ಯುವ ರೈತ ಪ್ರಶಸ್ತಿ ನೀಡುವ ಪರಿಪಾಠ ಬೆಳೆಯಲಿ: ಶಾಸಕ ಭಟ್‌

ಸಾಧಕ ರೈತರಿಗೆ ಕೃಷಿ ಪ್ರಶಸ್ತಿ ಪ್ರದಾನ

Team Udayavani, Dec 23, 2019, 7:02 PM IST

Krishi-bhat-23-12

ಉಡುಪಿ: ಜಿಲ್ಲೆಯಲ್ಲಿ ತೋಟಗಾರಿಕೆ, ಕೃಷಿ ಲಾಭದಾಯಕ ಉದ್ಯಮವಾಗಬೇಕು. ಯುವ ಸಮುದಾಯವೂ ಸಾಕಷ್ಟು ಸಂಖ್ಯೆಯಲ್ಲಿ ಕೃಷಿ ಚಟುವಟಿಕೆಯತ್ತ ಗಮನಹರಿಸಬೇಕು. ಈ ಮೂಲಕ ಮುಂದಿನ ದಿನಗಳಲ್ಲಿ ಯುವರೈತ ಪ್ರಶಸ್ತಿ ನೀಡುವ ಪರಿಪಾಠ ಬೆಳೆಯಬೇಕು ಎಂದು ಶಾಸಕ ಕೆ.ರಘುಪತಿ ಭಟ್‌ ಹೇಳಿದರು.

ಜಿ.ಪಂ., ಕೃಷಿ ಇಲಾಖೆ, ಆತ್ಮ ಅನುಷ್ಠಾನ ಸಮಿತಿ, ತಾಲೂಕು ಕೃಷಿಕ ಸಮಾಜ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅಂಬಲಪಾಡಿ ಬೈಪಾಸ್‌ನಲ್ಲಿ ಸೋಮವಾರ ರೈತರ ದಿನಾಚರಣೆ ಅಂಗವಾಗಿ ಸಾಧಕ ರೈತರಿಗೆ ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಮ್ಮಾನದ ಮೂಲಕ ಕೃಷಿಕರು ಮತ್ತಷ್ಟು ಕೃಷಿ ಮಾಡಲು ಪ್ರೇರಣೆಯಾಗಬೇಕು. ಕಳೆದ 20-25 ವರ್ಷಗಳಿಗೆ ಹೋಲಿಸಿದರೆ ಭತ್ತದ ಕೃಷಿ ಶೇ.30ರಿಂದ 40ರಷ್ಟು ಇಳಿಕೆಯಾಗಿದೆ. ಕೃಷಿಬೂಮಿಗಳು ಲೇಔಟ್‌ಗಳಾಗಿವೆ. ಯುವಸಮುದಾಯ ನಗರ ಪ್ರದೇಶಗಳಿಗೆ ಹೋಗಿ ಅಲ್ಪವೇತನಕ್ಕೆ ದುಡಿಯುವುದಕ್ಕಿಂತ ನಮ್ಮಲ್ಲಿರುವ ಕೃಷಿಯನ್ನೇ ಅಭಿವೃದ್ಧಿಪಡಿಸಿ ಉತ್ತಮ ಆದಾಯ ಗಳಿಸಬಹುದು. ಅದರಲ್ಲೂ ಸಾವಯವ ಕೃಷಿಯ ಮೂಲಕ ಉತ್ತಮ ಆದಾಯ ಗಳಿಸಬಹುದು. ಕೆಮಿಕಲ್‌ ಬಳಸದೆ ಬೆಳೆ ಬೆಳೆಸುವುದನ್ನು ಕರಗತಮಾಡಿಕೊಳ್ಳಬೇಕು. 20-25 ವರ್ಷಗಳ ಹಿಂದೆ ಕೃಷಿಗೆ ಇದ್ದ ಮಹತ್ವ ಈಗಲೂ ಮುಂದುವರಿಯಬೇಕು ಎಂದರು.

ಜಿ.ಪಂ.ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆ ವಹಿಸಿದ್ದರು. ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಅವರ ಯಶೋಗಾಥೆ ಇತರರಿಗೆ ಪ್ರೇರಣೆಯಾಗುವಂತೆ ಮಾಡುವುದೆ ಪ್ರಶಸ್ತಿ ನೀಡುವ ಮುಖ್ಯ ಉದ್ದೇಶ. ಹಸಿರು ಕ್ರಾಂತಿಯ ಬಳಿಕ ದೇಶದಲ್ಲಿ ಆಹಾರೋತ್ಪಾದನೆ ಹೆಚ್ಚಾಗಿರುವುದು ನಿಜವಾದರೂ, ರಾಸಾಯನಿಕಯುಕ್ತ ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯಿಂದ ರೈತರ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗಿವೆ.

