ಹೆದ್ದಾರಿ ಬಳಿಯ ಗೂಡಂಗಡಿ ತೆರವಿಗೆ ಗಣ್ಯರ ಅಸಮಾಧಾನ


Team Udayavani, Feb 23, 2017, 12:33 PM IST

2202kota5e.jpg

ಕೋಟ: ಸಾಸ್ತಾನದ ಗುಂಡ್ಮಿ ಟೋಲ್‌ಗೇಟ್‌ ಸಮೀಪ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಸಂದರ್ಭದಲ್ಲಿ ಅತಿಕ್ರಮಣಗೊಂಡ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ  ಮೂರು ಗೂಡಂಗಡಿಗಳನ್ನು ಫೆ. 21ರಂದು ಕುಂದಾಪುರ ಸಹಾಯಕ ಕಮಿಷನರ್‌ ಅವರ ಆದೇಶದ ಮೇರೆಗೆ, ಬ್ರಹ್ಮಾವರ ವಿಶೇಷ ತಹಶೀಲ್ದಾರರು ತೆರವುಗೊಳಿಸಿದ ಸ್ಥಳಕ್ಕೆ ಬುಧವಾರ ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ್‌ ಪೂಜಾರಿ, ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್‌, ಕಾರ್ಮಿಕ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ರವಿ ಶೆಟ್ಟಿ, ರಾಮ ಸೇನೆಯ ರಾಜ್ಯ ಉಪಾಧ್ಯಕ್ಷ ಶಿವ ಕುಮಾರ್‌ ಕರ್ಜೆ ಸಹಿತ ಹಲವು ಗಣ್ಯರು ಭೇಟಿ ನೀಡಿದರು ಹಾಗೂ ಸೂಕ್ತ ಕ್ರಮಕೈಗೊಳ್ಳದೆ ಅಂಗಡಿಗಳನ್ನು ತೆರವುಗೊಳಿಸಿದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ಬದಲಿ ವ್ಯವಸ್ಥೆ ಮಾಡಿಕೊಳ್ಳುವ ತನಕ ಅವಕಾಶ ನೀಡಿ 
ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರ ನಡೆಸುವವರಿಗೆ ಯಾವುದೇ ಸೂಚನೆ ನೀಡದೆ ತೆರವುಗೊಳಿಸಿದ್ದು ಸರಿಯಲ್ಲ. ಈ ಕುರಿತು ಸಹಾಯಕ ಕಮಿಷನರ್‌, ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸುತ್ತೇನೆ ಹಾಗೂ ಬದಲಿ ವ್ಯವಸ್ಥೆ ಮಾಡಿಕೊಳ್ಳುವ ತನಕ ಸಮಸ್ಯೆ ಮಾಡದಂತೆ  ಮನವಿ ಮಾಡುವುದಾಗಿ ಸ್ಥಳಕ್ಕಾಗಮಿಸಿದ ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ್‌ ಪೂಜಾರಿ ತಿಳಿಸಿದರು.

ಸಕಾರಣವಿಲ್ಲದೆ ತೆರವು ಸರಿಯಲ್ಲ 
ರಾಷ್ಟ್ರೀಯ ಹೆದ್ದಾರಿಗಾಗಿ ವಶಪಡಿಸಿಕೊಂಡ ಜಾಗದಲ್ಲಿ ಸರ್ವೀಸ್‌ ರಸ್ತೆ  ಅಥವಾ ಬೇರೆ ಯಾವುದೇ ಅಭಿವೃದ್ಧಿ ನಡೆಯುವ ಕಾರಣಕ್ಕಾಗಿ ಗೂಡಂಗಡಿ ತೆರವುಗೊಳಿಸಿದರೆ ತೊಂದರೆ ಇರಲಿಲ್ಲ. ಆದರೆ ಯಾವುದೇ ಸಕಾರಣವಿಲ್ಲದೆ ಅಂಗಡಿ ಹಿಂದಿನ ಜಾಗದ ಮಾಲೀಕರ ಮನವಿಗಾಗಿ  ಸುಮಾರು ಇಪ್ಪತ್ತು ವರ್ಷಕ್ಕೂ ಹೆಚ್ಚು ಸಮಯದಿಂದ ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದವರ ಮೇಲೆ ಯಾವುದೇ ಸೂಚನೆ ನೀಡದೆ ಕ್ರಮಕೈಗೊಂಡಿದ್ದು ಸರಿಯಲ್ಲ. 

ರಾಷ್ಟ್ರೀಯ ಹೆದ್ದಾರಿಗೆ  ಅತಿಕ್ರಮಣವಾದ ಜಾಗ ಎನ್ನುವ ಕಾರಣಕ್ಕೆ ಕ್ರಮಕೈಗೊಳ್ಳುವುದಾದರೆ ಹೆದ್ದಾರಿ ಪಕ್ಕದಲ್ಲಿರುವ ಎಲ್ಲ ಕಟ್ಟಡಗಳ ಮೇಲೂ ಕ್ರಮಕೈಗೊಳ್ಳಬೇಕು. ಈ ಸಮಸ್ಯೆಯನ್ನು ಸಂಸದರ ಗಮನಕ್ಕೆ ತರಲಾಗುವುದು ಎಂದು ಸ್ಥಳಕ್ಕೆ ಭೇಟಿ ನೀಡಿದ ಉಡುಪಿ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್‌ ಪತ್ರಿಕೆಗೆ ತಿಳಿಸಿದ್ದಾರೆ.

ಬಡ ಕಾರ್ಮಿಕನಿಗೆ ಅನ್ಯಾಯ ವಾದರೆ ಜಿಲ್ಲಾ ವ್ಯಾಪ್ತಿ ಹೋರಾಟ ಕೋಟ್ಯಂತರ ಖರ್ಚು ಮಾಡಿ ಹೆದ್ದಾರಿಗೆ ಅತಿಕ್ರಮಣವಾದ ಜಾಗದಲ್ಲಿ ನಿರ್ಮಿಸಿದ ಕಟ್ಟಡಗಳ ಮೇಲೆ ಯಾವುದೇ  ಕ್ರಮಕೈಗೊಳ್ಳದ ಸಹಾಯಕ ಕಮಿಷನರ್‌ ಅವರು ಹೊಟ್ಟಪಾಡಿಗಾಗಿ ಕೆಲಸ ಮಾಡುವ ಮೂರು ಮಂದಿ ಬಡ ಕಾರ್ಮಿಕರ ಮೇಲೆ ಕ್ರಮಕೈಗೊಳ್ಳಲು ಮುಂದಾಗಿರುವುದು ಸರಿಯಲ್ಲ. 

ಸಕಾರಣವಿಲ್ಲದೆ ಯಾವುದೇ ಕಾರಣಕ್ಕೂ ಅಂಗಡಿ ತೆರವಿಗೆ ಅವಕಾಶ  ನೀಡುವುದಿಲ್ಲ. ಒಂದು ವೇಳೆ ನಮ್ಮ ಮನವಿಯನ್ನು ಧಿಕ್ಕರಿಸಿ ಕ್ರಮಕೈಗೊಂಡಲ್ಲಿ ಜಿಲ್ಲೆಯಾದ್ಯಂತ ಕಾರ್ಮಿಕ ವೇದಿಕೆ ಮೂಲಕ ಹೋರಾಟ ನಡೆಸಲಾಗುವುದು ಎಂದು ಕಾರ್ಮಿಕ ವೇದಿಕೆಯ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಪತ್ರಿಕೆಗೆ ತಿಳಿಸಿದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.