ಉಡುಪಿ ಜಿಲ್ಲೆಯಲ್ಲೂ ಸುವರ್ಣ ಸಂಭ್ರಮದ ನವರಾತ್ರಿ ಗೊಂಬೆ ಆರಾಧನೆಯ ಮೆರುಗು


Team Udayavani, Sep 29, 2022, 9:07 AM IST

ಉಡುಪಿ ಜಿಲ್ಲೆಯಲ್ಲೂ ಸುವರ್ಣ ಸಂಭ್ರಮದ ನವರಾತ್ರಿ ಗೊಂಬೆ ಆರಾಧನೆಯ ಮೆರುಗು

ಕಟಪಾಡಿ : ನವರಾತ್ರಿಯ ಪುಣ್ಯ ಪರ್ವಕಾಲದಲ್ಲಿ ಗೊಂಬೆಯನ್ನು ಕೂರಿಸಿ ಆರಾಧನೆಯ ಮೂಲಕ ವಿಶೇಷವಾದ ಆರಾಧನ ಪದ್ಧತಿಯು ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಕಾಣ ಸಿಗುತ್ತಿದೆ.
ಉದ್ಯಾವರ ಆರೂರು ತೋಟ ಯು. ಶ್ರೀನಿವಾಸ ಭಟ್ ಅವರ ಪೂರ್ವಜರಿಂದಲೂ ಈ ಬೊಂಬೆ ಆರಾಧನೆಯ ಪದ್ಧತಿಯು ಆರಂಭಗೊಂಡಿದ್ದು, ಇದೀಗ ನಾಲ್ಕನೇ ಪೀಳಿಗೆಗೆ ಮುಂದುವರೆಯುತ್ತಿದೆ.

ಗೊಂಬೆಯಾರಾಧನೆಗೆ ಸುವರ್ಣ ವರ್ಷ- ಕನಕ ಗೋಪುರದಿಂದ ಶ್ರೀ ಕೃಷ್ಣನ ದರ್ಶನ ಸ್ಪೆಷಲ್:
ಈ ಬಾರಿಯ ದಸರಾದಲ್ಲಿ ಗೊಂಬೆಯ ಆರಾಧನ ಪದ್ಧತಿ ಆರಂಭಿಸಿ 50 ವರ್ಷಗಳು ತುಂಬುತ್ತಿದ್ದು, ಅದಕ್ಕಾಗಿಯೇ ವಿಶೇಷವಾಗಿ ಕಲಾವಿದ ವಿಶ್ವೇಶ್ವರ ಪರ್ಕಳ ಅವರ ಮೂಲಕ ಕನಕ ಗೋಪುರ, ಕನಕನ ಕಿಂಡಿ, ಶ್ರೀ ಕೃಷ್ಣ ಮಠ, ರಥವನ್ನು ನಿರ್ಮಿಸಿ ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣ ಮುಖ್ಯಪ್ರಾಣನ ದರ್ಶನ ಭಾಗ್ಯ ವಿಶೇಷ ಆಕರ್ಷಣೆಯಾಗಿದೆ. ಅದರ ಮುಂಭಾಗದಲ್ಲಿ ರಂಗವಲ್ಲಿ ಕಲೆಯ ಮೂಲಕ ಆಕರ್ಷಣೀಯವಾಗಿ ಸಂತ ಶ್ರೇಷ್ಠ ಆಚಾರ್ಯ ಮಧ್ವರು ಶ್ರೀ ಕೃಷ್ಣನ ವಿಗ್ರಹವನ್ನು ಹಿಡಿದ ಮಾದರಿಯು ನೋಡುಗರನ್ನು ಮತ್ತಷ್ಟು ಭಾವುಕರನ್ನಾಗಿಸುತ್ತಿದೆ.

ಸಾವಿರಕ್ಕೂ ಅಧಿಕ ಬೊಂಬೆಗಳು ಇಲ್ಲಿ ಜೊತೆಗಿರಿಸಿ ಆರಾಧಿಸುತ್ತಿದ್ದು, ನವರಾತ್ರಿಯ ಆರಂಭದಲ್ಲಿ ಕಲಶವನ್ನು ಏರಿಸಿ ದುರ್ಗೆಯ ಬೊಂಬೆಯನ್ನು ಇರಿಸಿ ಪೂಜಿಸಿ ಸಂಜೆ ಮಹಿಳೆಯರು ಜೊತೆ ಸೇರಿ ಸಂಗೀತ ಭಜನೆಯೊಂದಿಗೆ ಆರತಿ ಬೆಳಗಿಸುವುದು ಪೂಜಾ ಸಂಪ್ರದಾಯವಾಗಿದೆ. ಇನ್ನು ಶಾಲೆ ವಿದ್ಯಾರ್ಥಿಗಳ ದಂಡು ಇದರ ವೀಕ್ಷಣೆಗಾಗಿಯೇ ಬರುವುದರ ಜೊತೆಗೆ ಸಾರ್ವಜನಿಕರೂ ಇದನ್ನು ಕಂಡು ಭಕ್ತ ಭಾವನೆಯನ್ನು ಪ್ರಕಟಿಸುವುದು ಕಂಡು ಬರುತ್ತಿದೆ.

