ರಾಷ್ಟ್ರೀಯ ಹೆದ್ದಾರಿ ಅಧ್ವಾನ: ವಾಹನ ಸವಾರರೇ ಎಚ್ಚರ !

ಹೆದ್ದಾರಿ ಕಾಮಗಾರಿ ವೇಳೆ ರಸ್ತೆ ಬದಿ ಹಾಕಿದ್ದ ಮಣ್ಣು ಮಳೆನೀರಿಗೆ ಕೊಚ್ಚಿ ಹೋಗಿ ಅವಾಂತರ

Team Udayavani, Jun 15, 2019, 5:08 AM IST

1406KDPP1

ಕುಂದಾಪುರ: ಮುಂಗಾರು ನಿಧಾನಕ್ಕೆ ಬಿರುಸು ಪಡೆಯುತ್ತಿದ್ದಂತೆ, ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ ಅಧ್ವಾನ ಮಾತ್ರ ದಿನೇ ದಿನೇ ಹೆಚ್ಚಾಗುತ್ತಲೇ ಇದೆ.

ಹಲವೆಡೆಗಳಲ್ಲಿ ಹೆದ್ದಾರಿ ಬದಿ ಹಾಕಿದ ಮಣ್ಣು ಮಳೆಗೆ ಕೊಚ್ಚಿಕೊಂಡು ಹೋಗಿದ್ದು, ವಾಹನ ಸವಾರರು ರಸ್ತೆಯಿಂದ ಕೆಳಕ್ಕೆ ಇಳಿಸುವಾಗ ಎಚ್ಚರ ವಹಿಸಬೇಕಾಗಿದೆ.

ಕುಂದಾಪುರದಿಂದ ತಲ್ಲೂರು, ತ್ರಾಸಿಯವರೆಗಿನ ಹೆದ್ದಾರಿ ಕಾಮಗಾರಿ ವೇಳೆ ರಸ್ತೆ ಬದಿ ಅನೇಕ ಕಡೆಗಳಲ್ಲಿ ಮಣ್ಣು ಹಾಕಲಾಗಿದೆ.

ಆದರೆ ಅದೆಲ್ಲ ಮಳೆ ನೀರಲ್ಲಿ ಕೊಚ್ಚಿಕೊಂಡು ಹೋಗುತ್ತಿದೆ. ಕೆಲವೆಡೆಗಳಲ್ಲಿ ಮಣ್ಣೆಲ್ಲ ಹೋಗಿ ದೊಡ್ಡ ಹೊಂಡಗಳೇ ಸೃಷ್ಟಿಯಾಗಿವೆ.

ಹೊಸಾಡು ಗ್ರಾಮದ ಮುಳ್ಳಿಕಟ್ಟೆಯ ಹೆದ್ದಾರಿ ಬದಿಯುದ್ದಕ್ಕೂ ಹಾಕಲಾದ ಮಣ್ಣು ಅಲ್ಲಲ್ಲಿ ಮಳೆ ನೀರಲ್ಲಿ ಹೋಗಿ, ಸಣ್ಣ – ಸಣ್ಣ ಕಾಲುವೆಗಳಂತಾಗಿವೆ. ಕನ್ನಡಕುದ್ರು ಕ್ರಾಸ್‌ ಬಳಿ ಡಿವೈಡರ್‌ಗೆಹಾಕಲಾದ ಮಣ್ಣು ರಸ್ತೆಗೆ ಕೊಚ್ಚಿಕೊಂಡು ಬಂದಿದೆ. ಹೆಮ್ಮಾಡಿ ಪೇಟೆಗಿಂತ ಸ್ವಲ್ಪ ಹಿಂದೆ ರಸ್ತೆ ಬದಿ ಹಾಕಲಾದ ಮಣ್ಣು ಕೊಚ್ಚಿಕೊಂಡು ಹೋಗಿ ದೊಡ್ಡ ಕಂದಕ ನಿರ್ಮಾಣವಾಗಿದೆ. ಅಪ್ಪಿ – ತಪ್ಪಿ ಇಲ್ಲಿ ವಾಹನ ಸವಾರರು ಗೊತ್ತಿಲ್ಲದೆ ರಸ್ತೆಯಿಂದ ಕೆಳಕ್ಕೆ ಇಳಿಸಿದರೆ ಮತ್ತೆ ಮೇಲೆ ಬರುವುದು ಕಷ್ಟ. ವಾಹನ ಅಲ್ಲೇ ಹೂತು ಹೋಗುವುದರ ಜತೆಗೆ ಬೀಳುವ ಅಪಾಯವೂ ಇದೆ.

