ಪಹಣಿಯನ್ನು ಬೆಂಬಿಡದ “ರಾಷ್ಟ್ರೀಯ ಹೆದ್ದಾರಿ’ ಕಂಟಕ


Team Udayavani, Mar 4, 2020, 4:08 AM IST

national-highway

ಸಾಂದರ್ಭಿಕ ಚಿತ್ರ

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ಚತುಷ್ಪಥಕ್ಕಾಗಿ ಭೂ ಸ್ವಾಧೀನ ಪ್ರಕ್ರಿಯೆ ನಡೆದು ಶೇ.90ರಷ್ಟು ಕಾಮಗಾರಿ ನಡೆದಿದ್ದರೂ, ಹೆದ್ದಾರಿ ಪಕ್ಕ ತಮಗೆ ಬೇಕಾದ ಏನೊಂದೂ ಕಾಮಗಾರಿ ನಡೆಸದ ಸ್ಥಿತಿಯಲ್ಲಿ ಭೂಮಾಲಕರಿದ್ದಾರೆ. ಪಹಣಿಯಲ್ಲಿರುವ ಸರ್ವೆ ಸಂಖ್ಯೆಗಳಲ್ಲಿ ಇನ್ನೂ ರಾಷ್ಟ್ರೀಯ ಹೆದ್ದಾರಿ ಎಂದೇ ನಮೂದಾಗಿರುವುದರಿಂದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ.

ಏನಾಗಬೇಕಿತ್ತು?
ಎನ್‌ಎಚ್‌ಎಐ(ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ) ಹೆಸರಲ್ಲಿ ಕುಂದಾಪುರದ ಸಹಾಯಕ ಕಮೀಷನರ್‌ ಅವರು ಭೂಸ್ವಾಧೀನ ಪ್ರಕ್ರಿಯೆ ನಡೆಸಿದ ಬಳಿಕ ಆರ್‌ಟಿಸಿ (ಪಹಣಿ)ಯಲ್ಲಿ ಭೂಮಾಲಕರ ಒಟ್ಟು ಭೂಮಿಯ ವಿಸ್ತೀರ್ಣದಿಂದ ಸ್ವಾಧೀನಪಡಿಸಿದ ಭೂಮಿಯ ವಿಸ್ತೀರ್ಣ ಕಡಿತಗೊಳ್ಳಬೇಕು. ಅದು ಪ್ರಾಧಿಕಾರದ ಹೆಸರಿಗೆ ಆದಾಗ, ಉಳಿದ ಭೂಮಿಯಲ್ಲಿ ಭೂಮಾಲಕರು ತಮ್ಮ ಜಾಗವನ್ನು ಅಭಿವೃದ್ಧಿ ಪಡಿಸಲು ಅಥವಾ, ಸರ್ವೆ ಮಾಡಿಸಲು, ಭೂ ಪರಿವರ್ತನೆ ಮಾಡಿ ಮನೆ ಕಟ್ಟಲು ಅಥವಾ ಉದ್ದಿಮೆ ಉದ್ದೇಶದ ಸಂಕೀರ್ಣಗಳನ್ನು ಕಟ್ಟಲು ಸಾಧ್ಯವಾಗುತ್ತದೆ. ಆದರೆ ಇದೀಗ ವರ್ಷಗಳೇ ಕಳೆದು ಭೂಮಿಗೆ ಪರಿಹಾರವನ್ನು ಪಡೆದಿದ್ದರೂ ಪಹಣಿಯಲ್ಲಿರುವ ದೋಷದಿಂದಾಗಿ ಕಿರಿಕಿರಿ ಅನುಭವಿಸುವಂತಾಗಿದೆ.

