ಪ್ರಕೃತಿ ವಿಕೋಪ ಹಾನಿ ವೀಕ್ಷಣೆ
Team Udayavani, Sep 13, 2018, 12:40 PM IST
ಕಾರ್ಕಳ: ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕಾರ್ಕಳ ತಾಲೂಕಿನ ವಿವಿಧ ಭಾಗಗಳಿಗೆ ಸೆ. 12ರಂದು ಕೇಂದ್ರದ ಸಮೀಕ್ಷಾ ಅಧ್ಯಯನ ತಂಡ ಭೇಟಿ ನೀಡಿತು. ತಿಂಗಳ ಹಿಂದೆ ಗಾಳಿ-ಮಳೆಯಿಂದಾಗಿ ಹಾನಿಗೀಡಾಗಿದ್ದ ಕುಕ್ಕುಂದೂರು ಜಯಂತಿ ನಗರದ ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ಮಾಡಿದರು. ಸದ್ಯ ಆ ಶಾಲೆಯನ್ನು ಕೆಡವಿ ಹಾಕಲಾಗಿದ್ದು, ಅಧಿಕಾರಿಗಳು ಶಾಲೆಯ ಕಟ್ಟಡದ ಚಿತ್ರಗಳನ್ನು ವೀಕ್ಷಿಸಿದ್ದಾರೆ.
ಕೇಂದ್ರ ಆರ್ಥಿಕ ಸಚಿವಾಲಯದ ವೆಚ್ಚ ವಿಭಾಗದ ಉಪ ಕಾರ್ಯದರ್ಶಿ ಭರತೇಂದು ಕುಮಾರ್ ಸಿಂಗ್, ಕಂದಾಯ ಇಲಾಖೆಯ ಉಪ ಕಾರ್ಯದರ್ಶಿ ಮಾಣಿಕ್ ಚಂದ್ರ ಪಂಡಿತ್, ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ಪ್ರಾದೇಶಿಕ ಅಧಿಕಾರಿ ಸದಾನಂದ ಬಾಬು ಸಮೀಕ್ಷಾ ತಂಡದಲ್ಲಿದ್ದರು.
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಕುಂದಾಪು ಎಸಿ ಭೂಬಾಲನ್ ಶಾಸಕ ವಿ. ಸುನಿಲ್ ಕುಮಾರ್, ತಹಶೀಲ್ದಾರ್ ಮಹಮ್ಮದ್ ಇಸಾಕ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೇ| ಹರ್ಷ, ಪುರಸಭೆಯ ಮುಖ್ಯಾಧಿಕಾರಿ ಮೇಬಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ರೆಂಜಾಳ-ನೆಲ್ಲಿಕಾರು ರಸ್ತೆ, ಈದು ಗ್ರಾಮದ ಕಾಲುಸಂಕ, ಮುಡಾರು, ಮಿಯ್ನಾರು, ನೂರಲ್ಬೆಟ್ಟು ಮೊದಲಾದ ಭಾಗಗಳಿಗೆ ಭೇಟಿ ನೀಡಿ ಅಲ್ಲಿ ಕೃಷಿ, ರಸ್ತೆ ಹಾಗೂ ಮನೆಗಳಿಗೆ ಹಾನಿಯಾಗಿರುವುದನ್ನೂ ತಂಡ ಪರಿಶೀಲನೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