ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಅಸಮರ್ಪಕ ಕಾಮಗಾರಿ ವಿರುದ್ಧ ಪ್ರತಿಭಟನೆ
Team Udayavani, Feb 21, 2017, 4:29 PM IST
ಬೈಂದೂರು: ರಾ.ಹೆ. ಚತುಷ್ಪಥ ಅಸಮರ್ಪಕ ಕಾಮಗಾರಿಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಹಾಗೂ ಕುಡಿಯುವ ನೀರು, ಸಂಪರ್ಕ ರಸ್ತೆಗಳ ಬಗ್ಗೆ ಸ್ಥಳೀಯರ ವಿಶ್ವಾಸವನ್ನು ಪಡೆಯುತ್ತಿಲ್ಲ ಎಂದು ಪಡುವರಿ ಗ್ರಾಮಸ್ಥರು ಐ.ಆರ್.ಬಿ. ಕಂಪೆನಿಗೆ ಮುತ್ತಿಗೆ ಹಾಕಿದ ಘಟನೆ ಬೈಂದೂರಿನಲ್ಲಿ ನಡೆದಿದೆ.
ಕಳೆದ ಒಂದೂವರೆ ವರ್ಷದಿಂದ ಬೈಂದೂರು ಭಾಗದಲ್ಲಿ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಈ ಸಂದರ್ಭ ಎಲ್ಲೆಂದರಲ್ಲಿ ಮಣ್ಣನ್ನು ಶೇಖರಿಸಿಡುವುದು, ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳಿಂದ ಸಾರ್ವ ಜನಿಕರು ರೋಸಿ ಹೋಗಿ ದ್ದಾರೆ. ಈ ಸಮಸ್ಯೆ ಗಳನ್ನು ಶೀಘ್ರ ಇತ್ಯರ್ಥಗೊಳಿಸ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ಹೆದ್ದಾರಿ ಕಾಮಗಾರಿ ಕಂಪೆನಿಯ ಅಧಿ ಕಾರಿ ಯೋಗೇಂದ್ರಪ್ಪ ಸಾರ್ವಜನಿಕರ ಸಮಸ್ಯೆ ಗಳನ್ನು ಗಂಭೀರವಾಗಿ ಪರಿಗಣಿ ಸುತ್ತೇವೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಭರವಸೆ ನೀಡಿದರು. ಜಿ.ಪಂ. ಸದಸ್ಯರಾದ ಶಂಕರ ಪೂಜಾರಿ, ಸುರೇಶ ಬಟ್ವಾಡಿ, ತಾ.ಪಂ. ಸದಸ್ಯೆ ಗಿರಿಜಾ ಖಾರ್ವಿ, ಪಡವರಿ ಗ್ರಾ.ಪಂ. ಉಪಾಧ್ಯಕ್ಷ ಸದಾಶಿವ ಡಿ. ಪಡುವರಿ, ಪಿಡಿಒ ಗಣೇಶ ಹೆಬ್ಟಾರ್, ಪಡುವರಿ ಗ್ರಾ.ಪಂ. ಸದಸ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