ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಮೋದಿ: ಕಾಗೇರಿ


Team Udayavani, Mar 21, 2019, 1:00 AM IST

kageri.jpg

ಕುಂದಾಪುರ: ದೇಶದ ಏಕತೆ, ಸಮಗ್ರತೆ, ಅಖಂಡತೆ, ರಕ್ಷಣೆಗಾಗಿ ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗಬೇಕು. ಇದೆಲ್ಲದರ ಜತೆಗೆ ಪ್ರಾಮಾಣಿಕ, ಭ್ರಷ್ಟಾಚಾರ ರಹಿತ ಆಡಳಿತ, ಜಾಗತಿಕ ಮಟ್ಟದಲ್ಲಿ ಭಾರತ ಸದಾ ಗೌರವದ ಸ್ಥಾನ ಪಡೆದಿರಲು ಮೋದಿ ಪ್ರಧಾನಿಯಾಗಲೇಬೇಕು ಎಂದು ಶಿರಸಿ ಶಾಸಕ ಕಾಗೇರಿ ವಿಶ್ವೇಶ್ವರ ಹೆಗಡೆ ಹೇಳಿದರು.

ಇಲ್ಲಿನ ಪಾರಿಜಾತ ಸಭಾಂಗಣದಲ್ಲಿ ಮೋದಿ ಸರಕಾರದ 5 ವರ್ಷಗಳ ಸಾಧನೆಯ ಒಳನೋಟ-ಪ್ರಬುದ್ಧರ ಗೋಷ್ಠಿಯಲ್ಲಿ ಮಾತನಾಡಿದರು.

ಮೋದಿ ಇನ್ನೊಮ್ಮೆ ಗೆದ್ದೇ ಗೆಲ್ಲುತ್ತಾರೆ. ಆದರೆ ಅಂತಹ ಅತಿಯಾದ ಆತ್ಮವಿಶ್ವಾಸ ಕಾರ್ಯಕರ್ತರಲ್ಲಿ ಇರಬಾರದು. ಹಾಗಾದಲ್ಲಿ ವಾಜಪೇಯಿ ಅವರ ಸರಕಾರಕ್ಕೆ ಒದಗಿದ ಸ್ಥಿತಿ ಬರಬಹುದು. ಆದ್ದರಿಂದ ನಿಮ್ಮ ವರ್ತುಲದಲ್ಲಿ ಇರುವ ಮತಗಳೂ ಬಿಜೆಪಿಗೆ ಬೀಳುವಂತೆ ಮಾಡಬೇಕು. ದೇಶಕ್ಕಾಗಿ ನಮ್ಮನ್ನು ನಾವು ಸಮರ್ಪಣಾ ಭಾವದಲ್ಲಿ ತೊಡಗಿಸಿಕೊಳ್ಳಬೇಕೆಂಬ ಭಾವ ಬಂದದ್ದು ಮೋದಿ ಸರಕಾರದಿಂದ ಎಂದರು.

ವಿದೇಶಗಳನ್ನು ತಿರುಗಿ ಭಾರತದ ಮೇಲೆ ದಾಳಿ ಮಾಡಿದ ಪಾಕಿಸ್ಥಾನಕ್ಕೆ ಉತ್ತರ ಕೊಟ್ಟ ಭಾರತದ ಧೈರ್ಯಕ್ಕೆ ಜಗತ್ತಿನ ಎಲ್ಲ ರಾಷ್ಟ್ರಗಳೂ ಬೆಂಬಲ ಕೊಡುವಂತೆ ಮಾಡಿದ್ದು ಮೋದಿ. ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಅಮೆರಿಕಾ ವೀಸಾ ನಿರಾಕರಿಸಿದರೂ ಈಗ ಕೆಂಪುಹಾಸಿನ ಸ್ವಾಗತ ನೀಡುತ್ತಿದೆ ಎಂದರೆ ಮೋದಿ ದೇಶದಲ್ಲಿ ಮಾಡಿದ ಆಡಳಿತಾತ್ಮಕ ಬದಲಾವಣೆ ಗಮನಿಸಬೇಕು. ರಿಮೋಟ್‌ ಕಂಟ್ರೋಲ್‌ ಆಗಿದ್ದ ಯುಪಿಎ ಪ್ರಧಾನಿ ವಿದೇಶಗಳಿಗೆ ಹೋದಾಗ ನಮ್ಮ ದೇಶದ ಕುರಿತು ಸದಭಿಪ್ರಾಯ ಮೂಡಿಸಲು ಸಾಧ್ಯವಾಗಲಿಲ್ಲ. ಸಾಲಗಾರ ದೇಶ, ಬಡವರ ದೇಶ, ಆರ್ಥಿಕ ಶಿಸ್ತಿಲ್ಲದ ದೇಶ ಎಂಬ ಹಣೆಪಟ್ಟಿಗಳಿದ್ದವು. ಆದರೆ ಸಾಧನೆಯನ್ನು ಮಾಡಿ ತೋರಿಸುವ ಮೂಲಕ ದೇಶದ ಹೆಸರನ್ನು ಎತ್ತರಕ್ಕೆ ಏರಿಸಿದ್ದು ಮೋದಿ ಎಂದರು.

ಬುದ್ಧಿವಂತರಾದವರು ವಿದೇಶಕ್ಕೆ ದುಡಿಯಲು ಹೋಗಬೇಕೆಂಬ ಪರಿಸ್ಥಿತಿ ತಂದಿಟ್ಟಿತ್ತು ಕಾಂಗ್ರೆಸ್‌. ತನ್ನ ಗಾಂಧಿ ವಂಶದವರ ಅಭಿವೃದ್ಧಿಗಷ್ಟೇ ಗಮನ ಕೊಟ್ಟಿತ್ತು. ಎಲ್ಲ ಯೋಜನೆಗಳಿಗೂ ಗಾಂಧಿ ಕುಟುಂಬದ ಹೆಸರೇ ಇಟ್ಟಿತ್ತು. ಸರಕಾರದ ಯೋಜನೆಗಳು ಮಂತ್ರಿಗಳ ಖಜಾನೆ ತುಂಬುತ್ತಿದ್ದವು ವಿನಾ ಬಡವರ ಮನೆ ತಲುಪುತ್ತಿರಲಿಲ್ಲ. ಇಂತಹ ಎಲ್ಲ ಅಪಸವ್ಯಗಳಿಗೆ ಮೋದಿ ಪೂರ್ಣವಿರಾಮ ಹಾಕಿ ಪಾರದರ್ಶಕ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಸ್ವಾರ್ಥ ಸಾಧನೆಯ ಒಡೆದು ಆಳುವ ನೀತಿಯ ಕಾಂಗ್ರೆಸ್‌ಗೆ ಈ ದೇಶ ಆಳುವ ಯೋಗ್ಯತೆ ಇಲ್ಲ ಎಂದರು.  
ಪುರಸಭೆ ಸದಸ್ಯ ಮೋಹನದಾಸ ಶೆಣೈ ವೇದಿಕೆಯಲ್ಲಿದ್ದರು. 

ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಂಕರ ಅಂಕದಕಟ್ಟೆ ಸ್ವಾಗತಿಸಿ, ನಿರ್ವಹಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.