“ಆದಿವಾಸಿಗಳಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ನಿರ್ಲಕ್ಷ್ಯ

ಕಾರ್ಕಳ: ತಾಲೂಕು ದಲಿತ ಕುಂದುಕೊರತೆ ಸಭೆ

Team Udayavani, Jul 21, 2019, 5:50 AM IST

2007AJKE10

ಅಜೆಕಾರು: ಹಲವು ಶತಮಾನಗಳಿಂದ ಅರಣ್ಯದೊಳಗೆ ಆದಿವಾಸಿಗಳು ಜೀವನ ನಡೆಸುತ್ತ ಬಂದಿದ್ದು ದಶಕಗಳಿಂದ ಮೂಲ ಸೌಕರ್ಯ ಒದಗಿಸುವಂತೆ ನಿರಂತರ ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಪ್ರತೀ ಕುಂದುಕೊರತೆ ಸಭೆಯಲ್ಲಿಯೂ ಈ ಬಗ್ಗೆ ಪ್ರಸ್ತಾವ ಮಾಡಲಾಗುತ್ತಿದೆಯಾದರೂ ಅಭಿವೃದ್ಧಿ ಮಾತ್ರ ನಡೆಯುತ್ತಿಲ್ಲ ಎಂದು ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್‌ ಗೌಡ ಹೇಳಿದರು.

ಕಾರ್ಕಳ ತಾಲೂಕು ವ್ಯಾಪ್ತಿಯ ದಲಿತ ಕುಂದು ಕೊರತೆ ಸಭೆಯು ಜು. 20ರಂದು ತಹಶೀಲ್ದಾರ್‌ ಪುರಂದರ್‌ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕಿನ ರೆಂಜಾಳದ ಮಲೆಬೆಟ್ಟು, ದಡ್ಡು, ಕಜಂಬೊಟ್ಟು, ಕಬ್ಬಿನಾಲೆಯ ಪಾರಿಕಲ್ಲು ನೂರಾಲ್‌ಬೆಟ್ಟುವಿನ ಕನ್ಯಾಲು ಭಾಗದ ಆದಿವಾಸಿಗಳಿಗೆ ವಿದ್ಯುತ್‌, ರಸ್ತೆ ಸಂಪರ್ಕ ಕಲ್ಪಿಸುವಂತೆ ನಿರಂತರ ಮನವಿ ಮಾಡುತ್ತಿದ್ದರೂ ಕಾನೂನಿನ ನೆಪ ಹೇಳಲಾಗುತ್ತಿದೆ. ಆದರೆ ಅರಣ್ಯವಾಸಿಗಳಿಗೆ ರಸ್ತೆ, ವಿದ್ಯುತ್‌ ಸೇರಿದಂತೆ ಮೂಲ ಸೌಕರ್ಯ ಒದಗಿಸುವಂತೆ ಅರಣ್ಯ ಹಕ್ಕು ಕಾಯ್ದೆಯಲ್ಲಿಯೇ ಇದೆ. ಕಂದಾಯ, ಅರಣ್ಯ, ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಿದರು.

ಪುರಸಭೆ ವ್ಯಾಪ್ತಿಯಲ್ಲಿ
ಕುಂದುಕೊರತೆ ಸಭೆ
ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಪ.ಜಾತಿ, ಪ.ಪಂಗಡದ 8 ಕಾಲನಿಗಳಿದ್ದು ಈ ಎಲ್ಲ ಕಾಲನಿಗಳಲ್ಲಿ ಮೂಲ ಸೌಕರ್ಯದ ಕೊರತೆ ಇದೆ. ಈ ನಿಟ್ಟಿನಲ್ಲಿ ಪುರಸಭಾ ವ್ಯಾಪ್ತಿಯ ಕುಂದುಕೊರತೆ ಸಭೆಯನ್ನು ಪುರಸಭೆಯಲ್ಲಿ ನಡೆಸುವಂತೆ ಶ್ರೀನಿವಾಸ್‌ ಕಾರ್ಲ ಒತ್ತಾಯಿಸಿದರು.

