ಉತ್ತಮ ದಾಖಲಾತಿ; ಬೇಕಿದೆ ಅಗತ್ಯ ಸೌಲಭ್ಯ


Team Udayavani, Sep 23, 2021, 4:10 AM IST

Untitled-1

ಹೆಬ್ರಿ: 139 ವರ್ಷಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಿರುವ  ಹೆಬ್ರಿ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಈ ಬಾರಿ ದಾಖಲೆ ಪ್ರಮಾಣದ ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ.

1882ರಲ್ಲಿ ಹುಲ್ಲಿನ ಮಾಡು, ಚಿಕ್ಕ ತರಗತಿ ಕೊಠಡಿ ಓರ್ವ ಶಿಕ್ಷಕರೊಂದಿಗೆ ಆರಂಭಗೊಂಡ ಶಾಲೆಯಲ್ಲಿ ಇಂದು ಕನ್ನಡ ಮಾಧ್ಯಮ ಜತೆ ಆಂಗ್ಲ ಮಾಧ್ಯಮ ತರಗತಿಗಳು ನಡೆಯತ್ತಿದೆ.

ಕಳೆದ ವರ್ಷ ಒಟ್ಟು 305 ವಿದ್ಯಾರ್ಥಿಗಳಿದ್ದರು. ಈ ಬಾರಿ ಒಂದನೇ ತರಗತಿಗೆ 54 ವಿದ್ಯಾರ್ಥಿಗಳು ದಾಖಲಾಗಿದ್ದು   ಒಟ್ಟು 77 ವಿದ್ಯಾರ್ಥಿಗಳು ಇತರ ತರಗತಿಗಳಿಗೆ ಸೇರ್ಪಡೆಗೊಂಡಿದ್ದಾರೆ. 2ರಿಂದ 8ನೇ ತರಗತಿ ತನಕ 328 ವಿದ್ಯಾರ್ಥಿಗಳು ಓದುತ್ತಿದ್ದಾರೆ.

ಆಂಗ್ಲ ಮಾಧ್ಯಮ ತರಗತಿ:

2011-12ರಲ್ಲಿ 6ನೇ ತರಗತಿಯಿಂದ ಆಂಗ್ಲ ಮಾದ್ಯಮ ಆರಂಭಗೊಂಡಿದ್ದು ಕಳೆದ 3 ವರ್ಷಗಳ ಹಿಂದೆ 1ನೇ ತರಗತಿಯಿಂದ ಆಂಗ್ಲಮಾಧ್ಯಮ ಆರಂಭಗೊಂಡಿದೆ.  ಸರಕಾರಿ ಶಾಲೆಗೆ ಮಕ್ಕಳ ಸಂಖ್ಯೆ ಕಡಿಮೆಯಾಗಬಾರದು ಎಂಬ ನಿಟ್ಟಿನಲ್ಲಿ  ಹೆತ್ತವರ ನೆರವಿನಿಂದ ಇಲ್ಲಿ ಎಲ್‌ಕೆಜಿ ತರಗತಿಗಳು ಆರಂಭಿಸಲಾಗಿದ್ದು 37 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ಶಿಕ್ಷಕರ ಕೊರತೆ:

ಶಾಲೆಯಲ್ಲಿ ಪ್ರಸ್ತುತ 10 ಜನ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು ನಿಯಮ ಪ್ರಕಾರ  13 ಜನ ಶಿಕ್ಷಕರ ಅಗತ್ಯವಿದ್ದು 3 ಜನ ಶಿಕ್ಷಕರ  ಕೊರತೆ ಇದೆ.

ಕಡಿಮೆಯಾಗದ  ವಿದ್ಯಾರ್ಥಿ ಸಂಖ್ಯೆ:

ಈ ಹಿಂದೆ ಬಂಗಾರುಗುಡ್ಡೆ, ಇಂದಿರಾ ನಗರ, ಕನ್ಯಾನ, ಗಾಂಧಿ ನಗರ, ಕುಚ್ಚಾರು, ಮುದ್ರಾಡಿ, ಶಿವಪುರ, ವಂಡಾರಬೆಟ್ಟು, ಕೊಂಡೆಜೆಡ್ಡು, ಸೊಳ್ಳೆ ಕಟ್ಟೆ, ನಾಡಾ³ಲು, ಮಂಡಾಡಿಜೆಡ್ಡು, ಸೀತಾನದಿ, ಸೋಮೇಶ್ವರ ಸುತ್ತಮುತ್ತಲಿನ ಗ್ರಾಮದ  ಮಕ್ಕಳು ಇದೇ ಶಾಲೆಗೆ ಬರುತ್ತಿದ್ದು 800 ವಿದ್ಯಾರ್ಥಿಗಳನ್ನು ಹೊಂದಿ ಹಿರಿಯ ಶಾಲೆ ಎಂಬ ಹೆಗ್ಗಳಿಕೆ ಇತ್ತು. ಇಂದು ಈ ಶಾಲೆಯ ವ್ಯಾಪ್ತಿಯಲ್ಲಿ  16 ಸರಕಾರಿ,  2 ಖಾಸಗಿ ಶಾಲೆಗಳಿದ್ದರೂ 382 ವಿದ್ಯಾರ್ಥಿಗಳನ್ನು ಹೊಂದಿರುವುದು ದಾಖಲಾಗಿದೆ.

ಮೂಲ ಸೌಕರ್ಯ ಕೊರತೆ  :

ಸುಮಾರು 2.95 ಎಕ್ರೆ ಜಾಗದಲ್ಲಿ ಹೆಬ್ರಿಯ ಹೃದಯ ಭಾಗದಲ್ಲಿರುವ ಶಾಲೆಗೆ ಆವರಣ ಗೋಡೆ ಸರಿಯಾಗಿಲ್ಲದೆ ಭದ್ರತೆ ಇಲ್ಲ.  ಶಾಲೆಗೆ ಗೇಟ್‌ ಇಲ್ಲದೆ ಇರುವುದರಿಂದ ಅನೈತಿಕ ಚಟುವಟಿಕೆಗಳಿಗೆ ತಾಣವಾಗುವ ಭೀತಿಯೂ ಇದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದ‌ರಿಂದ  ಶೌಚಾಲಯ, ತರಗತಿ ಕೊಠಡಿಗಳ ಕೊರತೆ ಎದುರಾಗಿದೆ.

ನೂತನ ಕಟ್ಟಡದ ಆವಶ್ಯಕತೆ:

139 ವರ್ಷಗಳ ಇತಿಹಾಸವಿರುವ ಶಾಲೆಗೆ ನೂತನ ಕಟ್ಟಡದ ಆವಶ್ಯಕತೆ ಇದೆ. ಈಗಾಗಲೇ ದಾನಿಗಳ ನೆರವಿನಿಂದ ಶಾಲೆ ಅಭಿವೃದ್ಧಿ ಕಾಣುತ್ತಿದ್ದು ಮುಂದೆಯು ಈ ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ದಾನಿಗಳು ಮುತುವರ್ಜಿ ವಹಿಸಿದಾಗ ಉತ್ತಮ ವಾತಾವರಣವನ್ನು ನಿರ್ಮಿಸಲು ಸಾಧ್ಯವಿದೆ. ಸರಕಾರಿ ಶಾಲೆಗಳ ಪೈಕಿ ಅತೀ ಹೆಚ್ಚು  ವಿದ್ಯಾರ್ಥಿಗಳನ್ನು ಹೊಂದಿದ  ಈ  ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಪ್ರತೀ ವರ್ಷ ಹೆಚ್ಚುತ್ತಿದೆ.ಚಂಪಕಾ ಕೆ.,  ಮುಖ್ಯ ಶಿಕ್ಷಕಿ

ಆವರಣ ಗೋಡೆ ಅಗತ್ಯ:

ಶಾಲೆಯು ಪೇಟೆಯ ಮಧ್ಯ ಇರುವುದರಿಂದ  ಭದ್ರತೆಯ ಕಾರಣದಿಂದ  ಆವರಣ ಗೋಡೆಯ ಆವಶ್ಯಕತೆ ಇದೆ. ಇಲ್ಲಿ  ಕಲಿತ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಸ್ಥಾನದಲ್ಲಿದ್ದಾರೆ. ಅವರು ಈ ಶಾಲೆಯ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿದರೆ ಮಾದರಿ ಶಾಲೆಯಾಗಿ ರೂಪುಗೊಳ್ಳಲು ಸಾಧ್ಯವಿದೆ.ತಿಪ್ಪೇಸ್ವಾಮಿ,  ಎಸ್‌ಡಿಎಂಸಿ ಅಧ್ಯಕ್ಷರು

-ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.