ಆರಂಭದ ಮಳೆಗೇ  ರಾ.ಹೆ.ಯಲ್ಲಿ  ಗುಂಡಿಗಳ ಸಾಲು


Team Udayavani, Jun 11, 2018, 6:15 AM IST

manipal-road-800.jpg

ಉಡುಪಿ: ಮುಂಗಾರು ಮಳೆ ಪ್ರವೇಶವಾದ ಬೆರಳೆಣಿಕೆಯ  ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ 66(ಮಂಗಳೂರು-ಕುಂದಾಪುರ) ಮತ್ತು ರಾಷ್ಟ್ರೀಯ ಹೆದ್ದಾರಿ 169ಎ(ಮಲ್ಪೆ-ಆಗುಂಬೆ)ಗಳಲ್ಲಿ ಹೊಂಡಗಳು ಬಿದ್ದಿವೆ. ಕೂಡಲೇ ಹೆದ್ದಾರಿ ಪ್ರಾಧಿಕಾರ ಎಚ್ಚೆತ್ತುಕೊಳ್ಳದಿದ್ದರೆ ಈ ಮಳೆಗಾಲ ವಾಹನ ಚಾಲಕರು/ ದ್ವಿಚಕ್ರ ಸವಾರರ ಪಾಲಿಗೆ ಕಂಟಕವಾಗಲಿದೆ.

ರಾ.ಹೆ. 66ರ ಕರಾವಳಿ ಬೈಪಾಸ್‌ನ ಶಾರದಾ ಹೊಟೇಲ್‌ ಎದುರುಗಡೆ ಆಳವಾದ ಗುಂಡಿಗಳಿದ್ದು ಅವುಗಳನ್ನು ಮುಚ್ಚುವ ಪ್ರಯತ್ನ ಮಳೆಯ ನಡುವೆಯೇ ಸಾಗಿತ್ತು. ಆದರೆ ಅದು ಪ್ರಯೋಜನಕ್ಕೆ ಬಂದಿಲ್ಲ. ರವಿವಾರ ಈ ಗುಂಡಿಗಳು ಮತ್ತಷ್ಟು ಆಳವಾಗಿವೆ. ಕೆಲವು ದ್ವಿಚಕ್ರ ವಾಹನ ಸವಾರರು ಅಪಘಾತದಿಂದ ಸ್ವಲ್ಪದಲ್ಲೇ ಬಚಾವಾದರು. 

ವಾಹನಗಳು ವೇಗವಾಗಿ ಸಾಗುವಾಗ ಧುತ್ತನೆ ಎದುರಾಗುವ ಈ ಗುಂಡಿಗಳಿಂದಾಗಿ ವಾಹನ ಇಳಿಸಿದರೆ ನಿಯಂತ್ರಣ ಕಳೆದುಕೊಳ್ಳುವ, ಬ್ರೇಕ್‌ ಹಾಕಿದರೆ ಹಿಂದಿನಿಂದ ಬರುವ ವಾಹನಕ್ಕೆ ಢಿಕ್ಕಿ ಹೊಡೆಯುವ ಸಾಧ್ಯತೆಗಳು ಅಧಿಕ. ಗುಂಡಿಗಳನ್ನು ತಪ್ಪಿಸಲು ಹೋದರೂ ಕಷ್ಟ. ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಈ ಗುಂಡಿಗಳ ಗಾತ್ರ ಮತ್ತು ವಿಸ್ತಾರ ಹೆಚ್ಚಾಗುತ್ತಿದೆ.

