ಇನ್ನೂ ಇಳಿಯದ ನೆರೆಯ ನೀರು!
ಭತ್ತದ ಕೃಷಿ ಸಂಪೂರ್ಣ ನಾಶದ ಭೀತಿ
Team Udayavani, Sep 10, 2019, 5:22 AM IST
ಕುಂದಾಪುರ: ಕಳೆದ ಆಗಸ್ಟ್ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಮಹಾ ನೆರೆಯ ನೀರು ಒಂದು ತಿಂಗಳು ಕಳೆದರೂ ಇನ್ನೂ ಇಳಿದಿಲ್ಲ. ಬಡಾಕೆರೆ, ನಾಡ, ಚಿಕ್ಕಳ್ಳಿ ಭಾಗದಲ್ಲಿನ ಭತ್ತದ ಗದ್ದೆಗಳು ಇನ್ನೂ ಸಂಪೂರ್ಣ ಜಲಾವೃತಗೊಂಡಿದ್ದು, ತೆಂಗಿನ ತೋಟದಲ್ಲಿಯೂ ನೀರು ನಿಂತಿದೆ.
ಕಳೆದ ಆ. 6 -7ರಂದು ಸುರಿದ ಭಾರೀ ಮಳೆ ಪರಿಣಾಮ ನಾವುಂದ, ನಾಡ, ಬಡಾಕೆರೆ ಭಾಗದಲ್ಲಿ ಮಹಾ ನೆರೆ ಪರಿಸ್ಥಿತಿ ಉಂಟಾಗಿತ್ತು. ಆಗಿನಿಂದ ಈವರೆಗೆ ನಿರಂತರ ಮಳೆಯಾಗುತ್ತಿರುವುದರಿಂದ, ಕೆಲವು ದಿನ ಮಳೆ ಕಡಿಮೆಯಾಗಿದ್ದರೂ, ನೆರೆಯ ನೀರು ಮಾತ್ರ ಕಡಿಮೆಯಾಗಿಲ್ಲ. ಇದರಿಂದ ಈ ಭಾಗದ ಸುಮಾರು 20ಕ್ಕೂ ಹೆಚ್ಚು ಎಕರೆ ಭತ್ತದ ಗದ್ದೆಗಳಲ್ಲಿ ನೀರು ನಿಂತಿದೆ.
ನೀರು ನಿಂತಿರುವುದರಿಂದ ಗದ್ದೆಯಲ್ಲಿ ಬೆಳೆದಿರುವ ಭತ್ತದ ಪೈರು ಕೊಳೆಯುತ್ತಿದ್ದು, ಇದರಿಂದ ಈ ಬಾರಿಯ ಮುಂಗಾರಿನ ಭತ್ತದ ಕೃಷಿ ಸಂಪೂರ್ಣ ನಾಶವಾಗುವ ಭೀತಿ ರೈತರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್