“ವಾರಾಹಿ ನೀರನ್ನು ಕೆರೆಗಳಿಗೆ ಸಂಪರ್ಕಿಸುವ ಯೋಜನೆ ಅಗತ್ಯ’
Team Udayavani, Oct 22, 2019, 5:15 AM IST
ಕೊಟ: ವಾರಾಹಿ ನೀರನ್ನು ಊರಿನ ಪ್ರಮುಖ ಕೆರೆಗಳಿಗೆ ಸಂಪರ್ಕಿಸುವ ಕಾರ್ಯವಾಗಬೇಕು. ಇದರಿಂದಾಗಿ ನೀರಿನ ಮಟ್ಟದ ಏರಿಕೆಯಾಗಿ, ಕೃಷಿ ಚಟುವಟಿಕೆಗೆ ಪೂರಕವಾಗಲಿದೆ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.
ಅವರು ಬಿಲ್ಲಾಡಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಆಶ್ರಯದಲ್ಲಿ, ಕೊಡಗಾರಕೆರೆ ಅಭಿವೃದ್ಧಿ ಸಮಿತಿ ಸಹಕಾರದಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಅಭಿವೃದ್ಧಿಗೊಂಡ ಕೊಡಗಾರಕೆರೆ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ವಾರಾಹಿ ಕಾಲುವೆಗಳನ್ನು ಕೆರೆ, ಮದಗಗಳಿಗೆ ಸಂಪರ್ಕಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಸ್ಥಳೀಯ ಜನಪ್ರತಿನಿಧಿಗಳು ಸೂಕ್ತ ಯೋಜನೆ ರೂಪಿಸಬೇಕಿದೆ. ಇಂದು ಸರಕಾರದ ಬೊಕ್ಕಸ ನೆರೆ, ಬರ ಪರಿಹಾರ ನೀಡುವುದರಲ್ಲೇ ಖಾಲಿಯಾಗುತ್ತಿದೆ. ಅಂತಹ ಪರಿಸ್ಥಿತಿ ಕರಾವಳಿಗರಿಗೆ ಬರಬಾರದು ಎನ್ನುವ ನಿಟ್ಟಿನಲ್ಲಿ ನೀರಿನ ಕುರಿತು ನಾವು ಎಚ್ಚರಿಕೆ ವಹಿಸಬೇಕು ಎಂದರು.
ರಾಜ್ಯದಲ್ಲಿ 187 ಕೆರೆ ಅಭಿವೃದ್ಧಿ
ಪೂಜ್ಯ ವಿರೇಂದ್ರ ಹೆಗ್ಗಡೆಯವರು ಕೆರೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದ್ದಾರೆ. ಹೀಗಾಗಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಮ್ಮ ಗ್ರಾಮ-ನಮ್ಮ ಕೆರೆ ಯೋಜನೆಯಡಿ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 14.43ಕೋಟಿ ವೆಚ್ಚದ್ಲಲಿ 187 ಕೆರೆಗಳ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಅಭಿವೃದ್ಧಿಗೊಂಡ ಕೆರೆಗಳನ್ನು ಕೃಷಿ ಇನ್ನಿತರ ಚಟುವಟಿಕೆಗೆ ಬಳಸಿಕೊಳ್ಳಬೇಕು ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ತಿಳಿಸಿದರು.
ಬಿಲ್ಲಾಡಿ ಗ್ರಾ.ಪಂ. ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಜೀರ್ಣೋದ್ಧಾರಗೊಂಡ ಕೆರೆಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಲಾಯಿತು. ಜಿ.ಪಂ. ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಕೆರೆ ಅಭಿವೃದ್ಧಿ ಸಮಿತಿ ಮುಖ್ಯಸ್ಥ ರಾಘವೇಂದ್ರ ಉಪಸ್ಥಿತರಿದ್ದರು.
ಯೋಜನೆಯ ಮಂದಾರ್ತಿ ವಲಯದ ಮೇಲ್ವಿಚಾರಕ ರವೀಂದ್ರ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ರಾಘವೇಂದ್ರ ನಿರೂಪಿಸಿ, ತಾಲೂಕು ಯೋಜನಾಧಿಕಾರಿ ದಿನೇಶ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