ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ನಿಯಮದಡಿ ಅವಕಾಶವಿಲ್ಲದಿದ್ದರೂ ಅನುಮತಿ ನೀಡಿದ್ದ ಜಿ.ಪಂ.

Team Udayavani, May 28, 2024, 7:05 AM IST

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ಉಡುಪಿ: ಕರಾವಳಿಯಲ್ಲಿ ಅತ್ಯಗತ್ಯ ವಾಗಿರುವ ಕಾಲುಸಂಕಗಳನ್ನು ನರೇಗಾ ಯೋಜನೆ ಯಡಿ ನಿರ್ಮಿಸಲು ಜಿಲ್ಲಾ ಪಂಚಾಯತ್‌ ಹಾಗೂ ಜಿಲ್ಲಾಡಳಿತಗಳು ಕಳೆದ ವರ್ಷ ಎಲ್ಲ ಪಂಚಾಯತ್‌ಗಳಿಗೂ ಅನುಮತಿ ನೀಡಿದ್ದವು. ಹೀಗಾಗಿ ಅನೇಕ ಗ್ರಾ.ಪಂ.ಗಳಲ್ಲಿ ಕಾಲುಸಂಕ ನಿರ್ಮಾಣ ಆಗಿದೆ. ಆದರೆ ಈಗ ಸರಕಾರ ನರೇಗಾದಡಿ ಕಾಲುಸಂಕ ನಿರ್ಮಾಣಕ್ಕೆ ಅವಕಾಶವಿಲ್ಲ ಎಂದಿರುವುದು ಗ್ರಾ.ಪಂ.ಗಳಲ್ಲಿ ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಜಿ.ಪಂ. ಕೂಡ ಇಕ್ಕಟ್ಟಿಗೆ ಸಿಲುಕಿದೆ.

ನರೇಗಾದಡಿ ಕಾಲುಸಂಕ ನಿರ್ಮಿಸಲು ಅವಕಾಶ ಕೋರಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯುವ ಮೊದಲೇ ಜಿಲ್ಲೆಯಲ್ಲಿ ಕಾಲುಸಂಕ ನಿರ್ಮಿಸಲು ಸೂಚನೆ ಹೊರಡಿಸಲಾಗಿತ್ತು. ಅನಂತರ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತರು ಕೇಂದ್ರ ಸಚಿವಾಲಯಕ್ಕೆ ಪತ್ರ ಬರೆದು ಅನುಮತಿ ಕೋರಿದ್ದರು. ಆದರೆ ಕೇಂದ್ರದಿಂದ ನರೇಗಾದಡಿ ಕಾಲುಸಂಕ ನಿರ್ಮಿಸಲು ಅನುಮತಿ ಕೊಟ್ಟಿಲ್ಲ, ಬದಲಾಗಿ ಮೋರಿಗಳನ್ನು ಸ್ಥಾಪಿಸಬಹುದು ಎಂದಷ್ಟೇ ಹೇಳಿದೆ. ಹೀಗಾಗಿ ಈಗ ಕಾಲುಸಂಕ ನಿರ್ಮಾಣಕ್ಕೆ ನರೇಗಾದಡಿ ಅವಕಾಶ ಕೊಡಲಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಹಣ ಬರುತ್ತಿಲ್ಲ
ಜಿ.ಪಂ. ಸೂಚನೆಯಂತೆ 7 ಮೀಟರ್‌ಗಿಂತ ಕಡಿಮೆ ವ್ಯಾಪ್ತಿಯ ಕಾಲು ಸಂಕಗಳನ್ನು ನರೇಗಾದಡಿ ನಿರ್ಮಿಸಲು ಗ್ರಾ.ಪಂ.ಗಳಲ್ಲಿ ಕಳೆದ ವರ್ಷ ಕ್ರಿಯಾ ಯೋಜನೆಯಲ್ಲಿ ಜೋಡಿಸಿ ಜಿ.ಪಂ.ಗೆ ಕಳುಹಿಸಿಕೊಡಲಾಗಿತ್ತು. ಅದರಂತೆ ಅನೇಕ ಕಡೆ ಕಾಲುಸಂಕ ನಿರ್ಮಾಣ ಆಗಿದೆ. ಆದರೀಗ ನರೇಗಾದಡಿ ಕಾಲುಸಂಕ ನಿರ್ಮಿಸಲು ಅವಕಾಶವಿಲ್ಲ ಎನ್ನುವ ಸರಕಾರದ ನಿರ್ದೇಶನವು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಲುಸಂಕ ನಿರ್ಮಿಸಿದ ಗುತ್ತಿಗೆದಾರರಿಗೆ ಸಂಕಷ್ಟ ತಂದೊಡ್ಡಿದೆ. ಕೂಲಿಯಾಗಿ ದುಡಿದವರ ಹಣ ಅವರ ಖಾತೆಗೆ ಸಂದಾಯವಾಗಿದೆ. ಆದರೆ ಸಾಮಗ್ರಿ ಹಾಗೂ ಯಂತ್ರೋಪಕರಣಕ್ಕೆ ಸಂಬಂಧಿಸಿ ಶೇ. 40ರಷ್ಟು ಅನುದಾನ ಇನ್ನೂ ಬಂದಿಲ್ಲ.

