ಎನ್‌ಸಿಸಿ ಅಧಿಕಾರಿಗಳ ವರ್ಗಾವಣೆ ಕಿರಿಕಿರಿ : ಕಾಲೇಜುಗಳ ಎನ್‌ಸಿಸಿ ಘಟಕ ಮುಚ್ಚುವ ಭೀತಿ


Team Udayavani, Aug 28, 2022, 2:06 PM IST

ಎನ್‌ಸಿಸಿ ಅಧಿಕಾರಿಗಳ ವರ್ಗಾವಣೆ ಕಿರಿಕಿರಿ : ಕಾಲೇಜುಗಳ ಎನ್‌ಸಿಸಿ ಘಟಕ ಮುಚ್ಚುವ ಭೀತಿ

ಉಡುಪಿ : ಸರಕಾರಿ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೈನ್ಯದಿಂದ ತರಬೇತಿ ಪಡೆದು ಎನ್‌ಸಿಸಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವವರು ಕಡ್ಡಾಯ ವರ್ಗಾವಣೆಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಎನ್‌ಸಿಸಿ ಅಧಿಕಾರಿಗಳ ವರ್ಗಾವಣೆಯಿಂದ ಕಾಲೇಜಿನಲ್ಲಿ ಎನ್‌ಸಿಸಿ ಘಟಕ ಮುಚ್ಚುವ ಸ್ಥಿತಿಗೆ ತಲುಪುತ್ತಿದೆ.

10 ವರ್ಷಕ್ಕಿಂತ ಹೆಚ್ಚುಕಾಲ ಒಂದೇ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಧ್ಯಾಪಕರನ್ನು ಕಾಲೇಜು ಶಿಕ್ಷಣ ಇಲಾಖೆ ಕಡ್ಡಾಯವಾಗಿ ವರ್ಗಾವಣೆ ಮಾಡುತ್ತಿದೆ. ಇದೇ ನಿಯಮವನ್ನು ಎನ್‌ಸಿಸಿ ಅಧಿಕಾರಿಗಳಿಗೂ ಅನ್ವಯಿಸಿರುವುದರಿಂದ ವರ್ಗಾವಣೆ ಪಡೆದ ಎನ್‌ಸಿಸಿ ಅಧಿಕಾರಿಗಳು ತಾವು ಹೊಸದಾಗಿ ಸೇವೆ ಆರಂಭಿಸುವ ಕಾಲೇಜಿನಲ್ಲಿ ಎನ್‌ಸಿಸಿ ಘಟಕ ಇಲ್ಲದೆ ಇರುವುದರಿಂದ ಪಡೆದ ತರಬೇತಿಗೆ ಅರ್ಥವೇ ಇಲ್ಲದಂತಾಗುತ್ತಿದೆ ಎಂದು ಬೇಸರ ತೋಡಿಕೊಳ್ಳುತ್ತಿದ್ದಾರೆ.

ರಾಜ್ಯದ 430 ಸರಕಾರಿ ಪದವಿ ಕಾಲೇಜುಗಳಲ್ಲಿ 120ಕ್ಕೂ ಅಧಿಕ ಕಾಲೇಜುಗಳಲ್ಲಿ ಎನ್‌ಸಿಸಿ ಘಟಕವಿದೆ. ವೃತ್ತಿಗೆ ಸೇರಿದ ಪ್ರಾಧ್ಯಾಪಕರು ಎನ್‌ಸಿಸಿ ಅಧಿಕಾರಿಯಾಗಬೇಕಾದರೆ ಸೇನೆಯಿಂದ ಮೂರು ತಿಂಗಳ ತರಬೇತಿ ಪಡೆಯಬೇಕು. ತರಬೇತಿಯ ಅನಂತರದಲ್ಲಿ ಲೆಫ್ಟಿನೆಂಟ್‌ ರ್‍ಯಾಂಕ್‌ ಲಭ್ಯವಾಗುತ್ತದೆ. 8 ವರ್ಷಗಳ ಸೇವೆ ಪೂರೈಸಿ ಇನ್ನೊಂದು ತಿಂಗಳ ವಿಶೇಷ ತರಬೇತಿ ಪಡೆದರೆ ಕ್ಯಾಪ್ಟನ್‌ ರ್‍ಯಾಂಕ್‌ ಲಭಿಸುತ್ತದೆ. ಆರು ವರ್ಷದ ಸೇವೆಯ ಅನಂತರ ಮೇಜರ್‌ ರ್‍ಯಾಂಕ್‌ ಬರಲಿದೆ. ಹೀಗೆ ವಿವಿಧ ರ್‍ಯಾಂಕ್‌ ಪಡೆಯುವ ಮಧ್ಯದಲ್ಲಿ ಎನ್‌ಸಿಸಿ ಇಲ್ಲದ ಕಾಲೇಜಿಗೆ ವರ್ಗಾವಣೆ ಹೊಂದಿದರೆ ರ್‍ಯಾಂಕ್‌ ತಪ್ಪಿ ಹೋಗುತ್ತದೆ. ಇದರಿಂದ ಎನ್‌ಸಿಸಿ ಕೆಡೆಟ್‌ಗಳಾಗಿರುವ ವಿದ್ಯಾರ್ಥಿಗಳಿಗೂ ಎನ್‌ಸಿಸಿ ಅಧಿಕಾರಿಯಾಗಿರುವ ಪ್ರಾಧ್ಯಾಪಕರಿಗೂ ತೊಂದರೆ ಆಗುತ್ತಿದೆ.

