ಕರಾವಳಿ ಬೈಪಾಸ್ ಸರ್ವಿಸ್ ರಸ್ತೆಯಲ್ಲಿನ ಹೊಂಡ: ವಾಹನ ಸವಾರರು ಕೆಂಡ
ರಾ.ಹೆ. ಪ್ರಾಧಿಕಾರ, ಗುತ್ತಿಗೆ ಸಂಸ್ಥೆಯ ನಿರ್ಲಕ್ಷ್ಯ; ಸವಾರರ ಜೀವಕ್ಕೆ ಸಂಚಕಾರ
Team Udayavani, Nov 3, 2019, 4:37 AM IST
ಉಡುಪಿ: ರಾ.ಹೆ. 66ರ ಕುಂದಾಪುರ -ಉಡುಪಿ ಮಾರ್ಗದ ಕರಾವಳಿ ಬೈಪಾಸ್ ಸರ್ವಿಸ್ ರಸ್ತೆಯ ನಿರ್ವಹಣೆ ಕೊರತೆಯಿಂದ ಉಂಟಾದ ಭಾರೀ ಗ್ರಾತದ ಹೊಂಡಗಳು ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸಿದೆ.
ರಾ.ಹೆ. 66ರ ಕರಾವಳಿ ಬೈಪಾಸ್ ರಸ್ತೆಯಲ್ಲಿ ಎಲ್ಲಿ ನೋಡಿದರೂ ಹೊಂಡಗುಂಡಿಗಳು. ರಸ್ತೆ ನಿರ್ವಹಣೆಯಲ್ಲಿ ರಾ.ಹೆ. ಪ್ರಾಧಿಕಾರ ಹಾಗೂ ಗುತ್ತಿಗೆ ಸಂಸ್ಥೆಯು ನಿರ್ಲಕ್ಷ್ಯ ವಹಿಸಿದ ಪರಿಣಾಮ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ಇದರಿಂದಾಗಿ ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರ ಜೀವಕ್ಕೆ ಸಂಚಕಾರ ತಂದಿದೆ.
ಮೃತ್ಯುಕೂಪದ ಹೊಂಡ
ಅನಾಹುತ ಸಂಭವಿಸುವ ಮುನ್ನ ರಾ.ಹೆ. ಇಲಾಖೆ ಹಾಗೂ ನವಯುಗ ಸಂಸ್ಥೆ ಎಚ್ಚರ ವಹಿಸಬೇಕಾಗಿದೆ. ರೋಗಿಗಳು, ವೃದ್ಧರು ಈ ಮಾರ್ಗದಲ್ಲಿ ಪ್ರಯಾಣ ಮಾಡದಂತಹ ಸನ್ನಿವೇಶ ಉದ್ಭವವಾಗಿದೆ. ನಿರೀಕ್ಷೆ ಮೀರಿದ ಸಂಖ್ಯೆಯಲ್ಲಿ ವಾಹನ ಸಂಚಾರವಿದೆ. ಕರಾವಳಿ ಜಂಕ್ಷನ್ ಉಡುಪಿ, ಮಂಗಳೂರು, ಮಲ್ಪೆ ಬಂದರು, ಬೀಚ್, ಕೊಲ್ಲೂರು, ಕುಂದಾಪುರ, ಮಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ನಿತ್ಯ ಸಾವಿರಾರು ಲಘುವಾಹನ ಸಂಚರಿಸುತ್ತದೆ. ದ್ವಿಚಕ್ರ ವಾಹನಗಳ ಸಂಚಾರ ಸಂಖ್ಯೆ ನಿಗದಿಸುವುದೇ ಕಷ್ಟ ಸಾಧ್ಯ. ರಸ್ತೆ ಹಾಳಾಗಿ ತಿಂಗಳುಗಳೇ ಕಳೆದಿವೆ. ಆದರೆ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಿಲ್ಲ.
ಎಲ್ಲಿ ಹೊಂಡಗಳು?
ಕರಾವಳಿ ಫ್ಲೈಒವರ್ನ ಅಂಡರ್ ಪಾಸ್, ಶಾರದಾ ಇಂಟರ್ ನ್ಯಾಶನಲ್ ಹೊಟೇಲ್, ನಿಟ್ಟೂರು ಸಮೀಪ ಹುಂಡೈ ಮಳಿಗೆ, ಕರಾವಳಿ ಹೊಟೇಲ್ ಎದುರಿನ ರಸ್ತೆಯಲ್ಲಿ ಭಾರೀ ಪ್ರಮಾಣ ಗುಂಡಿಗಳಿವೆ. ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಗುಂಡಿಗಳನ್ನು ತಪ್ಪಿಸಲು ಹೋಗಿ ಅಪಘಾತಕ್ಕೆ ತುತ್ತಾಗುತ್ತಿದ್ದಾರೆ.
ಸಂಚರಿಸಲು ಭಯ
ಕಾಲಕಾಲಕ್ಕೆ ನಿರ್ವಹಣೆ ಮಾಡದ ಕಾರಣದಿಂದ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ದ್ವಿಚಕ್ರ ವಾಹನ ಸವಾರರು ಈ ಮಾರ್ಗವಾಗಿ ಸಂಚರಿಸಲು ಭಯಪಡುವಂತಾಗಿದೆ.
-ರೂಪಾ ಬಂಗೇರಾ, ದ್ವಿಚಕ್ರವಾಹನ ಸವಾರರು.
ಹೊಂಡ ಭರ್ತಿಗೆ ಕ್ರಮ
ರಾಷ್ಟ್ರೀಯ ಹೆದ್ದಾರಿ ರಸ್ತೆ ಮಾರ್ಗದಲ್ಲಿನ ಹೊಂಡಗಳನ್ನು ಮಚ್ಚಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರಯಾಣಿಕರಿಂದಲೂ ಈ ಕುರಿತು ದೂರುಗಳು ಬರುತ್ತಿದ್ದು ತೊಂದರೆ ಆಗದಂತೆ ಎಚ್ಚರವಹಿಸಲಾಗುತ್ತದೆ.
-ನವೀನ್, ಎಂಜಿನಿಯರ್. ರಾ.ಹೆ. ಪ್ರಾಧಿಕಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು