ ಸಂತೆಯು ಇಂತಹ ಅನೇಕರ ಉದ್ಯಮ ಬಲವರ್ಧನೆಗೂ ಸಮರ್ಥ ವೇದಿಕೆಯಾಗಲಿದೆ.

ಕರಕುಶಲ ವಸ್ತುಗಳ ಉತ್ಪಾದನೆಗೆ ಉತ್ತೇ ಜನ ಸಿಕ್ಕಾಗ ಸ್ಥಳೀಯ ಆರ್ಥಿಕತೆಗೂ ಬೆಂಬಲ ದೊರೆಯುತ್ತದೆ. ಆ ಮೂಲಕ ಕರಕುಶಲ ಕ್ಷೇತ್ರ ದಲ್ಲಿ ಕೆಲಸ ಮಾಡುತ್ತಿರುವವರ ಜೀವನವೂ ಸುಧಾರಿಸಲಿದೆ. ನಮ್ಮ ಸಂತೆಯಲ್ಲಿ ಕುಶಲ

ಕರ್ಮಿಗಳು ತಾವು ಸಿದ್ಧಪಡಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡುವ ಮೂಲಕ ತಮ್ಮ ಮಾರುಕಟ್ಟೆ ವ್ಯವಸ್ಥೆಯನ್ನು ಇನ್ನಷ್ಟು ವಿಸ್ತರಿಸಿಕೊಳ್ಳಲಿದ್ದಾರೆ. ಒಂದೇ ಸೂರಿನಡಿ ಹಲವು ಪ್ರದೇಶದ ಗ್ರಾಹಕರು ಕುಶಲಕರ್ಮಿಗಳಿಗೆ ಸಿಗಲಿದ್ದಾರೆ. ಇದರಿಂದ ಉತ್ಪಾದಕರ ಸಂಪರ್ಕ ವ್ಯವಸ್ಥೆಯೂ ವೃದ್ಧಿ ಯಾಗಲಿದೆ. ಇದರ ಜತೆಗೆ ಉತ್ಪಾದಕರಿಗೆ ಮಾರುಕಟ್ಟೆ ವಿಸ್ತರಣ ಸಹಿತವಾಗಿ ತಮ್ಮ ಉತ್ಪಾದನ ಕ್ಷೇತ್ರದ ಬಲವರ್ಧನೆಗೆ ಪೂರಕವಾದ ಮಾಹಿತಿ ನೀಡುವ ವ್ಯವಸ್ಥೆಯೂ ಇರಲಿದೆ.

ದೇಶಿಯ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವುದರ ಜತೆಗೆ ಅದರ ಮಹತ್ವ  ಸಮಾಜಕ್ಕೆ ತಿಳಿಸುವುದು ಪ್ರಸ್ತುತದ ಅನಿ ವಾರ್ಯತೆಯಾಗಿದೆ. ಕರಕುಶಲ, ಪಾರಂಪರಿಕ ಕಲಾ ಪ್ರಕಾರಗಳ ವಸ್ತುಗಳ ಮಾರಾಟಕ್ಕೆ ಬೆಂಬಲ ಹಾಗೂ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡುವ ಆಶಯದಿಂದ ನಮ್ಮ ಸಂತೆ ಆಯೋಜಿಸಲಾಗಿದೆ. ಉತ್ಪಾದಕರು ಮತ್ತು ಗ್ರಾಹಕರ ನಡುವೆ ಅತ್ಯಂತ ವಿಶಿಷ್ಟ ಕೊಂಡಿಯಾಗಿ ನಮ್ಮ ಸಂತೆ ರೂಪುಗೊಳ್ಳಲಿದ್ದು, ಇದೊಂದು ಅಪರೂಪದ ವಿಶಿಷ್ಟ ಸಂತೆಯಾಗಿ ಜನಮನ ಸೂರೆಗೊಳ್ಳಲಿದೆ.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.