ಎನ್‌ಸಿಸಿಯಿಂದ ಎನ್‌ಸಿಸಿಗೆ ವರ್ಗಾವಣೆ ಆಗಬೇಕು
ಎನ್‌ಸಿಸಿ ಅಧಿಕಾರಿಗಳಿಗೆ ಪ್ರತ್ಯೇಕ ಕೌನ್ಸೆಲಿಂಗ್‌ ವ್ಯವಸ್ಥೆ ಇಲ್ಲ. ಸಾಮಾನ್ಯ ಕೌನ್ಸೆಲಿಂಗ್‌ ವೇಳೆಯಲ್ಲಿ ಇವರು ಭಾಗವಹಿಸಬೇಕು. ಸದಸ್ಯ ನಿಯಮದ ಪ್ರಕಾರ 4 ವರ್ಷ ಮತ್ತು ಅನಂತರ 2 ವರ್ಷ ವಿನಾಯಿತಿ ಹೀಗೆ ಒಂದೇ ಕಾಲೇಜಿನಲ್ಲಿ ಒಟ್ಟು 6 ವರ್ಷ ಸೇವೆ ಸಲ್ಲಿಸಲು ಅವಕಾಶವಿದೆ. ಆರು ವರ್ಷ ಅನಂತರ ವರ್ಗಾವಣೆ ಪಡೆಯಲೇ ಬೇಕಾಗುತ್ತದೆ. ವರ್ಗಾವಣೆ ಪಡೆಯುವ ಸಂದರ್ಭದಲ್ಲಿ ಎನ್‌ಸಿಸಿ ಘಟಕ ಇರುವ ಇನ್ನೊಂದು ಕಾಲೇಜಿಗೆ ವರ್ಗಾವಣೆ ಮಾಡಿದಾಗ ಅಥವಾ ಎನ್‌ಸಿಸಿ ಅಧಿಕಾರಿಗಳ ನಡುವೆ ಪರಸ್ಪರ ಹೊಂದಾಣಿಕೆಯ ವರ್ಗಾವಣೆ ವ್ಯವಸ್ಥೆ ಕಲ್ಪಿಸಿದಾಗ ವಿದ್ಯಾರ್ಥಿಗಳಿಗೂ ಪ್ರಾಧ್ಯಾಪಕರಿಗೂ ಹೆಚ್ಚು ಅನುಕೂಲವಾಗಲಿದೆ ಎಂಬುದು ಎನ್‌ಸಿಸಿ ಅಧಿಕಾರಿಗಳ ವಾದ.

ರಾಜ್ಯದ ಹಲವು ಸರಕಾರಿ ಕಾಲೇಜುಗಳಲ್ಲಿ ಎನ್‌ಸಿಸಿ ಘಟಕಕ್ಕೆ ಬೇಡಿಕೆಯಿದೆ. ಕಾಲೇಜು ವಿದ್ಯಾರ್ಥಿಗಳಲ್ಲಿ ಸೇನೆಯ ಬಗ್ಗೆ ಒಲವು ಮೂಡಿಸಲು ಮತ್ತು ಎನ್‌ಸಿಸಿ ಕೆಡೆಟ್‌ಗಳು ಸುಲಭದಲ್ಲಿ ಸೈನ್ಯ ಸೇರುತ್ತಾರೆ. ಹೀಗಾಗಿ ಎಲ್ಲ ಕಡೆಗಳಲ್ಲೂ ಎನ್‌ಸಿಸಿಗೆ ಬೇಡಿಕೆಯಿದೆ. ಆದರೆ ಎನ್‌ಸಿಸಿ ಘಟಕ ತೆರೆಯಲು ಕರ್ನಾಟಕ-ಗೋವಾ ಡೈರೆಕ್ಟರೇಟ್‌ ಕಚೇರಿಯ ಅನುಮತಿಯೂ ಬೇಕಾಗುತ್ತದೆ. ಒಂದು ಘಟಕ ಆರಂಭಿಸಲು ಕನಿಷ್ಠ 100 ವಿದ್ಯಾರ್ಥಿಗಳು ಇರಬೇಕಾಗುತ್ತದೆ. ಈಗ ಇರುವ ಅಧಿಕಾರಿಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಸರಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ವರ್ಗಾವಣೆಯಿಂದ ರಾಜ್ಯದ ನಾಲ್ಕೈದು ಕಾಲೇಜುಗಳಲ್ಲಿ ಎನ್‌ಸಿಸಿ ಘಟಕ ಮುಚ್ಚುವ ಸ್ಥಿತಿಗೆ ಬಂದಿದೆ.

ಸರಕಾರಿ ಪದವಿ ಕಾಲೇಜಿನ ಎನ್‌ಸಿಸಿ ಅಧಿಕಾರಿಗಳನ್ನು ಇನ್ನೊಂದು ಕಡೆಗೆ ವರ್ಗಾವಣೆ ಮಾಡುವಾಗ ಎನ್‌ಸಿಸಿ ಘಟಕ ಇರುವ ಕಾಲೇಜಿಗೆ ಮಾಡಬೇಕು ಎಂಬ ನಿಯಮ ಈಗ ಇಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ಗಂಭೀರವಾಗಿ ಯೋಚನೆ ನಡೆಸಲಿದ್ದೇವೆ. ವರ್ಗಾವಣೆಗೆ ಎರಡು ವರ್ಷಗಳ ವಿನಾಯಿತಿ ಕಲ್ಪಿಸಲಾಗಿದೆ.
– ಪಿ. ಪ್ರದೀಪ್‌, ಆಯುಕ್ತ, ಕಾಲೇಜು ಶಿಕ್ಷಣ ಇಲಾಖೆ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.