ಕತ್ತಲಲ್ಲಿ ರಾಷ್ಟ್ರೀಯ ಹೆದ್ದಾರಿ: ಬೀದಿ ದೀಪಗಳ ದುರಸ್ತಿಗಿಲ್ಲ ಕ್ರಮ

ಕಾಮಗಾರಿ ಸಂದರ್ಭ ಉಭಯ ಜಿಲ್ಲೆಗಳಲ್ಲಿ ತೆರವುಗೊಳಿಸಿದ ದಾರಿದೀಪಗಳ ಅಳವಡಿಕೆಗೆ ನಿರ್ಲಕ್ಷ್ಯ

Team Udayavani, Sep 20, 2019, 5:09 AM IST

1609KOTA1E

ದಾರಿದೀಪಗಳು ಸರಿಯಾಗಿ ಕಾರ್ಯನಿರ್ವಹಿಸದೆ ಇಲ್ಲಿ ಮಬ್ಬುಗತ್ತಲಿದೆ.

ಕೋಟ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ಅನಂತರ ಹಲವು ಸಮಸ್ಯೆ ತಲೆದೋರಿವೆೆ. ಇದೀಗ ಒಂದು ತಿಂಗಳಿಂದ ಬೀದಿ ದೀಪ, ಹೈಮಾಸ್ಟ್‌ ದೀಪ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಹಾಗೂ ಉಪಕರಣಗಳು ದಾಸ್ತಾನಿಲ್ಲ ಎನ್ನುವ ಕಾರಣ ನೀಡಿ ದುರಸ್ತಿಗೂ ಕಂಪೆ‌ನಿ ಮುಂದಾಗಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಗಳಾಗುತ್ತಿವೆ.

ಮುಖ್ಯ ಪೇಟೆಗಳಲ್ಲಿ ಕತ್ತಲೆ
ಕೋಟ, ಬ್ರಹ್ಮಾವರದ ಹಲವು ಕಡೆಗಳಲ್ಲಿ ದಾರಿ ದೀಪಗಳ ಕಾರ್ಯನಿರ್ವಹಣೆ ಸ್ಥಗಿತಗೊಂಡಿದೆ ಹಾಗೂ ಕೆಲವು ಕಡೆ ಮಂದವಾದ ಬೆಳಕಿದೆ. ಸಾಸ್ತಾನ ಟೋಲ್‌ಗೇಟ್‌ನಲ್ಲೇ ಹೈಮಾಸ್ಟ್‌ ಸೇರಿದಂತೆ ಹಲವು ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ . ಕೋಟದ ಫ್ಲೆಓವರ್‌, ಸಾಸ್ತಾನ, ಕೋಟ, ಸಾಲಿಗ್ರಾಮ ಮುಖ್ಯ ಪೇಟೆಗಳಲ್ಲಿ, ಕುಂದಾಪುರ ತಾಲೂಕಿನಾದ್ಯಂತ ಕೂಡ ಇದೇ ರೀತಿ ಸಮಸ್ಯೆ ಇದೆ.

ಮಾಬುಕಳದಲ್ಲಿ ಬೀದಿದೀಪದ ವ್ಯವಸ್ಥೆ ಇಲ್ಲ
ಎಕ್ಸ್‌ಪ್ರೆಸ್‌ ಬಸ್‌ ನಿಲ್ದಾಣವಿರುವ ಎಲ್ಲ ಕಡೆಗಳಲ್ಲಿ ತಂಗುದಾಣ, ಹೈಮಾಸ್ಟ್‌, ಬೀದಿ ದೀಪಗಳನ್ನು ಅಳವಡಿಸಲಾಗುತ್ತದೆ. ಆದರೆ ಮಾಬುಕಳದಲ್ಲಿ ಬಸ್‌
ತಂಗುದಾಣ, ದಾರಿ ದೀಪದ ವ್ಯವಸ್ಥೆ ಇಲ್ಲ. ಹೀಗಾಗಿ ಪಂಚಾಯತ್‌ನವರು ಅಳವಡಿಸಿದ ಒಂದೆರಡು ದೀಪಗಳೇ ಇಲ್ಲಿಗೆ ಆಧಾರವಾಗಿದೆ. ಸ್ಥಳೀಯರು ಸಾಕಷ್ಟು ಬಾರಿ ಈ ಕುರಿತು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ರಾತ್ರಿ ವೇಳೆ ಬಸ್‌ಗಾಗಿ ನಿಲ್ಲುವವರು, ಪಾದಚಾರಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.