ಈಗ ಅವಕಾಶವೇ ನೀಡುತ್ತಿಲ್ಲ
ನರೇಗಾದಡಿ ಕಾಲುಸಂಕ ನಿರ್ಮಿಸಲು ಅವಕಾಶವಿಲ್ಲ ಎಂದು ಸರಕಾರ ಲಿಖೀತವಾಗಿ ನಿರ್ದೇಶನ ನೀಡಿರುವುದರಿಂದ ಜಿ.ಪಂ.ಗಳು ಎಚ್ಚೆತ್ತುಕೊಂಡಿವೆ. ಈಗ ನರೇಗಾದಡಿ ಕಾಲುಸಂಕ ನಿರ್ಮಿಸಲು ಅನುಮತಿ ನೀಡುತ್ತಿಲ್ಲ. ಪ್ರಸ್ತಾವನೆ ನೀಡಿದ ಗ್ರಾ.ಪಂ.ಗಳಿಗೆ ನರೇಗಾದಡಿ ಅವಕಾಶ ನೀಡಲು ಆಗುತ್ತಿಲ್ಲ ಎಂದಷ್ಟೇ ಹೇಳುತ್ತಿದ್ದಾರೆ. ಯಾಕೆ ಅವಕಾಶ ಇಲ್ಲ ಮತ್ತು ಆಗಿರುವ ಸಮಸ್ಯೆ ಏನು ಎಂದು ಸ್ಪಷ್ಟವಾಗಿ ಹೇಳದೆ ಇರುವುದರಿಂದ ತಳಮಟ್ಟದಲ್ಲಿ ಗೊಂದಲ ಹಾಗೆಯೇ ಉಳಿದಿದೆ.

7 ಮೀ. ಕಡಿಮೆ
ಉದ್ದದ ಕಾಲುಸಂಕ
2 ವರ್ಷಗಳ ಹಿಂದೆ ಬೈಂದೂರು ತಾಲೂಕಿನ ಕಾಲೊ¤àಡು ಗ್ರಾಮದಲ್ಲಿ ಮಗುವೊಂದು ಕಾಲುಸಂಕದಿಂದ ನೀರಿಗೆ ಬಿದ್ದು ಮೃತಪಟ್ಟ ಬಳಿಕ ಉಭಯ ಜಿಲ್ಲೆಯಲ್ಲೂ ಗ್ರಾ.ಪಂ. ಪಿಡಿಒಗಳ ಮೂಲಕ ಕಾಲು ಸಂಕಗಳ ಸ್ಥಿತಿಗತಿ ಸರ್ವೇ ಮಾಡಲಾಗಿತ್ತು. ಎಲ್ಲ ಪಿಡಿಒಗಳು ತಮ್ಮ ವ್ಯಾಪ್ತಿಯ ಕಾಲುಸಂಕಗಳು, ಅಗತ್ಯವಾಗಿ ಆಗಬೇಕಿರುವ ಕಾಲುಸಂಕಗಳು, ದುರಸ್ತಿ ಕಾಣಬೇಕಿರುವ (ಕಚ್ಚಾ) ಕಾಲುಸಂಕಗಳ ಮಾಹಿತಿಯನ್ನು ಜಿ.ಪಂ.ಗೆ ಒದಗಿಸಿದ್ದರು. ಅದರಂತೆ 7 ಮೀಟರ್‌ಗಿಂತ ಕಡಿಮೆ ಉದ್ದದ ಕಾಲುಸಂಕಗಳನ್ನು ನರೇಗಾದಡಿ ನಿರ್ಮಿಸಲು ಜಿ.ಪಂ. ಅನುಮತಿ ನೀಡಿತ್ತು. 7 ಮೀಟರ್‌ಗಿಂತ ದೊಡ್ಡದಾದ ಕಾಲುಸಂಕ ಅಥವಾ ಅಣೆಕಟ್ಟು ಅಥವಾ ಕಿಂಡಿ ಅಣೆಕಟ್ಟು ಮತ್ತು ಸೇತುವೆಗಳನ್ನು ಸಣ್ಣ ನೀರಾವರಿ ಇಲಾಖೆ ಮತ್ತು ಪಿಡಬ್ಲ್ಯುಡಿ ಇಲಾಖೆ ಮಾಡಲಾಗುತ್ತಿದೆ.

ಇನ್ನೊಮ್ಮೆ ಮನವರಿಕೆ
ನರೇಗಾದಡಿ ಕಾಲುಸಂಕ ನಿರ್ಮಾಣಕ್ಕೆ ಅವಕಾಶ ಕೋರಿ ಇನ್ನೊಮ್ಮೆ ಕೇಂದ್ರಕ್ಕೆ ಪತ್ರ ರವಾನೆ ಮಾಡಲಿದ್ದೇವೆ. ಕರಾವಳಿ ಭಾಗದಲ್ಲಿ ಸಣ್ಣ ಸಣ್ಣ ಕಾಲು ಸಂಕಗಳು ಅವಶ್ಯವಾಗಿ ಆಗಬೇಕಿರುವು ದರಿಂದ ನರೇಗಾದಡಿ ಅವಕಾಶ ಕೊಡ ಬೇಕಾಗುತ್ತದೆ. ಕೇಂದ್ರ ಗ್ರಾಮೀಣಾಭಿ ವೃದ್ಧಿ ಸಚಿವಾಲಯಕ್ಕೆ ಸಮಸ್ಯೆಯ ಮನವರಿಕೆ ಮಾಡಿ ಅವಕಾಶ ಪಡೆಯ ಲಾಗುವುದು ಎಂದು ರಾಜ್ಯ ಪಂಚಾ ಯತ್‌ ರಾಜ್‌ ಹಾಗೂ ಗ್ರಾಮೀಣಾಭಿ ವೃದ್ಧಿ ಇಲಾಖೆಯ ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯ ಅಧಿಕಾರಿ ಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

- ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.