ಮೇಲ್ದರ್ಜೆಗೇರದ ನಕ್ಸಲ್‌ ಪೀಡಿತ ಸಿದ್ದಾಪುರ ಪ್ರಾ. ಆರೋಗ್ಯ ಕೇಂದ್ರ


Team Udayavani, Feb 26, 2019, 1:00 AM IST

meldarje.jpg

ಸಿದ್ದಾಪುರ: ಗ್ರಾಮೀಣ ಹಾಗೂ ನಕ್ಸಲ್‌ ಪೀಡಿತ ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕೆಂಬ ಗ್ರಾಮಸ್ಥರ ಆಗ್ರಹವು ಮರೀಚಿಕೆಯಾಗಿದೆ. ಇರುವ ಹುದ್ದೆಗಳು ಎಲ್ಲವೂ ಖಾಲಿ ಇವೆ. ಮಂಗನ ಕಾಯಿಲೆಗಳು ಸೇರಿದಂತೆ ಸಾಂಕ್ರಾಮಿಕ ಕಾಯಿಲೆ ಹರಡುತ್ತಿವೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಕೇಂದ್ರಗಳ ಅಗತ್ಯ ಇನ್ನೂ ಹೆಚ್ಚು. ಆರೋಗ್ಯ ಕೇಂದ್ರದಲ್ಲಿ ವೈದ್ಯರು ಸೇರಿದಂತೆ ದಾದಿಯರ ಹುದ್ದೆಗಳು ಖಾಲಿ ಖಾಲಿಯಾಗಿದ್ದು, ರೋಗಿಗಳು ಪರದಾಡುವಂತಾಗಿದೆ.

ಹುದ್ದೆಗಳು ಖಾಲಿ ಖಾಲಿ
 ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೇಕಾಗಿರುವ 26 ಹುದ್ದೆಗಳಲ್ಲಿ 19 ಹುದ್ದೆ ಖಾಲಿ ಇವೆ. ಕೇವಲ 7 ಹುದ್ದೆಗಳಲ್ಲಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೆಲವೊಂದು ಹುದ್ದೆಗಳಿಗೆ ಗುತ್ತಿಗೆ ಅಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆರೋಗ್ಯ ಕೇಂದ್ರಕ್ಕೆ ಅಗತ್ಯವಾಗಿ ಬೇಕಾಗಿರುವ ಸ್ಟಾಫ್‌ ನರ್ಸ್‌ ಹುದ್ದೆಯೇ ಇಲ್ಲಿಯ ತನಕ ಸೃಷ್ಟಿಯಾಗಿಲ್ಲ. ಆರೋಗ್ಯ ಕೇಂದ್ರಕ್ಕೆ ಖಾಯಂ ಆಡಳಿತ ವೈದ್ಯಾಧಿಕಾರಿಗಳು ಸೇರಿದಂತೆ 3 ವೈದ್ಯರ ಹುದ್ದೆ ಖಾಲಿ ಇವೆ. ಪ್ರಥಮ ದರ್ಜೆ ಸಹಾಯಕ, ನೇತ್ರಾಧಿಕಾರಿ, ಪ್ರಯೋಗ ಶಾಲೆ ತಂತ್ರಜ್ಞಾನ ಹುದ್ದೆಯಲ್ಲಿ ತಲಾ ಒಬ್ಬೊಬ್ಬರು ಕಾರ್ಯನಿರ್ವಹಿಸುತ್ತಿದ್ದಾರೆ. ದ್ವಿತೀಯ ದರ್ಜೆ ಸಹಾಯಕ ಹುದ್ದೆ ಖಾಲಿ ಇದೆ. ಬಿ.ಎಚ್‌.ಇ., ಫಾರ್ಮಾಸಿಸ್ಟ್‌, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ, ಹಿರಿಯ ಪುರುಷ ಆರೋಗ್ಯ ಸಹಾಯಕ, ವಾಹನ ಚಾಲಕ ತಲಾ ಒಂದೊಂದು ಹುದ್ದೆ ಖಾಲಿ ಇದೆ. ಕಿರಿಯ ಪುರುಷ ಆರೋಗ್ಯ ಸಹಾಯಕ 3 ಹುದ್ದೆಯಲ್ಲಿ 2 ಖಾಲಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ 8 ಹುದ್ದೆಯಲ್ಲಿ 7 ಖಾಲಿ, ಡಿ ದರ್ಜೆ 3 ಹುದ್ದೆಯಲ್ಲಿ 2 ಖಾಲಿ ಇವೆ. ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿ ಡಾ| ದೀಕ್ಷಾ ಅವರು ದಿನಕ್ಕೆ ಕನಿಷ್ಠ 80 ರಿಂದ 90 ರೋಗಿಗಳನ್ನು ನೋಡುತ್ತಿದ್ದಾರೆ. ಆದರೆ ರೋಗಿಗಳಿಗೆ ಪರದಾಟ ತಪ್ಪುತ್ತಿಲ್ಲ. ಇಲ್ಲಿ ವಾಹನದ ವ್ಯವಸ್ಥೆಯೇ ಇಲ್ಲ.

