ಶಾಲಾ ಮಕ್ಕಳ ಪಾಲಿಗೆ ಇನ್ನೂ ಆಗದ “ನಂದನವನ’

ಮಳೆಗೆ ಕಟ್ಟಡ ಉರುಳಿಬಿದ್ದು 6 ತಿಂಗಳಾದರೂ ಇನ್ನೂ ನಿರ್ಮಿಸಿಲ್ಲ!

Team Udayavani, Jan 24, 2020, 6:02 AM IST

2301UPPE4-1

ಉಪ್ಪುಂದ: ಹೆಸರಿಗೆ ಇದು ನಂದನವನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ. ಆದರೆ ಶಾಲಾ ಮಕ್ಕಳ ಪಾಲಿಗೆ ನಂದನವನ ಆಗಿಲ್ಲ. ಕಾರಣ 6 ತಿಂಗಳ ಹಿಂದೆ ಭಾರೀ ಮಳೆಗೆ ಶಾಲೆಯ ಕೊಠಡಿಗಳು ಧರಾಶಾಯಿಯಾಗಿದ್ದರೂ ಆಡಳಿತ ಮರುನಿರ್ಮಾಣಕ್ಕೆ ಮುಂದಾಗಿಲ್ಲ!

ಕುಸಿದ ಕಟ್ಟಡ
ಕೆರ್ಗಾಲು ಗ್ರಾ.ಪಂ. ವ್ಯಾಪ್ತಿಯ ಈ ಶಾಲೆ 1914ರಲ್ಲಿ ಸ್ಥಾಪನೆಯಾಗಿದ್ದು ಶತಮಾನ ಪೂರೈಸಿದೆ. ಇಲ್ಲಿ ಎಲ್‌ಕೆಜಿಯಿಂದ 5ನೇ ತರಗತಿಯ ವರೆಗೆ ಶಿಕ್ಷಣ ನೀಡಲಾಗುತ್ತಿದೆ. 25 ವಿದ್ಯಾರ್ಥಿಗಳೂ ಇದ್ದಾರೆ. ಕಳೆದ ಆ.10ರ ಮಳೆಗೆ ಶಾಲೆಯ ಮೂರು ಕೊಠಡಿ ಕುಸಿದಿದ್ದು ಸಮಸ್ಯೆಯಾಗಿತ್ತು. ಅಂದು ಜನಪ್ರತಿನಿಧಿಗಳು, ಅಧಿಕಾರಿಗಳಿಂದ ಭರವಸೆ ದೊರೆತಿದ್ದರೂ ಈಡೇರಿಲ್ಲ.

ಒಂದೇ ಕೊಠಡಿ!
ಇದೀಗ ಒಂದೇ ಕೊಠಡಿ ಮಾತ್ರ ಇದು ಎಲ್ಲ ವಿದ್ಯಾರ್ಥಿಗಳು ಅದರಲ್ಲಿಯೇ ಕುಳಿತು ಕೊಳ್ಳಬೇಕು.ಅಲ್ಲದೇ ಶಿಕ್ಷಕರ ಕೊಠಡಿ, ಶಾಲಾ ದಾಖಲಾತಿ ಎಲ್ಲದಕ್ಕೂ ಇದೊಂದೇ ಕೊಠಡಿ ಇದೆ.

ಅಡುಗೆ ಕೋಣೆಯಲ್ಲೂ ಪಾಠ
4ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಗೆ ಎಲ್ಲರೊಂದಿಗೆ ಪಾಠ ಹೇಳಲು ಸಾಧ್ಯವಾಗದ್ದರಿಂದ ಅಡುಗೆಕೋಣೆಯಲ್ಲಿ ಪಾಠ ಮಾಡಲಾಗುತ್ತಿದೆ. ಇದೂ ಮಳೆಗಾಲದಲ್ಲಿ ಸೋರುತ್ತದೆ. ಬದಿಯಲ್ಲಿ ಅಡುಗೆ ಕೂಡ ಮಾಡಲಾಗುತ್ತದೆ.

ಭರವಸೆ ಮಾತ್ರ
ಇಲ್ಲಿ ಕನಿಷ್ಠ ಮೂಲಸೌಕರ್ಯ ವಿಲ್ಲದೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ನಿತ್ಯ ಸಮಸ್ಯೆಯಾಗುತ್ತಿದೆ. ಶಾಲಾ ಅಭಿವೃದ್ಧಿಗೆ ಸಹಕರಿಸುವಂತೆ ಶಿಕ್ಷಣ ಸಚಿವರಿಗೆ, ಶಿಕ್ಷಣ ಇಲಾಖೆಗೆ ಇ-ಮೇಲ್‌ ಮೂಲಕ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರಕಿಲ್ಲ. ಜನಪ್ರತಿನಿಧಿಗಳಿಂದ ಭರವಸೆ ಮಾತ್ರ ಸಿಕ್ಕಿದ್ದು, ಕೆಲಸ ಯಾವಾಗ ಆಗುತ್ತದೆ ಎಂದು ಹೆತ್ತವರು ಪ್ರಶ್ನಿಸುತ್ತಿದ್ದಾರೆ.