ಕ್ರಿಯಾಲೋಪ?
ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿರುವ ಶೇ.50ರಷ್ಟು ಪಹಣಿಗಳು ಹೀಗೆ ದೋಷ ಹೊಂದಿವೆ. ಇದು ಅಧಿಕಾರಿಗಳ ಕಣ್ತಪ್ಪಿ ನಿಂದ ಆದ ಸಮಸ್ಯೆ ಎನ್ನಲಾಗುತ್ತಿದೆ. ಕುಂದಾಪುರದಲ್ಲಿ ಚಾರುಲತಾ ಅವರು ಸಹಾಯಕ ಕಮಿಷನರ್‌ ಆಗಿದ್ದಾಗ ಶೇ.50 ರಷ್ಟು ಪಹಣಿಗಳನ್ನು ಸಮಸ್ಯೆಯಿಂದ ಹೊರತರಲಾಗಿತ್ತು. ಇನ್ನೂ ಶೇ.50ರಷ್ಟು ಉಡುಪಿ ಭಾಗದಲ್ಲಿ ಉಳಿದಿವೆ. ಈ ಕಾರ್ಯದಲ್ಲಿ ಸರ್ವೆ ಇಲಾಖೆ ಮತ್ತು ಕಂದಾಯ ಇಲಾಖೆಗಳು ಜಂಟಿಯಾಗಿ ಕರ್ತವ್ಯ ನಿರ್ವಹಿಸಿದಲ್ಲಿ ಅತಿ ಶೀಘ್ರವಾಗಿ ಇದನ್ನು ಪರಿಹರಿಸಬಹುದಾಗಿದೆ.

ಕಾಪು ತಾ| ಬಹಳಷ್ಟು ಹಿಂದೆ
ಸ್ವಾಧೀನ ಬಳಿಕ ಪಹಣಿಯಲ್ಲಿ ರಾ.ಹೆ. ಹೆಸರನ್ನು ಮೂಲದಾಖಲೆಗಳಿಂದ ತೆಗೆಯುವುದು ಸರ್ವೆ ಮತ್ತು ಕಂದಾಯ ಇಲಾಖೆ ಕೆಲಸವಾಗಿದೆ. ಜಿಲ್ಲಾಧಿಕಾರಿ ಅವರ ಮೂಲಕ ಅಧಿಕಾರಿಗಳು ಈ ಕೆಲಸ ಮಾಡಬೇಕು. ಆದೇಶ ಬಳಿಕ ಮರು ದಾಖಲೀಕರಣಗಳಾಗಬೇಕು. ಆದರೆ ತಹಶೀಲ್ದಾರ್‌ ಸಹಿತ ಇತರ ಅಧಿಕಾರಿಗಳು ಈ ಬಗ್ಗೆ ಉತ್ತರಿಸುತ್ತಿಲ್ಲ. ಇದರ ಹೊಣೆ ನಮ್ಮದಲ್ಲ ಎನ್ನುತ್ತಾರೆ. ಕಾಪು ತಾಲೂಕಿನಲ್ಲಂತೂ ಇದಕ್ಕೆ ಸಂಬಂಧಿಸಿ ನಕ್ಷೆ ಅಥವಾ ದಾಖಲೆಗಳು ಬಂದಿಲ್ಲ. ಕಾಪು ತಾಲೂಕು ಪೂರ್ಣ ಪ್ರಮಾಣದಲ್ಲಿ ಆಗದೇ ಇರುವುದು ಇದಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರಾದ ದಿವಾಕರ್‌ ಎಂ.ಕೆ. ಹೇಳುತ್ತಾರೆ.

ಸಮಸ್ಯೆ ಪರಿಹರಿಸಲು ಕ್ರಮ
ಕಳೆದ ಸುಮಾರು 4 – 5 ತಿಂಗಳುಗಳಲ್ಲಿ ಸುಮಾರು 2000ದಷ್ಟು ಪಹಣಿಗಳಿಂದ ಹೆಸರು ತೆಗೆಯಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಬಳಿಕ ಕೋರ್ಟ್‌ನಲ್ಲಿ ಪರಿಹಾರದ ಮೊತ್ತ ಠೇವಣಿಗೊಂಡಿರುವ ಒಂದಷ್ಟು ಪ್ರಕರ‌ಣಗಳೂ ಇದರಲ್ಲಿ ಸೇರಿಕೊಂಡಿದೆ. ಕಾಪು ತಾಲೂಕಿನಲ್ಲೂ ಶೀಘ್ರ ಭೂನ್ಯಾಯ ಮಂಡಳಿ ರಚನೆ ಆಗಬೇಕಿದ್ದು, ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು.
-ರಾಜು ಕೆ., ಸಹಾಯಕ ಕಮಿಷನರ್‌, ಕುಂದಾಪುರ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.