ಯಾವುದೇ ರೀತಿಯ ಸಮಸ್ಯೆಯಿಲ್ಲ
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಹಾಗೂ ದಾದಿಯರ ಹುದ್ದೆ ಖಾಲಿ ಇದೆ. ಇಲಾಖೆ ಗುತ್ತಿಗೆ ಆಧಾರದ ಮೇಲೆ ಕೆಲವೊಂದು ಖಾಲಿ ಹುದ್ಧೆಗಳಿಗೆ ನೇಮಕ ಮಾಡಿಕೊಂಡಿದೆ. ಸರಕಾರದಿಂದ ಒದಗಿಸಲಾಗುತ್ತಿರುವ ಔಷಧವು ವಿವಿಧ ರೋಗಿಗಳ ರೋಗಕ್ಕೆ ಅನುಗುಣವಾಗಿ ಉಪಯೋಗಕ್ಕೆ ಲಭಿಸುತ್ತಿದ್ದು ಆ ಬಗ್ಗೆ ಯಾವುದೇ ರೀತಿಯ ಸಮಸ್ಯೆಯಿಲ್ಲ.
-ಡಾ| ಸನ್ಮಾನ ಶೆಟ್ಟಿ, ಪ್ರಭಾರ ಆಡಳಿತ ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಿದ್ದಾಪುರ

ರೋಗಿಗಳಿಗೆ ತೊಂದರೆಯಾಗದ ರೀತಿ ಕಾರ್ಯ ನಿರ್ವಹಣೆ
ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರು ಇಲ್ಲ. ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದೇವೆ. ಖಾಯಂ ವೈದ್ಯರ ನೇಮಕ ಸರಕಾರದ ಮಟ್ಟದಲ್ಲಿ ನಡೆಯ ಬೇಕಾಗಿದೆ. ರೋಗಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಕೆಲವೊಂದು ಮೂಲ ಸಮಸ್ಯೆಗಳ ಬಗ್ಗೆ ಶಾಸಕರ ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. 
-ಡಾ| ನಾಗಭೂಷಣ ಉಡುಪ, ತಾಲೂಕು ವೈದ್ಯಾಧಿಕಾರಿ ಕುಂದಾಪುರ

ಹೆರಿಗೆ ವಾರ್ಡ್‌ ಕೊರತೆ
ಮೊದಲು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರು ಹಾಗೂ ದಾದಿಯರು ನೇಮಕವಾಗಬೇಕು. ಸಿದ್ದಾಪುರ ಪರಿಸರದ 8 ಗ್ರಾಮಗಳ ಗರ್ಭಿಣಿಯರ ಸುಶ್ರೂಷೆಗೆ ಅಗತ್ಯವಿರುವ ಮೆಟರ್ನಿಟಿ ವಾರ್ಡ್‌ (ಲೇಬರ್‌ ವಾರ್ಡ್‌) ಕೊರತೆ ಇದೆ. ತುರ್ತು ಚಿಕಿತ್ಸೆಗೆ ದೂರದ ಕುಂದಾಪುರಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ. ಇದರ ಬಗ್ಗೆ ಇಲಾಖೆ ಕ್ರಮ ಕೈಗೊಳ್ಳುವುದು ಅಗತ್ಯ.
-ಕೆ. ಭೋಜ ಶೆಟ್ಟಿ ಕಡ್ರಿ ಮಾಜಿ ಸದಸ್ಯರು ಗ್ರಾ. ಪಂ. ಸಿದ್ದಾಪುರ 

24×7 ಸೇವೆ 
ಸಿದ್ದಾಪುರ ಆರೋಗ್ಯ ಕೇಂದ್ರ ವ್ಯಾಪ್ತಿಗೆ ನಕ್ಸಲ್‌ ಪೀಡಿತ ಪ್ರದೇಶ ಮತ್ತು ತೀರ ಗ್ರಾಮೀಣ ಭಾಗಗಳು ಹೊಂದಿವೆ. ತುರ್ತು ಚಿಕಿತ್ಸೆಗೆ ಸಂಬಂಧಪಟ್ಟಂತೆ ಬೇಕಾದ ವ್ಯವಸ್ಥೆಗಳ ಕೊರತೆ ನಿಭಾಯಿಸುವಲ್ಲಿ ಮೇಲಧಿಕಾರಿಗಳ ಗಮನಕ್ಕೆ ಜಿ. ಪಂ. ಸಭೆಯಲ್ಲಿ ತರಲಾಗಿದೆ. ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸುವ ಬಗ್ಗೆ ಶಾಸಕರು ಪ್ರಯತ್ನ ಮಾಡುತ್ತಿದ್ದಾರೆ.  ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸುವುದರೊಡನೆ 24×7 ಸೇವೆ ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳುವಂತೆ ಪ್ರಯತ್ನಿಸಲಾಗುವುದು.
-ರೋಹಿತ್‌ ಕುಮಾರ್‌ ಶೆಟ್ಟಿ, ಸದಸ್ಯರು, ಜಿ. ಪಂ. ಸಿದ್ದಾಪುರ ಕ್ಷೇತ್ರ 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.