ಕಳ್ಳತನಕ್ಕೆ ರಹದಾರಿ
ಮಳೆಗಾಲದಲ್ಲಿ ಅಂಗಡಿ-ಮುಂಗಟ್ಟು, ದೇಗುಲಗಳಲ್ಲಿ ಹೆಚ್ಚಾಗಿ ಕಳ್ಳತನದ ದುಷ್ಕೃತ್ಯಗಳು ನಡೆಯು ತ್ತಿವೆ. ಹೀಗಾಗಿ ಕತ್ತಲ ವಾತಾವರಣವಿದ್ದರೆ ಇಂತಹ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ ಎನ್ನುವ ಆತಂಕ ಸಾರ್ವಜನಿಕರಲ್ಲಿದೆ.

ಮನವಿಗೆ ಸೂಕ್ತ ಸ್ಪಂದನೆಯಿಲ್ಲ
ಬೀದಿ ದೀಪ ಸೇರಿದಂತೆ ಹಲವು ಸಮಸ್ಯೆ ಪರಿಹರಿಸುವಂತೆ ಸೆ.6ರಂದು ಹೆದ್ದಾರಿ ಜಾಗೃತಿ ಸಮಿತಿ ಟೋಲ್‌ನ ಮುಖ್ಯಸ್ಥರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು ಹಾಗೂ ವಾರದೊಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇದಕ್ಕೆ ಸೂಕ್ತ ಪ್ರತಿಸ್ಪಂದನೆ ದೊರೆತಿಲ್ಲ.

ಹೋರಾಟಕ್ಕಿಳಿಯುವ ಮುನ್ನ ಎಚ್ಚೆತ್ತುಕೊಳ್ಳಿ
ದಾರಿದೀಪಗಳಿಲ್ಲದೆ ಸಾಕಷ್ಟು ಸಮಸ್ಯೆಯಾಗುತ್ತಿದ್ದು ಟೋಲ್‌ ಮುಖ್ಯಸ್ಥರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಆದರೆ ಒಂದೆರಡು ಕಡೆ ದುರಸ್ತಿ ನಡೆಸಿದ್ದು ಹೊರತುಪಡಿಸಿದರೆ ಸಂಪೂರ್ಣ ದುರಸ್ತಿಯಾಗಿಲ್ಲ. ಸಾರ್ವಜನಿಕರು ಪ್ರತಿಭಟನೆ ನಡೆಸುವುದಕ್ಕೆ ಮೊದಲು ಕಂಪೆನಿ ಎಚ್ಚೆತ್ತುಕೊಳ್ಳಬೇಕಿದೆ.
-ಪ್ರತಾಪ್‌ ಶೆಟ್ಟಿ ಸಾಸ್ತಾನ, ಅಧ್ಯಕ್ಷರು ಹೆದ್ದಾರಿ ಜಾಗೃತಿ ವೇದಿಕೆ

ಮರು ಅಳವಡಿಕೆಗೆ ಸೂಚನೆ ನೀಡಲಿ
ಚತುಷ್ಪಥ ಕಾಮಗಾರಿ ಸಂದರ್ಭ ತೆರವುಗೊಳಿಸಲಾದ ಬೀದಿ ದೀಪಗಳನ್ನು ಮತ್ತೆ ಅಳವಡಿಸುವಲ್ಲಿ ನಿರ್ಲಕ್ಷé ವಹಿಸಲಾಗಿದೆ. ಈ ಕುರಿತು ನಮ್ಮ ಗ್ರಾ.ಪಂ. ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದೆವು. ಅನಂತರ ಈ ಕುರಿತು ವರದಿ ಕೇಳಲಾಗಿತ್ತು. ಸಂಬಂಧಿಸಿದ ಮಾಹಿತಿ ಕೂಡ ನೀಡಿದ್ದೆವು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಈ ಕುರಿತು ಗಮನಹರಿಸಿ ಅವುಗಳನ್ನು ಮತ್ತೆ ಅಳವಡಿಸುವಂತೆ ಕಂಪೆನಿಗೆ ಸೂಚನೆ ನೀಡಬೇಕಿದೆ.
-ಗೋವಿಂದ ಪೂಜಾರಿ,
ಅಧ್ಯಕ್ಷರು, ಪಾಂಡೇಶ್ವರ ಗ್ರಾ.ಪಂ.