ಜಾಗೃತೆಯಿಂದ ಚಲಾಯಿಸಿ
ತಲ್ಲೂರಿನಿಂದ ಹೆಮ್ಮಾಡಿ, ಅರಾಟೆ, ಮುಳ್ಳಿಕಟ್ಟೆ ಕ್ರಾಸ್‌ವರೆಗೆ ಈಗ ಒಂದೇ ಮಾರ್ಗದಲ್ಲಿ ಎರಡೂ ಕಡೆಗಳಿಂದಲೂ ಸಂಚರಿಸಬೇಕಾಗಿರುವುದರಿಂದ ವಾಹನ ಸವಾರರು ಜಾಗರೂಕತೆಯಿಂದ ವಾಹನ ಚಲಾಯಿಸಬೇಕಾಗಿದೆ. ಹೆದ್ದಾರಿಯ ಅನೇಕ ಕಡೆಗಳಲ್ಲಿ ಹಾಕಿದ ಮಣ್ಣೇ ಇರುವುದರಿಂದ ಮತ್ತು ಮಣ್ಣು ಕೊಚ್ಚಿ ಹೋಗಿ ನಿರ್ಮಾಣವಾಗಿರುವುದರಿಂದ ಹೆಚ್ಚು ಜಾಗ್ರತೆ ಬೇಕಾಗಿದೆ.

ವಾಹನ ಸವಾರರೇ ಎಚ್ಚರ ವಹಿಸಿ

ಹೆದ್ದಾರಿಯಲ್ಲಿ ಈಗಾಗಲೇ ಮುಳ್ಳಿಕಟ್ಟೆಯಿಂದ ಬೈಂದೂರುವರೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇನ್ನು ಕೆಲವು ದಿನಗಳಲ್ಲಿಯೇ ತಲ್ಲೂರಿನಿಂದಲೇ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಐಆರ್‌ಬಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದು ಮಳೆಗಾಲವಾದ್ದರಿಂದ ಕೆಲವೆಡೆ ಅಪೂರ್ಣ ಕಾಮಗಾರಿ ಆಗಿರುವುದರಿಂದ ವಾಹನ ಸವಾರರು ಆದಷ್ಟು ಎಚ್ಚರ ವಹಿಸಬೇಕು. ವೇಗ ಕಡಿಮೆಯಿರಲಿ. ನಿಧಾನವಾಗಿ ಒಂದು ವಾಹನದ ಹಿಂದೆ ಚಲಿಸಿ, ಅನಗತ್ಯ ಓವರ್‌ ಟೇಕ್‌ ಸಾಧ್ಯವಾದಷ್ಟು ಕಡಿಮೆ ಮಾಡಿ.
– ಬಿ.ಪಿ. ದಿನೇಶ್‌ ಕುಮಾರ್‌,ಕುಂದಾಪುರ ಡಿವೈಎಸ್‌ಪಿ

ತುರ್ತಾಗಿ ದುರಸ್ತಿ

ಅನೇಕ ಕಡೆಗಳಲ್ಲಿ ಇನ್ನು ಕೂಡ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಕೆಲವೊಂದು ಕಡೆ ಸಮಸ್ಯೆಯಾಗಿದೆ. ಅದಕ್ಕೆ ತುರ್ತಾಗಿ ಸ್ಪಂದಿಸಲಾಗುತ್ತಿದೆ. ರಸ್ತೆ ಬದಿ ಮಣ್ಣು ಕೊಚ್ಚಿಕೊಂಡು ಹೋದ ಕಡೆಗಳಲ್ಲಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಿ, ಮಣ್ಣು ಕುಸಿಯದಂತೆ ಜಲ್ಲಿ ಹಾಕಲಾಗುವುದು.
– ಯೋಗೇಂದ್ರಪ್ಪ,ಐಆರ್‌ಬಿ ಪ್ರಾಜೆಕ್ಟ್ ಮ್ಯಾನೇಜರ್‌

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.