ತುರ್ತು ಅಗತ್ಯ
ಇನ್ನು ಕೆಲವೇ ತಿಂಗಳಲ್ಲಿ ಮಳೆಗಾಲ ಆರಂಭವಾಗಲಿದೆ. ಹೆತ್ತವರು ತಮ್ಮ ಮಕ್ಕಳ ಭವಿಷ್ಯದ ಕುರಿತು ಚಿಂತಿಸುತ್ತಿದ್ದಾರೆ. ಕನಿಷ್ಠ 2 ತರಗತಿ ಕೋಣೆ, 1 ಆಫೀಸ್‌ ರೂಮ್‌, 1 ಶೌಚಾಲಯ ಹಾಗೂ ಅಗತ್ಯ ಪೀಠೊಪಕರಣಗಳು ಶಾಲೆಗೆ ತುರ್ತು ಅಗತ್ಯವಿದೆ.

ನಮ್ಮ ನೋವು ಅರ್ಥ ಮಾಡಿಕೊಳ್ಳಿ
ಶಿಕ್ಷಣ ಸಚಿವರಿಗೆ, ಸಂಸದರಿಗೆ ಮತ್ತು ಸಂಬಂಧಪಟ್ಟ ಇಲಾಖೆ ಶಾಲೆಯ ಸಮಸ್ಯೆಗಳ ಬಗ್ಗೆ ಮೇಲ್‌ ಮೂಲಕ ತಿಳಿಸಲಾಗಿದೆ, ಆದರೆ ಸ್ಪಂದನೆ ಇಲ್ಲ. ಮಳೆಗಾಲ ಹತ್ತಿರವಾಗುತ್ತಿದೆ. ಇಲ್ಲಿ ಕಲಿಯುವ ಮಕ್ಕಳ ಹೆತ್ತವರು ಆರ್ಥಿಕವಾಗಿ ಹಿಂದುಳಿದವರು ನಮ್ಮ ನೋವನ್ನು ಶಿಕ್ಷಣ ಇಲಾಖೆಯವರು ಅರ್ಥಮಾಡಿಕೊಳ್ಳಲಿ.
– ಶಾರದಾ,ಎಸ್‌ಡಿಎಂಸಿ ಅಧ್ಯಕ್ಷೆ

ಬೇರೆ ಕೋಣೆ ಇಲ್ಲ
ನಾವು ಬಡವರು ಖಾಸಗಿ ಶಾಲೆಗೆ ಕಳಿಸುವಷ್ಟು ಸಾಮರ್ಥ್ಯ ಇಲ್ಲ. ಸುತ್ತಲೂ ಹೊಳೆ, ತೋಡುಗಳಿಂದ ಸುತ್ತುವರಿದ ಪ್ರದೇಶವಾಗಿದ್ದರಿಂದ ಬೇರೆ ಶಾಲೆಗೆ ಕಳುಹಿಸಲು ಸಾಧ್ಯವಿಲ್ಲ. ಅಂದು ಎಲ್ಲ ಅಧಿಕಾರಿಗಳು ಜನಪ್ರತಿನಿಧಿಗಳು ಬಂದು ಹೋದರೂ, ಯಾರೂ ಶಾಲೆ ಪುನರ್‌ನಿರ್ಮಾಣ ಬಗ್ಗೆ ಚಿಂತಿಸಿಲ್ಲ.
-ಮಲ್ಲಿಕಾ,ಹೆತ್ತವರು

ಅನುದಾನ
ಕೊಠಡಿ ನಿರ್ಮಾಣಕ್ಕೆ 10 ಲಕ್ಷ ರೂ.ಅನುದಾನ ನೀಡಲಾಗಿದೆ. ಸದ್ಯದಲ್ಲೇ ಹಣ ಬಿಡುಗಡೆಯಾಗಲಿದೆ. ಹಾಗೇ ಜಿಲ್ಲಾಧಿಕಾರಿ ಅವರ ಬಳಿ ಮಾತನಾಡಿದ್ದು ಪ್ರಕೃತಿಕ ವಿಕೋಪದಡಿ ಅನುದಾನ ನೀಡಲು ತಿಳಿಸಿದ್ದೇನೆ. ಇದರಿಂದ ಮತ್ತೂಂದು ಅನುದಾನ ಸಿಗಲಿದೆ. ಶಾಲೆಯ ಎಲ್ಲ ಕೆಲಸಗಳನ್ನು ಮಾಡಿಕೊಡುತ್ತೇನೆ.
-ಬಿ.ಎಂ.ಸುಕುಮಾರ್‌ ಶೆಟ್ಟಿ,ಶಾಸಕರು

-ಕೃಷ್ಣ ಬಿಜೂರು

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.