ರೈತರು ಸಾವಯವ ಕೃಯತ್ತ ಮನಸ್ಸು ಮಾಡಿರುವುದು ಉತ್ತಮ ವಿಚಾರ. ಗ್ರಾಹಕರಲ್ಲಿಯೂ ಸಾವಯವ ಕೃಷಿ ಉತ್ಪನ್ನಗಳ ಬಗ್ಗೆ ಅರಿವು ಮೂಡಿದ್ದು, ಜನರು ಸಾವಯವ ಪದ್ದತಿಯಲ್ಲಿ ಬೆಳೆದ ಉತ್ಪನ್ನಗಳನ್ನು ಹೆಚ್ಚು ಖರೀದಿಸುತ್ತಿದ್ದಾರೆ. ಕೃಷಿಯಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸಮ್ಮಾನಿಸಿ ಅವರನ್ನು ಹುರಿದುಂಬಿಸುವುದು ಅರ್ಥಪೂರ್ಣ ಕಾರ್ಯಕ್ರಮ ಎಂದರು.

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡ್ಗಿ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಸುಭಾಷಿತ್‌ ಕುಮಾರ್‌, ಶ್ರೀಕ್ಷೇತ್ರ ಧರ್ಮಸ್ಥಳದ ತಾಲೂಕು ಯೋಜನಾಧಿಕಾರಿ ರೋಹಿತ್‌ ಎಚ್‌., ಕಿಸಾನ್‌ ಸಂಘದ ಪ್ರತಿನಿಧಿ ಬಿ.ವಿ.ಪೂಜಾರಿ ಉಪಸ್ಥಿತರಿದ್ದರು. ದ.ಕ., ಉಡುಪಿ, ಚಿಕ್ಕಮಗಳೂರು ಪ್ರಾಂತೀಯ ಸಾವಯವ ಕೃಷಿಕರ ಒಕ್ಕೂಟದ ನಿರ್ದೇಶಕ ದೇವದಾಸ್‌ ಹೆಬ್ಟಾರ್‌, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಪ್ರದೀಪ್‌ ಹೆಬ್ಟಾರ್‌, ಬ್ರಹ್ಮಾವರದ ಕೆ.ವಿ.ಕೆ. ಮುಖ್ಯಸ್ಥ ಡಾ| ಧನಂಜಯ್‌ ಉಪಸ್ಥಿತರಿದ್ದರು. ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ಚಂದ್ರಶೇಖರ್‌ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

ಪ್ರಶಸ್ತಿ ಪ್ರದಾನ
2018-2019 ಸಾಲಿನ ಕೃ ಪ್ರಶಸ್ತಿ ಯೋಜನೆಯಡಿ ಭತ್ತದ ಬೆಳೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಕ್ರಮವಾಗಿ ಪ್ರೇಮಾ ಪೂಜಾರ್ತಿ, ಕೆ.ವಸಂತ ಶೆಟ್ಟಿ ಮತ್ತು ಸುಬ್ರಾಯ ನಾಯ್ಕ ಹಾಗೂ ಆತ್ಮ ಯೋಜನೆಯಡಿ ಹಂದಿ ಸಾಕಣಿಕೆಯಲ್ಲಿ ಎಡ್ವರ್ಡ್‌ ಮೆಂಡೋನ್ಸ, ಪಂಜರು ಮೀನು ಕೃಷಿಯಲ್ಲಿ ಸುದೀನ, ಸಮಗ್ರ ಕೃಷಿ ಪದ್ದತಿಯಲ್ಲಿ ಪೀಟರ್‌ ಡಿಸೋಜಾ, ಶಂಕರ್‌ ನಾಯ್ಕ ಮತ್ತು ಜೂಲಿಯನ್‌ ದಾಂತಿ, ಸಾವಯವ ಕೃಷಿಯಲ್ಲಿ ಸಂಪಾವತಿ, ಹೈನುಗಾರಿಕೆಯಲ್ಲಿ ಎಚ್‌. ಪ್ರಕಾಶ ಕೆದ್ಲಾಯ ಅವರಿಗೆ ತಾಲೂಕು ಮಟ್ಟದ ರೈತ ಸಾಧಕ ಪ್ರಶಸ್ತಿ ನೀಡಿ ಗೌರಸಲಾಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.