ಮೇ ಅಂತ್ಯಕ್ಕೆ ನೀಲಾವರ-ಕೂರಾಡಿ ಸೇತುವೆ ಪೂರ್ಣ: ಸಚಿವ ಪ್ರಮೋದ್
Team Udayavani, Feb 19, 2017, 8:59 AM IST
ಬ್ರಹ್ಮಾವರ: ಬಹುದಿನಗಳ ಕನಸಾದ ನೀಲಾವರ-ಕೂರಾಡಿ ಸಂಪರ್ಕ ಸೇತುವೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮೇ ಅಂತ್ಯದೊಳಗೆ ಪೂರ್ಣ ಗೊಳ್ಳುವ ನಿರೀಕ್ಷೆ ಇದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಶನಿವಾರ ಕುಂಜಾಲಿನಲ್ಲಿ ನೀಲಾವರ ಗ್ರಾಮ ಮಟ್ಟದ ಜನ ಸಂಪರ್ಕ ಸಭೆ ಉದ್ಘಾಟಿಸಿದರು. ಸಚಿವನಾಗಿ ಆಯ್ಕೆಯಾದ ಮೇಲೆ ರಾಜ್ಯದೆಲ್ಲೆಡೆ ಸಂಚರಿಸಬೇಕಾದ ಕಾರ್ಯ ಒತ್ತಡವಿದ್ದರೂ ಕ್ಷೇತ್ರದ ಜನರ ಅಹ ವಾಲುಗಳಿಗೆ ಸ್ಪಂದಿಸಬೇಕೆಂಬ ಉದ್ದೇಶ
ದಿಂದ ರಾಜ್ಯದಲ್ಲೇ ಮೊತ್ತಮೊದಲ ಬಾರಿಗೆ ಗ್ರಾಮ ಮಟ್ಟದಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಳ್ಳ ಲಾಗುತ್ತಿದೆ. ಎಲ್ಲ ಇಲಾಖಾ ಅಧಿಕಾರಿ ಗಳನ್ನು ಒಳಗೊಂಡ ಇಡೀ ಸರಕಾರವೇ ಗ್ರಾಮಕ್ಕೆ ಆಗಮಿಸು ವುದರಿಂದ ಜನರು ಇದರ ಸದುಪಗಪಡಿಸಿಕೊಳ್ಳಬೇಕು ಎಂದರು.
ಗ್ರಾಮಗಳಿಗೆ ಮಹತ್ವ
ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿ ಕೋಟ್ಯಂತರ ರೂ. ಅನುದಾನದಿಂದ ಅಭಿವೃದ್ಧಿ ಕಾರ್ಯ ಕೈಗೊಂಡಿದೆ. ಬಿಪಿಎಲ್ ಕಾರ್ಡ್ ಪಡೆಯಲು ಸೂಕ್ತ ಅನುಕೂಲ ಕಲ್ಪಿಸಿದೆ. ಬಸವ ವಸತಿ ಅನುದಾನ ಹೆಚ್ಚಿಸಿದೆ, ವಿವಿಧ ಭಾಗ್ಯಗಳನ್ನು ಕರುಣಿಸಿದೆ ಎಂದು ಪ್ರಮೋದ್ ಅವರು ಹೇಳಿದರು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ಅಕ್ರಮ ಸಕ್ರಮ- ಸಮಿತಿ ಅಧ್ಯಕ್ಷ ಮೈರ್ಮಾಡಿ ಅಶೋಕ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಸದಸ್ಯರಾದ ಗೋಪಿ ಕೆ. ನಾಯ್ಕ, ಸುಧೀರ್ ಕುಮಾರ್ ಶೆಟ್ಟಿ, ಪಂಚಾಯತ್ ಅಧ್ಯಕ್ಷೆ ಆಶಾ ಕೋಟ್ಯಾನ್, ಉಪಾಧ್ಯಕ್ಷ ರಮೇಶ್ ಪೂಜಾರಿ, ಸದಸ್ಯರು, ತಹಶೀಲ್ದಾರ್ ಪ್ರದೀಪ್ ಕುಡೇìಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ, ಕಂದಾಯ ಅಧಿಕಾರಿ ಲಕ್ಷ್ಮೀನಾರಾಯಣ ಭಟ್, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ಕೆಡಿಪಿ ಸದಸ್ಯ ಉಮೇಶ್ ಎ. ನಾಯ್ಕ ಸ್ವಾಗತಿಸಿ, ನಾಗಯ್ಯ ಮಠಪತಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್