ಕಾಪು ತಾಲೂಕಿನ ವಿವಿಧೆಡೆ ನೆರೆ
ಜನತೆ ಸುರಕ್ಷಿತ ಸ್ಥಳಗಳಿಗೆ ರವಾನೆ; ಅಲ್ಲಲ್ಲಿ ಸಂಪರ್ಕ ಕಡಿತ
Team Udayavani, Aug 14, 2019, 6:08 AM IST
ಕಾಪು: ಮಂಗಳವಾರ ದಿನವಿಡೀ ಸುರಿದ ಮಳೆಯಿಂದ ಕಾಪು ತಾಲೂಕಿನ ಮಜೂರು, ಬೆಳಪು, ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಮಂಗಳವಾರ ನೆರೆಯ ಭೀತಿ ಎದುರಾಗಿದೆ.
ಮಜೂರು ಗ್ರಾಮದ ಕರಂದಾಡಿ ಮತ್ತು ಕಲ್ಲುಗುಡ್ಡೆ ಪ್ರದೇಶದಲ್ಲಿ ನೆರೆ ಭೀತಿ ಹಿನ್ನೆಲೆಯಲ್ಲಿ ಕೆಲವರನ್ನು ತೆರವು ಮಾಡಲಾಗಿದೆ.
ಬಡಾ ಗ್ರಾ.ಪಂ. ವ್ಯಾಪ್ತಿಯ ಭಾಸ್ಕರ ನಗರ, ಕಟ್ಟಿಂಗೇರಿ ಪರಿಸರದಲ್ಲಿ ಕೃತಕ ನೆರೆ ಭೀತಿ ಎದುರಾಗಿದ್ದು, ಜಲಾವೃತಗೊಂಡಿದ್ದ ಮನೆಗಳಿಗೆ ನೀರು ನುಗ್ಗದಂತೆ ಮುನ್ನೆಚ್ಚರಿಕೆ ಕೈಗೆತ್ತಿಕೊಳ್ಳಲಾಗಿದೆ.
ಮೂಳೂರು ಕರಾವಳಿ ರಸ್ತೆಯ ಭಜನ ಮಂದಿರ ಪ್ರದೇಶದಲ್ಲಿ ಭಾಗದಲ್ಲಿ ತೋಟಗಳಿಗೆ ನೀರು ನುಗ್ಗಿದ್ದು, ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದೆ. ಸೋಮವಾರ ಮಧ್ಯರಾತ್ರಿ ಎಲ್ಲೂರು ವಿಶ್ವೇಶ್ವರ ದೇಗುಲ ಅಂಗಳಕ್ಕೆ ನೀರು ನುಗಿತ್ತು.
ಕುಂದಾಪುರ: 6 ಮನೆ ಹಾನಿ
ಕುಂದಾಪುರ: ಭಾರೀ ಗಾಳಿ – ಮಳೆಯಿಂದಾಗಿ ಕುಂದಾಪುರ, ಬೈಂದೂರು ತಾಲೂಕಿನಲ್ಲಿ 6 ಮನೆಗಳಿಗೆ ಹಾನಿಯಾಗಿದ್ದು, 2 ಜಾನುವಾರು ಕೊಟ್ಟಿಗೆಗೆ ಭಾಗಶಃ ಹಾನಿ ಸಂಭವಿಸಿದೆ.
ದಕ್ಷಿಣ ಕನ್ನಡ: ಮಳೆ ಕಡಿಮೆ
ಮಂಗಳೂರು: ಹಲವು ದಿನಗಳಿಂದ ಸಮಸ್ಯೆಗಳನ್ನೇ ಸೃಷ್ಟಿಸಿದ್ದ ಮಳೆ ಮಂಗಳವಾರ ಕಡಿಮೆಯಾಗಿತ್ತು.
ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದವರ ಪೈಕಿ ಬಹುತೇಕ ಜನರು ಸದ್ಯ ಮನೆಗಳತ್ತ ವಾಪಸಾಗಿದ್ದಾರೆ.
ಉಡುಪಿ: ಧಾರಾಕಾರ ಮಳೆ
ಉಡುಪಿ: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿದಿದೆ. ಮಂಗಳವಾರ ಮಧ್ಯಾಹ್ನದ ಅನಂತರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಯಿತು. ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ರಿಂದ ಮಂಗಳವಾರ ಬೆಳಗ್ಗೆ 8.30ರ ಅವಧಿಯಲ್ಲಿ 77 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಡಿಕೆ ಮಳೆ 41 ಮಿ.ಮೀ.
ಶಾಲೆಗಳಿಗೆ ಸೂಚನೆ
ಮಳೆ ಬರುತ್ತಿದೆ ಎಂಬ ಕಾರಣಕ್ಕೆ ಯಾವುದೇ ಶಾಲೆಯವರು ವಿದ್ಯಾರ್ಥಿಗಳನ್ನು ನಿಗದಿತ ಸಮಯಕ್ಕಿಂತ ಮೊದಲು ಮನೆಗೆ ಕಳುಹಿಸಬಾರದು. ಇದು ಮಕ್ಕಳ ಹೆತ್ತವರ ಗಮನಕ್ಕೆ ಬಾರದೆ ಅನಾಹುತ ಉಂಟಾಗಬಹುದು ಎಂಬುದಾಗಿ ಎಲ್ಲ ಶಾಲಾ ಮುಖ್ಯಸ್ಥರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್