ಅರಗಿನ ಅರಮನೆ-ವಿಶ್ವರೂಪ :
ಗಣಪತಿ, ರಾಮ, ಸೀತೆ, ಲಕ್ಷ್ಮಣ, ಅಷ್ಟ ಲಕ್ಷ್ಮಿಯರು ಸಹಿತ ವಿಶೇಷವಾಗಿ ಧರ್ಮ ಸಂದೇಶವನ್ನು ಸಾರುವಂತಹ ವಿಶ್ವ ರೂಪ ದರ್ಶನ, ರಾವಣ ದರ್ಬಾರು, ಅರಗಿನ ಅರಮನೆ, ದಶಾವತಾರ, ಗಜೇಂದ್ರ ಮೋಕ್ಷ, ಶ್ರೀ ರಾಮನ ಪಟ್ಟಾಭಿಷೇಕ, ಆಚಾರ್ಯ ಭೀಷ್ಮರ ಶರಶಯ್ಯೆ ವಿಶೇಷವಾಗಿ ಗಮನ ಸೆಳೆಯುತ್ತಿದ್ದು, ರಷ್ಯಾ, ಕೌಲಾಲಂಪುರ, ಮಲೇಷ್ಯಾ, ದುಬೈ ಸಹಿತ ವಿದೇಶದಲ್ಲಿಯೂ ಖರೀದಿಸಿ ಗೊಂಬೆಗಳು ಆಕರ್ಷಿಸುತ್ತಿದೆ.

ಇದನ್ನೂ ಓದಿ : ಮಂಗಳೂರು : ಪಿಎಫ್ಐ, ಸಿಎಫ್ಐ ಕಚೇರಿಗಳಲ್ಲಿ ಪೊಲೀಸರಿಂದ ಶೋಧ; ಬೀಗ ಮುದ್ರೆ

ಮನೆಯವರೆಲ್ಲರಿಗೂ ಗೊಂಬೆ ಖರೀದಿ ಹವ್ಯಾಸ:
ಯು. ಶ್ರೀನಿವಾಸ ಭಟ್ ಅವರು ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿಯಾಗಿದ್ದ ಸಂದರ್ಭ 1972ರಲ್ಲಿ ಹೈದರಾಬಾದ್ನಲ್ಲಿ ಆರಂಭಿಸಲಾಗಿದ್ದ ಈ ಗೊಂಬೆ ಆರಾಧನೆಯು ವರ್ಗಾವಣೆ ಪಡೆದು ತೆರಳಿದ ಊರುಗಳಲ್ಲಿಯೂ ಪೂಜೆಯನ್ನು ಮುಂದುವರೆಸುತ್ತಾ ಬಂದಿದ್ದು, ತೆರಳಿದ ಊರುಗಳಲ್ಲಿ ಮನೆಯವರೆಲ್ಲರಿಗೂ ಗೊಂಬೆಯನ್ನು ಖರೀದಿಸುತ್ತಾ ಬಂದಿದ್ದು ಸಂಗ್ರಹಿಸಲಾಗಿದೆ ಎನ್ನುತ್ತಾರೆ.

ಮಣ್ಣು, ಮರದ ಗೊಂಬೆ:
ಗೇರು ಹಣ್ಣು ಕೂಡ ಸಂಗ್ರಹದಲ್ಲಿದ್ದು ಮರದಿಂದ, ಮಣ್ಣು, ಪಿಂಗಾಣಿ ಸಹಿತ ಇತರೇ ವಸ್ತುಗಳಿಂದ ಸಿದ್ಧಪಡಿಸಿದ ಗೊಂಬೆಗಳು ಇಲ್ಲಿ ಆರಾಧಿಸಲ್ಪಡುತ್ತಿದ್ದು, ಪೂಜಿಸಲ್ಪಟ್ಟ ದುರ್ಗೆಯ ಗೊಂಬೆಯನ್ನು ಅಡ್ಡಲಾಗಿ ಮಲಗಿಸಿ ವಿಸರ್ಜನೆಯ ಕ್ರಮವನ್ನು ಅನುಸರಿಸಿ ಈ ಬಾರಿಯ ದಸರಾ ಗೊಂಬೆಯ ಆರಾಧನೆಯು ಸಂಪನ್ನಗೊಳ್ಳಲಿದೆ.
ನವರಾತ್ರಿಯ ಸಂದರ್ಭ ಎಲ್ಲರೂ ಬ್ಯುಸಿ ಇರುವುದರಿಂದ 15 ದಿನಗಳ ಕಾಲ ಈ ಗೊಂಬೆಯ ಪೂಜೆ, ಪ್ರದರ್ಶನ ನಡೆಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ವೀಕ್ಷಣೆಗೆ ಬರುತ್ತಿದ್ದಾರೆ ಎಂದು ಮನೆ ಮಂದಿ ಸಂತಸವನ್ನು ವ್ಯಕ್ತಪಡಿಸುತ್ತಿದ್ದಾರೆ.

ಹಳೆ ಮೈಸೂರು, ಕೇರಳ, ತಮಿಳ್ನಾಡು, ಆಂದ್ರ ರಾಜ್ಯಗಳಲ್ಲಿ ಕಂಡು ಬರುವ ಗೊಂಬೆ ಆರಾಧನೆಯು ಉಡುಪಿ ಉದ್ಯಾವರದಲ್ಲಿ 50 ರ ಸಂಭ್ರಮ ಕಾಣುತ್ತಿರುವುದು ವಿಶೇಷ ಆಕರ್ಷಣೆಯೂ ಆಗಿದೆ.

– ವಿಜಯ ಆಚಾರ್ಯ ಉಚ್ಚಿಲ

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.