ಗಣಿಗಾರಿಕೆ ಪರವಾನಿಗೆ: ಆಕ್ರೋಶ
ಪಳ್ಳಿಯಲ್ಲಿ ಜನರಿಗೆ ಸಮಸ್ಯೆಯಾಗುವ ಗಣಿಗಾರಿಕೆಗೆ ಪರವಾನಿಗೆ ನೀಡಿರುವ ಬಗ್ಗೆ ಅಣ್ಣಪ್ಪ ನಕ್ರೆಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಹಿಂದಿನ ಕುಂದುಕೊರತೆ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವ ಮಾಡಲಾಗಿದ್ದು ಗಣಿಗಾರಿಕೆಯಿಂದ ಸ್ಥಳೀಯರಿಗೆ ತೀವ್ರ ತೊಂದರೆಯಾಗುತ್ತಿರುವ ಬಗ್ಗೆ ಸಭೆಯ ಗಮನಕ್ಕೆ ತರಲಾಗಿತ್ತು. ಕಳೆದ 4 ವರ್ಷಗಳಿಂದ ವಿರೋಧ ಮಾಡುತ್ತಾ ಬಂದಿದ್ದರೂ ಗಣಿಗಾರಿಕೆಗೆ ಅಧಿಕೃತವಾಗಿ ಪರವಾನಿಗೆ ನೀಡಲಾಗಿದೆ. ಹಾಗಾದರೆ ಕುಂದುಕೊರತೆ ಸಭೆ ನಡೆಸುವ ಅಗತ್ಯ ಏನು ಎಂದು ಪ್ರಶ್ನಿಸಿದರು.

ಅಂಬೇಡ್ಕರ್‌ ಪ್ರತಿಮೆಗೆ ಆಗ್ರಹ
ತಾಲೂಕು ಕೇಂದ್ರ ಬಳಿಯ ಬಂಡೀಮಠದಲ್ಲಿರುವ ಅಂಬೇಡ್ಕರ್‌ ಪ್ರತಿಮೆಯು ಕುಸಿಯುವ ಹಂತದಲ್ಲಿದ್ದು ಹೊಸ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಮಾಡುವ ಬಗ್ಗೆ ಹಿಂದಿನ ಸಭೆಯಲ್ಲಿಯೇ ಪುರಸಭೆಗೆ ಮನವಿ ಮಾಡಲಾಗಿತ್ತಾದರೂ ಅಧಿಕಾರಿಗಳು ಈ ವರೆಗೂ ಈ ಬಗ್ಗೆ ಗಮನಹರಿಸಿಲ್ಲ ಎಂದು ಅಣ್ಣಪ್ಪ ನಕ್ರೆ ಅವರು ಹೇಳಿದರು. ಈ ಬಗ್ಗೆ ಮಾತನಾಡಿದ ತಹಶೀಲ್ದಾರ್‌ ಕೂಡಲೇ ಅಂಬೇಡ್ಕರ್‌ ಪ್ರತಿಮೆ ಪುನರ್‌ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಸ್ತೆಗೆ ಮನವಿ
ಮಾಳ ಪಂಚಾಯತ್‌ ವ್ಯಾಪ್ತಿಯ ಹನೆಗುಂಡಿ, ಮುಗ್ಗೇರ್ಕಳ ಪ್ರದೇಶದಲ್ಲಿ ಪ.ಜಾತಿ, ಪ.ಪಂಗಡದ ಸುಮಾರು 25ರಿಂದ 30 ಮನೆಗಳಿದ್ದು ಸೂಕ್ತ ರಸ್ತೆ ಇಲ್ಲದೆ ಸಂಕಷ್ಟಪಡುವಂತಾಗಿದೆ. ಒಂದೆರಡು ಪ.ಜಾತಿ ಪ.ಪಂಗಡದ ಅನುದಾನದಿಂದ ಈ ರಸ್ತೆ ಅಭಿವೃದ್ಧಿ ಶೀಘ್ರದಲ್ಲಿ ನಡೆಯಬೇಕಾಗಿದೆ ಎಂದು ವಿಟuಲ ಗೌಡ ಹೇಳಿದರು. ಅಲ್ಲದೆ ಮಾಳದಲ್ಲಿರುವ ಸಮಾಜ ಮಂದಿರಕ್ಕೆ ಹೋಗಲು ಸೂಕ್ತ ರಸ್ತೆಯ ಅಗತ್ಯವಿದೆ ಹಾಗೂ ಈ ಸಮಾಜ ಮಂದಿರದ ಸುತ್ತಲಿನ ಜಾಗ ಅತಿಕ್ರಮಣವಾಗಿದೆ ಎಂದರು. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ತಹಶೀಲ್ದಾರ್‌ ಅವರು ನೀಡಿದರು.

