ಪುತ್ತಿಗೆ ಶ್ರೀಗಳಿಂದ ನಂದಿ ಕೊಡುಗೆ


Team Udayavani, Sep 7, 2017, 9:58 AM IST

07-REP-14.jpg

ಕಾಪು: ಉಡುಪಿ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸಂಕಲ್ಪದಂತೆ ಮಹತೋಭಾರ ಎಲ್ಲೂರು ಶ್ರೀ ವಿಶ್ವೇಶ್ವರ ದೇವರ
ಸೇವೆಗಾಗಿ ಆಂಧ್ರಪ್ರದೇಶದಿಂದ ತರಿಸಿರುವ ನಂದಿ “ಶಿವೇಂದ್ರ’ನನ್ನು ಬುಧವಾರ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪುತ್ತಿಗೆ ಶ್ರೀಗಳು ಮಾತನಾಡಿ, ಎಲ್ಲೂರು ದೇವಸ್ಥಾನದ ನಂದಿಕೇಶ್ವರನಿಗೂ ಉಡುಪಿ ಶ್ರೀಕೃಷ್ಣ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಸುಮಾರು 500 ವರ್ಷಗಳ ಹಿಂದೆ ಸೋದೆ ವಾದಿರಾಜ ಶ್ರೀಗಳು ದೇವಸ್ಥಾನಕ್ಕೆ ಬಂದಾಗ ದೇಗುಲದ ಬಾಗಿಲು ಮುಚ್ಚಲ್ಪಟ್ಟಿದ್ದು, ಬಳಿಕ ಅವರು ರುದ್ರ ದೇವನನ್ನು ಪ್ರಾರ್ಥಿಸಿದಾಗ ನಂದಿ ಕೇಶ್ವರ ಬಂದು ಬಾಗಿಲು ತೆರೆದು ದೇವರ ದರ್ಶನ ಮಾಡಿಸಿದನೆಂಬ ಐತಿಹ್ಯವಿದೆ. ಈ ಹಿನ್ನೆಲೆಯಲ್ಲಿ ಎಲ್ಲೂರು ವಿಶ್ವೇಶ್ವರ ದೇವರ ಸನ್ನಿಧಿಗೆ ನಂದಿ ಸಮರ್ಪಿಸಲು ನಮಗೆ ಅವಕಾಶ ದೊರಕಿರುವುದು ನಮ್ಮ ಪಾಲಿನ ಸುಯೋಗವಾಗಿದೆ ಎಂದರು.

ಶಿವನ ದರ್ಶನವಾಗಲಿ 
ಈ ನಂದಿಗೆ ಹುಟ್ಟಿದಾಗಲೇ ಶಿವ ಎಂದು ನಾಮಕರಣ ಮಾಡಲಾಗಿತ್ತು. ದೈವ ಸಂಕಲ್ಪ ಎಂಬಂತೆ ಶಿವನೇ ವಿಶ್ವನಾಥನ ಸನ್ನಿಧಿಗೆ ಸೇವೆಗಾಗಿ ಬಂದಿದ್ದು, ಶಿಷ್ಯಂದಿರಾದ ಚೆನ್ನೈಯ ರಾಜಭವನ್‌ ಹೊಟೇಲ್‌ ಮಾಲಕ ಬಾಲಕೃಷ್ಣ ರಾವ್‌ ಅವರ ಮೂಲಕ, ಸಂತೋಷ್‌ ಪಿ. ಶೆಟ್ಟಿ ತೆಂಕರಗುತ್ತು ಅವರ ಮುತುವರ್ಜಿಯಲ್ಲಿ ಇಲ್ಲಿಗೆ ತಂದು ಸಮರ್ಪಿಸಲಾಗಿದೆ. ನಂದಿ ಕೇಶ್ವರನ ಮೂಲಕ  ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಶಿವನ ದರ್ಶನ ವಾಗಲಿ ಎಂದು ಹಾರೈಸಿದರು.

ಚಿತ್ರಾಪುರ ಮಠದ ಕಿರಿಯ ಯತಿ ಗಳಾದ ಶ್ರೀ ವಿದ್ಯೆದ್ರತೀರ್ಥ ಸ್ವಾಮೀಜಿ, ಶಾಸಕ ವಿನಯಕುಮಾರ್‌ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ರಾಜ್ಯ  ಧಾರ್ಮಿಕ ಪರಿಷತ್‌ ಸದಸ್ಯ ವೇ| ಮೂ| ಕೇಂಜ ಶ್ರೀಧರ ತಂತ್ರಿ, ಪವಿತ್ರಪಾಣಿ ಕೆ.ಎಲ್‌. ಕುಂಡಂತಾಯ, ಅದಾನಿ- ಪಿಸಿಎಲ್‌ನ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ, ಗಣ್ಯರಾದ ಡಾ| ದೇವಿಪ್ರಸಾದ್‌ ಶೆಟ್ಟಿ, ಸುರೇಶ್‌ ಶೆಟ್ಟಿ ಗುರ್ಮೆ, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಯಶವಂತ್‌ ಶೆಟ್ಟಿ, ಸಂತೋಷ್‌ ಪಿ. ಶೆಟ್ಟಿ ತೆಂಕರಗುತ್ತು, ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ಕೇಶವ ಮೊಲಿ, ವಸಂತಿ ಮಧ್ವರಾಜ್‌, ಜಯಂತ ಭಟ್‌, ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೈ. ಪ್ರಫುಲ್ಲ ಶೆಟ್ಟಿ ಎಲ್ಲೂರುಗುತ್ತು, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್‌ ಕುಮಾರ್‌ ಶೆಟ್ಟಿ, ತಂತ್ರಿಗಳಾದ ಬೆಟ್ಟಿಗೆ ವೆಂಕಟರಾಜ ತಂತ್ರಿ, ಅರ್ಚಕ ವೆಂಕಟೇಶ್‌ ಭಟ್‌, ಆಡಳಿತ ಮಂಡಳಿ ಸದಸ್ಯರಾದ ಶೇಖರ್‌ ಡಿ. ಶೆಟ್ಟಿ, ನಿರಂಜನ್‌ ಶೆಟ್ಟಿ, ನರಸಿಂಹ ಜೆನ್ನಿ, ಜಯಲಕ್ಷ್ಮೀ ಆಳ್ವ, ಬಾಲಕೃಷ್ಣ ಪಣಿಯೂರು, ಸೋಮನಾಥ ಪೂಜಾರಿ, ವಿಜಯಲಕ್ಷ್ಮೀ ದೇವಾಡಿಗ, ಪ್ರಬಂಧಕ ರಾಘವೇಂದ್ರ ರಾವ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.