ನಂಚಾರು ಶಾಲೆ: ಸರಕಾರಿ ಮಂಜೂರಾತಿಗೆ ಮನವಿ
Team Udayavani, Jul 19, 2019, 5:29 AM IST
ಬ್ರಹ್ಮಾವರ: ನಂಚಾರು ಶಾಲೆಯು ಸರಕಾರಿ ಶಾಲೆಯಾಗಿ ಘೋಷಣೆಯಾಗಿದ್ದರೂ ಸರಕಾರಿ ಮಂಜೂರಾತಿ ಆದೇಶ ದೊರೆಯದ ಕಾರಣ ಅತಂತ್ರ ಸ್ಥಿತಿಯಲ್ಲಿದೆ.
ಶಾಲೆಗೆ ಡೈಸ್ ಕೋಡ್ ಇನ್ನೂ ದೊರೆತಿಲ್ಲ. ಇದರಿಂದ ಮಕ್ಕಳ ಮಾಹಿತಿಗಳನ್ನು ಆನ್ಲೈನ್ನಲ್ಲಿ ದಾಖಲಿಸಲು, ವಿದ್ಯಾರ್ಥಿಗಳು ವಿವಿಧ ಸರಕಾರಿ ಸೌಲಭ್ಯಗಳನ್ನು ಪಡೆಯಲು, ಎಸ್.ಡಿ.ಎಂ.ಸಿ. ರಚಿಸಲು, ಖಾಯಂ ಸರಕಾರಿ ಶಿಕ್ಷಕರ ನೇಮಕಕ್ಕೆ ತೊಂದರೆಯಾಗಿದೆ. ಇವೆಲ್ಲದಕ್ಕೂ ಸರಕಾರಿ ಆದೇಶ ಅಗತ್ಯವಾಗಿರುತ್ತದೆ.
ಶಾಲಾ ಹಿನ್ನೆಲೆ
ಸುಮಾರು 65 ವರ್ಷಗಳ ಹಿಂದೆ ನಂಚಾರು ಗ್ರಾಮದಲ್ಲಿ ದಿ| ಸುಬ್ಬಣ್ಣ ಕರಬರು ಶ್ರೀ ಸುದರ್ಶನ ಅನುದಾನಿತ ಕಿ.ಪ್ರಾ. ಶಾಲೆ ಸ್ಥಾಪಿಸಿದ್ದರು. 2019ರ ಮೇ 31ರಂದು ಮುಖ್ಯ ಶಿಕ್ಷಕರಾಗಿದ್ದ ಜಯ ನಾಯ್ಕ ಅವರು ಸೇವಾ ನಿವೃತ್ತಿಯಾಗುವು ದರೊಂದಿಗೆ ಅಧ್ಯಾಪಕರಿಲ್ಲದೆ ಮಕ್ಕಳ ಸಂಖ್ಯೆಯೂ ಕಡಿಮೆಯಾಗಿ ಶಾಲೆ ಮುಚ್ಚುವ ಪರಿಸ್ಥಿತಿ ಎದುರಾಗಿತ್ತು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಊರ ನಾಗರಿಕರು ಎಚ್ಚೆತ್ತು ಸ್ಥಳೀಯ ಜನಪ್ರತಿನಿಧಿಗಳ ಮೂಲಕ ಶಿಕ್ಷಣ ಇಲಾಖೆಯ ಅಧಿಕಾರಿಯವರಿಗೆ ಮನವರಿಕೆ ಮಾಡಿಸಿ, ಈ ಶಾಲೆಯನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಾಗಿ ಪರಿವರ್ತಿಸಬೇಕು ಎಂಬ ಬೇಡಿಕೆಯನ್ನು ಇಟ್ಟರು. ಅಧಿಕಾರಿಗಳು ಸಕಾಲಕ್ಕೆ ಸ್ಪಂದಿಸಿ ಸರಕಾರಿ ಶಾಲೆಯಾಗಿ ಘೋಷಿಸಿದರು.
ಹಳೆವಿದ್ಯಾರ್ಥಿ ಸಂಘ
ಹಳೆ ವಿದ್ಯಾರ್ಥಿಗಳು ಸೇರಿಕೊಂಡು ಶಾಲೆಯ ಅಭಿವೃದ್ಧಿಯ ಬಗ್ಗೆ ಹಳೆ ವಿದ್ಯಾರ್ಥಿ ಸಂಘವನ್ನು ರಚಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ ಉಚಿತವಾದ ಸಾರಿಗೆ ವಾಹನ ಸೌಲಭ್ಯ, ಇಬ್ಬರು ಗೌರವ ಶಿಕ್ಷಕಿಯರನ್ನು ನೇಮಿಸಿಕೊಂಡು ಅವರಿಗೆ ಸಂಭಾವನೆ ನೀಡುವುದು, ಹಾಗೆಯೇ ಶಾಲೆಯ ಇತರ ಅಗತ್ಯತೆಗಳನ್ನು ಪೂರೈಸುವ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಅಧ್ಯಾಪಕರ ನೇಮಕಾತಿ ಬಹಳ ಅಗತ್ಯವಾಗಿದೆ. ಆದ್ದರಿಂದ ಸರಕಾರ ಹಾಗೂ ಶಿಕ್ಷಣ ಇಲಾಖೆಯವರು ಈ ಬಗ್ಗೆ ಕೂಡಲೇ ಸ್ಪಂದಿಸಿ, ಶಾಲೆಗೆ ಆದಷ್ಟು ಬೇಗ ಸರಕಾರಿ ಮಂಜೂರಾತಿ ಆದೇಶ, ಡೈಸ್ ಕೋಡ್ನ್ನು ನೀಡಬೇಕು. ಇಬ್ಬರು ಖಾಯಂ ಸರಕಾರಿ ಶಿಕ್ಷಕರನ್ನು ನೇಮಕಾತಿ ಮಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಎಲ್ಲಾ ರೀತಿಯ ಅನುಕೂಲತೆಗಳನ್ನು ಒದಗಿಸಿಕೊಡಬೇಕಾಗಿ ಮನವಿ ಮಾಡಿದ್ದಾರೆ.
ಅನುದಾನಿತ ಶಾಲೆಗಳನ್ನು ಸರಕಾರವು ತನ್ನ ತೆಕ್ಕೆಗೆ ತೆಗೆದುಕೊಂಡು ಸರಕಾರಿ ಶಾಲೆಯಾಗಿ ಪರಿವರ್ತಿಸುವ ಯೋಜನೆ ಈ ಹಿಂದೆ ಚಾಲ್ತಿಯಲ್ಲಿತ್ತು. ಆದರೆ ಈಗ ಆ ಯೋಜನೆ ಇಲ್ಲದಿರುವುದರಿಂದ ಹೊಸ ಸರಕಾರಿ ಶಾಲೆ ಪ್ರಾರಂಭಿಸುವ ಪೂರ್ಣ ಪ್ರಕ್ರಿಯೆ ನಡೆಯಬೇಕಿದೆ.ಪ್ರಸ್ತುತ ನಂಚಾರು ಶಾಲೆಯಲ್ಲಿ 25 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಯವರು ಓರ್ವ ಸರಕಾರಿ ಶಿಕ್ಷಕರನ್ನು, ಓರ್ವ ಗೌರವ ಶಿಕ್ಷಕರನ್ನು ನಿಯೋಜನೆ ಮಾಡಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು