ನವಯುಗ ಟೋಲ್‌ ವಿರುದ್ಧ ಮೈಗೆ ಮಸಿ ಬಳಿದು ಅರೆನಗ್ನ ಪ್ರತಿಭಟನೆ


Team Udayavani, Jan 31, 2019, 1:00 AM IST

navayuga.jpg

ಪಡುಬಿದ್ರಿ: ಹೆಜಮಾಡಿ ಜಿ.ಪಂ. ವ್ಯಾಪ್ತಿಯ ವಾಹನಗಳಿಗೆ ಹೆಜಮಾಡಿ ಟೋಲ್‌ನಲ್ಲಿ ರಿಯಾಯಿತಿಗೆ ಆಗ್ರಹಿಸಿ ಕಳೆದ 23 ದಿನಗಳಿಂದ ಪಡುಬಿದ್ರಿ ಟೆಂಪೋ ನಿಲ್ದಾಣದ ಬಳಿ ಕರವೇ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಈಗ ಮತ್ತೂಂದು ಮಜಲು ಮುಟ್ಟಿದೆ.

ಪ್ರತಿಭಟನೆಗೆ ಜಿಲ್ಲಾಡಳಿತದ ಸ್ಪಂದನೆ ಇಲ್ಲದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಬುಧವಾರದಂದು ಮೈಗೆ ಮಸಿ ಬಳಿದು ಅರೆನಗ್ನರಾಗಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದರು.

‘ಭ್ರಷ್ಟ ವ್ಯವಸ್ಥೆಗೆ ಬಳಿದ ಮಸಿ’

ಸಂಘಟನೆಯ ಜಿಲ್ಲಾಧ್ಯಕ್ಷ ಅನ್ಸಾರ್‌ ಅಹಮ್ಮದ್‌ ಮಾತನಾಡಿ, 23 ದಿನಗಳಿಂದ ವಿವಿಧ ಸಂಘಟನೆಗಳ ಸಹಕಾರದಿಂದ ಹೆಜಮಾಡಿ ಟೋಲ್‌ ವಿರುದ್ಧ ವಿವಿಧ ರೀತಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನಡೆಸಿದ್ದೇವೆ. ವಿವಿಧ ಪಕ್ಷಗಳ ನಾಯಕರು ಕೂಡ ಸ್ಥಳಕ್ಕೆ ಬಂದು ನಮ್ಮೊಂದಿಗೆ ಬೆರೆತು ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ, ಆದರೆ ನಮ್ಮ ಹೋರಾಟವನ್ನು ದಮನಿಸುವ ಪ್ರಯತ್ನಗಳು ನಡೆದಿವೇ ಹೊರತೂ ಜಿಲ್ಲಾಧಿಕಾರಿ ನಮ್ಮನ್ನು ಭೇಟಿಯಾಗುವ ಸೌಜನ್ಯವನ್ನು ತೋರಿಲ್ಲ.

ಏನಿದ್ದರೂ ನಮ್ಮ ಹೋರಾಟ ಸಾರ್ವಜನಿಕ ಹಿತಾಸಕ್ತಿಯೊಂದಿಗೆ ಮುಂದುವರಿಯಲಿದೆ. ಮಸಿ ನಮಗೆ ನಾವೇ ಬಳಿದಿರುವುದಲ್ಲ. ಭ್ರಷ್ಟ ವ್ಯವಸ್ಥೆಗೆ ಬಳಿದಿರುವ ಮಸಿ ಇದು ಎಂದರು.

ಡಿಕೆಶಿ – ನವಯುಗ ಅಧಿಕಾರಿಗಳೊಂದಿಗೆ ಚರ್ಚೆ: ಮಿಥುನ್‌ ರೈ

ಸ್ಥಳಕ್ಕೆ ಭೇಟಿಯಿತ್ತ ದ.ಕ., ಜಿಲ್ಲಾ ಯುವ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ ತಾನು ಸಚಿವ ಡಿ. ಕೆ. ಶಿವಕುಮಾರ್‌ರೊಂದಿಗೆ ಚರ್ಚಿಸಿ ನವಯುಗ ನಿರ್ಮಾಣ ಕಂಪೆನಿ ಮುಖ್ಯಸ್ಥರೊಂದಿಗೂ ಸಚಿವರ ಸಮ್ಮುಖದಲ್ಲಿ ಮಾತನಾಡಿ ಪಡುಬಿದ್ರಿಯ ಹೋರಾಟಕ್ಕೆ ಜಯ ಲಭಿಸುವಂತೆ ಪ್ರಯತ್ನಿಸುವುದಾಗಿ ಹೇಳಿದರು.

ಜಯಪ್ರಕಾಶ್‌ ಹೆಗ್ಡೆಗೂ ಮನವಿ: ನವೀನ್‌ಚಂದ್ರ ಶೆಟ್ಟಿ

ಪಡುಬಿದ್ರಿಯ ನಾಗರಿಕ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ ತಾವು ಈಗಾಗಲೇ ಮಾಜಿ ಸಂಸದ ಜಯ ಪ್ರಕಾಶ್‌ ಹೆಗ್ಡೆ ಅವರಲ್ಲೂ ಈ ವಿಷಯವಾಗಿ ಚರ್ಚಿಸಿ ದ್ದೇನೆ. ನ್ಯಾಯ ದೊರಕಿಸಿಕೊಡುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ಹೇಳಿದರು. ಜಿಲ್ಲಾಧಿಕಾರಿ ಸೌಜನ್ಯಕ್ಕಾದರೂ ಪ್ರತಿಭಟನಕಾರರನ್ನು ಭೇಟಿಯಾಗಬೇಕಿತ್ತು ಎಂದರು.

ಅನ್ಸಾರ್‌ ಅಹಮ್ಮದ್‌ರೊಂದಿಗೆ ವೇದಿಕೆಯ ಪದಾಧಿಕಾರಿಗಳಾದ ಸೈಯ್ಯದ್‌ ನಿಝಾಮ್‌, ಆಸೀಫ್‌ ಆಪತ್ಬಾಂಧವ ಸಹಿತ ಪಡುಬಿದ್ರಿ ಘಟಕಾಧ್ಯಕ್ಷರು ಮೈಗೆ ಮಸಿ ಬಳಿದುಕೊಂಡು ಸಂಜೆಯವರೆಗೆ ಧರಣಿ ನಡೆಯಿತು.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.