ಟೈಗರ್‌ ಸರ್ಕಲ್‌-ಎಂಐಟಿ
ಟೈಗರ್‌ ಸರ್ಕಲ್‌ನಿಂದ ಎಂಐಟಿವರೆಗಿನ ಹೆದ್ದಾರಿ ಭಾಗದ ಅಲ್ಲಲ್ಲಿ ಹೊಂಡಗಳಾಗಿವೆ. ರಾಧಾ ಮೆಡಿಕಲ್ಸ್‌ ಎದುರಿನ ಭಾಗದಲ್ಲಿ ಈಗಲೇ ದೊಡ್ಡ ಹೊಂಡಗಳುಂಟಾಗಿವೆ. ಅಲ್ಲಿಂದ ಸ್ವಲ್ಪ ಮುಂದಕ್ಕೆ ಚರಂಡಿ ನೀರು ಪ್ರವಾಹೋಪಾದಿಯಾಗಿ ಮುಖ್ಯರಸ್ತೆಯನ್ನು ಸೇರುತ್ತದೆ. ಟೈಗರ್‌ ಸರ್ಕಲ್‌ನಿಂದಲೂ ಮಳೆನೀರು ರಸ್ತೆ ಯಲ್ಲಿಯೇ ಹರಿಯಲು ಆರಂಭ ವಾಗುತ್ತದೆ. ಇಲ್ಲಿ ನಡೆದು ಕೊಂಡು ಹೋಗುವವರ ಪಾಡು ಹೇಳ ತೀರದು. ಚರಂಡಿಯೂ ಇಲ್ಲ, ಪುಟ್‌ಪಾತ್‌ ಇಲ್ಲ, ಪಾರ್ಕಿಂಗ್‌ ಇಲ್ಲ, ರಸ್ತೆಯೂ ಇಲ್ಲ ಎನ್ನುವ ಸ್ಥಿತಿ ಇದೆ. 

ಪರ್ಕಳ: ಮುಗಿಯದ ಗೋಳು
ಕಿರಿದಾದ ರಸ್ತೆ, ಇಕ್ಕಟ್ಟಾದ ಬಸ್‌ನಿಲ್ದಾಣದಿಂದ ಸಮಸ್ಯೆ ಎದುರಿಸುತ್ತಿರುವ ಪರ್ಕಳದಲ್ಲಿ ಈಗ ಹೊಂಡಗಳ ಕಿರಿಕಿರಿ. ಹೊಂಡ ಗುಂಡಿಗಳ ಕಾರಣ ದಿಂದಾಗಿ ಇಲ್ಲೀಗ ವಾಹನ ಚಾಲನೆ ಭಾರೀ ಸವಾಲು ತಂದೊಡ್ಡುತ್ತಿದೆ. ಚರಂಡಿಯೂ ಅಸಮರ್ಪಕವಾಗಿದೆ. ಕೊಳಚೆ ನೀರು ಕೂಡ ರಸ್ತೆಯಲ್ಲಿಯೇ ಉದ್ದಕ್ಕೂ ಹರಿಯುತ್ತದೆ. ಮಲ್ಪೆ-ಆಗಂಬೆ ಹೆದ್ದಾರಿ 169 ಎ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಡಿಪಿಆರ್‌ ಹಂತದ ಪ್ರಕ್ರಿಯೆಗಳು ನಡೆದಿವೆ. ಕಾಮಗಾರಿ ಅನುಷ್ಠಾನದ ನಿರೀಕ್ಷೆ ಇನ್ನೂ ಹಾಗೆಯೇ ಇದೆ.

ಮಣಿಪಾಲ ಬಸ್‌ಸ್ಟಾಂಡ್‌ 
ಕಳೆದ ಮಳೆಗಾಲವಿಡೀ ಚಾಲಕರನ್ನು ಕಾಡಿದ್ದ ರಾ.ಹೆ . 169ರ ಮಣಿಪಾಲ ಮತ್ತು ಪರ್ಕಳ ಭಾಗದಲ್ಲಿ ಈ ಬಾರಿಯೂ ಹೊಂಡಗಳು ಉದ್ಭವವಾಗಿವೆ. ಉಡುಪಿ ಕಡೆಗೆ  ಹೋಗುವ ಬಸ್‌ಗಳು ನಿಲ್ಲುವ ಸ್ಥಳಕ್ಕೆ ಹೋಗುವವರು ಅಪಾಯಕಾರಿ ಚರಂಡಿ ದಾಟಿಕೊಂಡು ಹೋಗಬೇಕಾಗಿದೆ. ಇದಕ್ಕೆ ಹಾಕಲಾದ ಸ್ಲಾéಬ್‌ಗಳು ಬೀಳುವಂತಿವೆ. ಇಲ್ಲಿ ಬಸ್‌ಗಳನ್ನು ಅತ್ಯಂತ ಗಡಿಬಿಡಿಯಾಗಿ ಹತ್ತುವವರೇ ಹೆಚ್ಚು. ಹಾಗಾಗಿ ಇಲ್ಲಿ ಮಳೆಗಾಲದಲ್ಲಿ ಅವಘಡ ಸಂಭವಿಸದಂತೆ ಎಚ್ಚರ ವಹಿಸಬೇಕಾದ ಆವಶ್ಯಕತೆ ಇದೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.