ಹೆಬ್ರಿಯಲ್ಲಿ ಕುಂದುಕೊರತೆ ಸಭೆಗೆ ಆಗ್ರಹ
ಹೆಬ್ರಿ ಪ್ರತ್ಯೇಕ ತಾಲೂಕು ಕೇಂದ್ರವಾಗಿರುವುದರಿಂದ ಹೆಬ್ರಿಯ ಜನರ ಅನುಕೂಲಕ್ಕಾಗಿ ಹೆಬ್ರಿಯಲ್ಲಿ ಕುಂದುಕೊರತೆ ಸಭೆ ನಡೆಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ತಹಶೀಲ್ದಾರ್‌ ಅವರು ಹೆಬ್ರಿಯಲ್ಲಿ ಎಲ್ಲ ಇಲಾಖೆಗಳು ಪ್ರಾರಂಭವಾಗದ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿಯೇ ಕುಂದುಕೊರತೆ ಸಭೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಬ್ರಿಯಲ್ಲಿ ಸಭೆ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭ ಹೆಬ್ರಿ ತಹಶೀಲ್ದಾರ್‌ ಸತೀಶ್ಚಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ವಿಜಯಕುಮಾರ್‌ ಅವರು ಸ್ವಾಗತಿಸಿ, ವಂದಿಸಿದರು.

94ಸಿ ಯಡಿ ದಲಿತರಿಗೆ ಅನ್ಯಾಯ
ನಲ್ಲೂರು ಪಂಚಾಯತ್‌ ವ್ಯಾಪ್ತಿಯಲ್ಲಿ 94ಸಿ ಅಡಿಯಲ್ಲಿ ಇತರ ಸಮುದಾಯದವರಿಗೆ ಹಕ್ಕುಪತ್ರ ನೀಡಲಾಗಿದ್ದು ದಲಿತ ಸಮುದಾಯದವರಿಗೆ ಈ ವರೆಗೂ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಅಣ್ಣಪ್ಪ ನಕ್ರೆ ಹೇಳಿದರು. ಈ ಸಂದರ್ಭ ಸ್ಪಷ್ಟನೆ ನೀಡಿದ ತಹಶೀಲ್ದಾರ್‌ ಪುರಂದರ ಹೆಗ್ಡೆ ಅವರು 94ಸಿ ಅಡಿ ಅರ್ಜಿ ಸಲ್ಲಿಸಲಾದ ಸ್ಥಳವು ಡೀಮ್ಡ್ ಫಾರೆಸ್ಟ್‌ ಆಗಿದ್ದು ಈಗಾಗಲೇ ನೀಡಲಾಗಿರುವ ಹಕ್ಕುಪತ್ರಗಳನ್ನು ರದ್ದುಗೊಳಿಸಲಾಗುವುದು ಎಂದರು.

ನಿರ್ಮಾಣವಾಗದ ಅಂಬೇಡ್ಕರ್‌ ಭವನ
ಕಾರ್ಕಳದ ಕಾಬೆಟ್ಟುವಿನಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ 1.60 ಲಕ್ಷ ರೂ. ಅನುದಾನ ಮಂಜೂರಾಗಿ 2 ವರ್ಷಗಳು ಕಳೆದಿದ್ದರೂ ಇನ್ನೂ ಟೆಂಡರ್‌ ಪ್ರಕ್ರಿಯೆ ನಡೆಯದಿರುವ ಬಗ್ಗೆ ರಮೇಶ್‌ ಪೆರ್ವಾಜೆ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯವರು, ಇದು ಸರಕಾರದ ಮಟ್ಟದಲ್ಲಿ ನಡೆಯುವ ಪ್ರಕ್ರಿಯೆಯಾಗಿದ್ದು ಈಗಾಗಲೇ ಸರಕಾರದ ಗಮನ ಸೆಳೆಯಲಾಗಿದೆ ಎಂದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.