ದಾಸ್ತಾನಿಲ್ಲ; ಒಂದೆರಡು ದಿನದಲ್ಲಿ ಕ್ರಮ
ಉಪಕರಣ ದಾಸ್ತಾನಿಲ್ಲದ ಕಾರಣ ಎಲ್ಲ ಕಡೆ ದಾರಿ ದೀಪದ ದುರಸ್ತಿಗೆ ಹಿನ್ನಡೆಯಾಗಿದೆ. ಈ ಕುರಿತು ಮನವಿ ಸಲ್ಲಿಸಿದ್ದು ಒಂದೆರಡು ದಿನದಲ್ಲಿ ಸ್ಟಾಕ್‌ ಲಭ್ಯ ವಾಗಲಿದ್ದು ಕುಂದಾಪುರದಿಂದ ಉಡುಪಿ ತನಕದ ಎಲ್ಲ ದಾರಿ ದೀಪಗಳನ್ನು ತತ್‌ಕ್ಷಣ ದುರಸ್ತಿಗೊಳಿಸಲಾಗುವುದು.
-ಕೇಶವಮೂರ್ತಿ, ಸಾಸ್ತಾನ ಟೋಲ್‌ ಮ್ಯಾನೇಜರ್‌

ತೆರವುಗೊಳಿಸಿದ ದೀಪ ಅಳವಡಿಸುವವರಾರು?
ಚತುಷ್ಪಥ ಕಾಮಗಾರಿ ಆರಂಭಗೊಳ್ಳುವುದಕ್ಕೆ ಮುಂಚೆ ಉಭಯ ಜಿಲ್ಲೆಗಳ ಹೆದ್ದಾರಿಯ ಇಕ್ಕೆಲಗಳಲ್ಲಿ ಸ್ಥಳೀಯಾಡಳಿತಗಳು ಅಳವಡಿಸಿದ ಬೀದಿ ದೀಪಗಳಿದ್ದವು. ಪಾದಚಾರಿಗಳು, ಸೈಕಲ್‌ ಸವಾರರು ಇದರ ನೆರವಿನಿಂದಲೇ ಸಂಚರಿಸುತ್ತಿದ್ದರು. ಕಾಮಗಾರಿ ಸಂದರ್ಭ ವಿದ್ಯುತ್‌ ಕಂಬಗಳ ಜತೆಯಲ್ಲಿ ಅವುಗಳನ್ನು ತೆರವುಗೊಳಿಸಲಾಯಿತು. ಆದರೆ ಕಾಮಗಾರಿ ಮುಗಿದ ಮೇಲೆ ತೆರವುಗೊಳಿಸಿದ ದೀಪಗಳನ್ನು ಮತ್ತೆ ಅಳವಡಿಸದೆ ಮುಖ್ಯ ಪೇಟೆ, ಫ್ಲೆ$çಓವರ್‌ಗಳಲ್ಲಿ ಮಾತ್ರ ದಾರಿದೀಪ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಹೆಚ್ಚಿನ ಕಡೆಗಳಲ್ಲಿ ಬೀದಿದೀಪವಿಲ್ಲ. ರಸ್ತೆ ನಿರ್ವಹಣೆ ಕಂಪೆನಿಗೆ ಸಂಬಂಧಿಸಿರುವುದರಿಂದ ಅವರೇ ಈ ಕುರಿತು ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯಾಡಳಿತಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದವು. ಆದರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಪ್ರಸ್ತುತ ಪಾದಚಾರಿ, ಸೈಕಲ್‌ ಸವಾರರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ.

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.