ಭ್ರಷ್ಟ ನರಕಾಸುರರ ನಿರ್ಮೂಲನ ಮಹಿಳೆಯರಿಂದ ಸಾಧ್ಯ: ಪೇಜಾವರಶ್ರೀ
Team Udayavani, Mar 10, 2017, 1:58 PM IST
ಉಡುಪಿ: ನರಕಾಸುರ ವಧೆಗೆ ಶ್ರೀಕೃಷ್ಣನಿಗೆ ಪ್ರೇರಣೆ ಕೊಟ್ಟದ್ದು ಸತ್ಯಭಾಮೆ. ಈಗ ಭ್ರಷ್ಟ ನರಕಾಸುರರ ನಿರ್ಮೂಲನ ಮಹಿಳೆಯರಿಂದ ಸಾಧ್ಯ ಎಂದು ಪರ್ಯಾಯ ಶ್ರೀಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ತಿಳಿಸಿದರು.
ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಗುರುವಾರ ಆಯೋಜಿಸಿದ ವಿಶ್ವ ಮಹಿಳಾ ದಿನಾಚರಣೆಯನ್ನು ಉದ್ಘಾಟನೆ ಮಾಡಿ ಆಶೀರ್ವಚನ ನೀಡಿದ ಅವರು ಪತಿಯ ಸುಖ ದುಃಖಗಳಲ್ಲಿ ಸಮಭಾಗಿಗಳಾಗಿ ಆದರ್ಶ ಸಮಾಜವನ್ನು ರೂಪಿಸಬೇಕೆಂದು ಮಹಿಳಾ ಸಮುದಾಯಕ್ಕೆ ಕರೆ ನೀಡಿದರು.
ಅಧ್ಯಕ್ಷತೆಯನ್ನು ಹೂಡೆ ಅರೇಬಿಕ್ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಖುಲ್ಸಮ… ಅಬೂಬಕ್ಕರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಕುಂದಾಪುರದ ಸಹಾಯಕ ಆಯುಕ್ತೆ ಶಿಲ್ಪ$ನಾಗ್ ಭಾಗವಹಿಸಿದ್ದರು. ಒಕ್ಕೂಟದ ಅಧ್ಯಕ್ಷೆ ಶೀಲಾ ಕೆ.ಶೆಟ್ಟಿ ಸ್ವಾಗತಿಸಿ ಪ್ರಸನ್ನ ಭಟ್ ವಂದಿಸಿದರು. ಜಿಲ್ಲಾಧಿಕಾರಿ, ಸಹಾಯಕ ಆಯುಕ್ತೆ, ಪ್ರಾಂಶುಪಾಲೆ, ಹಿರಿಯರಾದ ಸರಳಾ ಕಾಂಚನ್ ಮತ್ತು ಉತ್ತಮ ಸಂಘಟನೆಯ ಪರವಾಗಿ ಚೇರ್ಕಾಡಿ ಸಮೃದ್ಧಿ ಮಹಿಳಾ ಮಂಡಳಿಯನ್ನು ಸಮ್ಮಾನಿಸಲಾಯಿತು. ಜತೆ ಕಾರ್ಯದರ್ಶಿ ಗೀತಾ ರವಿ, ಉಪಾಧ್ಯಕ್ಷೆ ಸುಶ್ಮಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಯಶೋದಾ ಜೆ. ಶೆಟ್ಟಿ, ಉಪಾಧ್ಯಕ್ಷೆ ಸುಪ್ರಭಾ ಆಚಾರ್ಯ, ಕೋಶಾಧಿಕಾರಿ ಮಮತಾ ಎಸ್. ಶೆಟ್ಟಿ, ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ವಸಂತಿ ರಾವ್ ಕೊರಡ್ಕಲ…, ಕುಂದಾಪುರ ತಾಲೂಕು ಒಕ್ಕೂಟದ ಅಧ್ಯಕ್ಷೆ ರಾಧಾದಾಸ್ ಉಪಸ್ಥಿತರಿದ್ದರು. ವಿವಿಧ ಮಹಿಳಾ ಮಂಡಳಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