ಬಜಗೋಳಿ ಪೇಟೆಗೆ ಬೇಕಿದೆ ವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆ
ರಸ್ತೆಬದಿಯಲ್ಲಿಯೇ ವಾಹನಗಳ ನಿಲುಗಡೆ ; ಸ್ಥಳೀಯರ ದೈನಂದಿನ ವ್ಯವಹಾರಗಳಿಗೆ ತೊಂದರೆ
Team Udayavani, Oct 1, 2019, 5:08 AM IST
ಬಜಗೋಳಿ (ಪಳ್ಳಿ): ದಿನೇ ದಿನೇ ಹೆಚ್ಚುತ್ತಿರುವ ವಾಹನಗಳು ಹಾಗೂ ಜನಸಂದಣಿಯ ಕಾರಣ ಬಜಗೋಳಿ ಪೇಟೆಗೆ ವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆ ಅಗತ್ಯವಿದೆ.
ಕೇರಳದಿಂದ ಸೋಲಾಪುರಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ ಎನ್ಎಚ್-13 ಮತ್ತು ಕುಂದಾಪುರದಿಂದ ಧರ್ಮಸ್ಥಳಕ್ಕೆ ಹಾದು ಹೋಗುವ ರಾಜ್ಯ ಹೆದ್ದಾರಿ ಎಸ್ಎಚ್ 69 ಬಜಗೋಳಿ ಪೇಟೆಯ ಮೂಲಕವೇ ಹಾದು ಹೋಗುತ್ತದೆ. ಧರ್ಮಸ್ಥಳ, ಶೃಂಗೇರಿ, ಹೊರನಾಡು ಮುಂತಾದ ಯಾತ್ರಾ ಸ್ಥಳಗಳಿಗೆ ತೆರಳುವವರೂ ಬಜಗೋಳಿ ಮೂಲಕ ಸಂಚರಿಸುವುದರಿಂದ ಪೆಟೆಯಲ್ಲಿ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಸಂಕಷ್ಟಪಡುವಂತಾಗಿದೆ.
ಹೊಸ್ಮಾರ್, ನೆಲ್ಲಿಕಾರ್, ನಲ್ಲೂರು, ಮುಡಾರು, ಮಾಳ, ಹುಕ್ರಟ್ಟೆ, ಮಲ್ಲಾರ್, ಕಡಾರಿ, ಕೆರ್ವಾಶೆ, ಮಿಯ್ನಾರು ಭಾಗದ ಸ್ಥಳೀಯರು ದೈನಂದಿನ ವ್ಯವಹಾರ ಗಳಿಗೆ ಬಜಗೋಳಿ ಪೇಟೆಯನ್ನೇ ಅವಲಂಬಿಸಿದ್ದಾರೆ. ಬಸ್ಗಳೂ ಪೇಟೆ ಮೂಲಕವೇ ಹಾದುಹೋಗುತ್ತಿದ್ದು, ರಸ್ತೆಗಳಲ್ಲಿಯೇ ವಾಹನಗಳನ್ನು ನಿಲ್ಲಿಸುವ ಕಾರಣ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.
ಪ್ರತೀ ಗುರುವಾರ ನಡೆಯುವ ವಾರದ ಸಂತೆಯ ದಿನ ಎಂದಿನಿಗಿಂತ ವಾಹನ ದಟ್ಟಣೆ ಹೆಚ್ಚಾಗುತ್ತದೆ. ಸುತ್ತಲ 7-8 ಗ್ರಾಮಗಳ ಕೃಷಿಕರು ಹಾಗೂ ವ್ಯಾಪರಸ್ಥರು ಕೃಷಿ ಉತ್ಪನ್ನಗಳನ್ನು, ತಾವು ಬೆಳೆದ ತರಕಾರಿಗಳನ್ನು ಮಾರಲೆಂದು ಬರುವ ಕಾರಣ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ತೊಂದರೆ ಆಗುತ್ತಿದೆ.
ನಲ್ಲೂರು ಹಾಗೂ ಮುಡಾರು ಗ್ರಾ.ಪಂ. ಕಚೇರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ನ್ಯಾಯಬೆಲೆ ಅಂಗಡಿ, ಶಾಲಾ ಕಾಲೇಜುಗಳು ಬಜಗೋಳಿ ಪೇಟೆಯಲ್ಲಿಯೇ ಇರುವುದರಿಂದ ಇಲ್ಲಿಗೆ ಬರುವವರು ತಮ್ಮ ವಾಹನ ಗಳನ್ನು ರಸ್ತೆ ಬದಿಯೇ ನಿಲ್ಲಿಸಬೇಕಾದ ಸ್ಥಿತಿ ಇದೆ. ಈ ಬಗ್ಗೆ ಸ್ಥಳೀಯಾಡಳಿತ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಪಾರ್ಕಿಂಗ್ಗೆ ಸ್ಥಳ ಗುರುತಿಸುವ ಜತೆಗೆ ಸೂಕ್ತ ವ್ಯವಸ್ಥೆಕಲ್ಪಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಯತ್ನಿಸಬೇಕೆಂಬುದು ಸ್ಥಳೀಯರ ಆಗ್ರಹ.
ಅಧಿಕಾರಿಗಳ ಗಮನ ಸೆಳೆಯಲಾಗುವುದು
ಬಜಗೋಳಿ ಪೇಟೆಯಲ್ಲಿನ ಪಾರ್ಕಿಂಗ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸ್ಥಳೀಯಾಡಳಿತದಿಂದ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ಸೂಕ್ತ ಕ್ರಮಕೈಗೊಳ್ಳಲು ಪ್ರಯತ್ನಿಸಲಾಗುವುದು.
-ಗೀತಾ ಪಾಟ್ಕರ್,ಮುಡಾರು ಗ್ರಾ.ಪಂ.ಅಧ್ಯಕ್ಷರು
ಪಾರ್ಕಿಂಗ್ ವ್ಯವಸ್ಥೆ ಅತ್ಯಗತ್ಯ
ಬೆಳೆೆಯುತ್ತಿರುವ ಬಜಗೋಳಿ ಪೇಟೆಗೆ ಪಾರ್ಕಿಂಗ್ ವ್ಯವಸ್ಥೆ ಅತ್ಯಗತ್ಯ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಲ್ಲಿ ಪ್ರಯತ್ನಿಸಲಾಗುವುದು.
-ಲೋಕೇಶ್ ಶೆಟ್ಟಿ,
ನಲ್ಲೂರು ಗ್ರಾ.ಪಂ.ಅಧ್ಯಕ್ಷರು
ಸೂಕ್ತ ಕ್ರಮ ಕೈಗೊಳ್ಳಲಾಗುವುದು
ಪಾರ್ಕಿಂಗ್ ವ್ಯವಸ್ಥೆ ಕುರಿತು ಸ್ಥಳೀಯಾಡಳಿತದೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ಸದಾಶಿವ ಮೂಲ್ಯ,
ನಲ್ಲೂರು ಗ್ರಾ.ಪಂ.ಪಿಡಿಒ
-ಸಂದೇಶ್ಕುಮಾರ್ ನಿಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