ಮತ್ತೆ ಸ್ಥಳೀಯರಿಂದ ಸುಂಕ ವಸೂಲಿಗೆ ನವಯುಗ ಹುನ್ನಾರ


Team Udayavani, Jun 15, 2019, 5:53 AM IST

1406RA1E_1406MN__1

ಸ್ಕೈ ವಾಕ್‌ ಇಲ್ಲದೇ ಶಾಲಾ ಮಕ್ಕಳನ್ನು ಮನೆಯ ಹಿರಿಯರೇ ಹೆದ್ದಾರಿ ದಾಟಿಸಿ ಬಿಡುವುದು.

ಪಡುಬಿದ್ರಿ: ಹೆಜಮಾಡಿಯ ನವಯುಗ ಟೋಲ್‌ ಪ್ಲಾಝಾದಲ್ಲಿ ಪಡುಬಿದ್ರಿ ಸುತ್ತಮುತ್ತಲಿನ ಸ್ಥಳೀಯ ವಾಹನಗಳಿಗೆ ಮತ್ತೆ ಟೋಲ್‌ ವಸೂಲಿಗೆ ತಗಾದೆ ಎಬ್ಬಿಸಿ ಸ್ಥಳೀಯ ವಾಹನ ಮಾಲಕರ ವಿರೋಧದಿಂದಾಗಿ ತತ್ಕಾಲಕ್ಕೆ ತೆಪ್ಪಗಿದೆ.

ತನ್ನೊಳಗೇ ಸಮಸ್ಯೆಗಳು ಹಲವಾರಿದ್ದರೂ ಯಾವುದನ್ನೂ ಸರಿಪಡಿಸಿಕೊಳ್ಳದಿರುವ ನವಯುಗ ಕಂಪೆನಿಯು ಟೋಲ್‌ ಪ್ಲಾಝಾದ ಮೂಲಕ ಜನರ ಸುಲಿಗೆಗೆ ಇಳಿದಿರುವುದು ಅಕ್ಷಮ್ಯ ಅಪರಾಧ ಎಂಬುದಾಗಿ ಸ್ಥಳೀಯರು ಹೇಳುತ್ತಿದ್ದಾರೆ.

ಹೆಜಮಾಡಿಯ ಟೋಲ್‌ಗೇಟ್‌ ಬಳಿಯಲ್ಲೇ ಹೆಜಮಾಡಿ ಗ್ರಾಮದಲ್ಲಿನ ಸರಕಾರಿ ಶಾಲೆಗಳಿಗೆ ಹಾಗೂ ಖಾಸಗಿ ಶಾಲೆಯೊಂದಕ್ಕೂ ಹೋಗುವ ಶಾಲಾ ವಿದ್ಯಾರ್ಥಿಗಳ ದಿನನಿತ್ಯದ ಪರಿ ಹೇಳಲಾಗದು. ಪ್ರತಿದಿನ ಹಿರಿಯರೇ ಈ ಮಕ್ಕಳನ್ನು ಹೆದ್ದಾರಿ ದಾಟಿಸಿ ಬಿಟ್ಟು ಬರುವಂತಾಗಿದೆ. ಇಲ್ಲಿ ಮಕ್ಕಳು ಹಾಗೂ ಹಿರಿಯ ನಾಗರಿಕರು ಮತ್ತು ಸ್ಥಳೀಯರಿಗಾಗಿ ಸ್ಕೈವಾಕ್‌ ನಿರ್ಮಾಣಕ್ಕೆ ಕಂಪೆನಿ ಮೂಲಕವಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ರವಾನಿಸಿ ವರ್ಷಗಳೇ ಕಳೆದಿದೆ. ಇದುವರೆಗೂ ಯಾವುದೂ ಕಾರ್ಯರೂಪಕ್ಕಿಳಿದಿಲ್ಲ.

ಹೆಜಮಾಡಿ ಗ್ರಾಮದ ಒಳ ಪ್ರವೇಶಿಸುವಲ್ಲಿಗೆ ಗ್ರಾಮದ ಉತ್ತರ ಭಾಗದಿಂದ ಸರ್ವಿಸ್‌ ರಸ್ತೆ ನಿರ್ಮಾಣಕ್ಕಾಗಿ ಭೂಸ್ವಾಧೀನವೂ ಆಗಿದ್ದು ಕೆಲಸಕಾರ್ಯಗಳಾವುವೂ ನಡೆದಿಲ್ಲ. ಇದನ್ನೂ ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವುದಾಗಿ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ವಿಜಯ್‌ ಸಾಮ್ಸ್‌ನ್‌ಕೂಡಾ ಜನತೆಗೆ ಆಶ್ವಾಸನೆಯಿತ್ತಿದ್ದರು. ಅದೂ ಇದುವರೆಗೂ ಆಗಿಲ್ಲ.

ಪಡುಬಿದ್ರಿಯ ಎರಡೂ ಭಾಗದ ಸರ್ವಿಸ್‌ ರಸ್ತೆ, ಒಳಚರಂಡಿ ಕಾಮಗಾರಿ, ಕಾರ್ಕಳ ರಾಜ್ಯ ಹೆದ್ದಾರಿ ಸೇರುವಲ್ಲಿಯ ಪ್ರದೇಶದಲ್ಲಿ ಸಿಗ್ನಲ್‌ ಲೈಟ್‌ ಅಳವಡಿಕೆಗಳು ಯಾವುದೂ ಪೂರ್ಣಗೊಳ್ಳದೇ ಕೇವಲ ಟೋಲ್‌ ವಸೂಲಿಗೆ ಮತ್ತೆ ಮುಂದಾಗುತ್ತಿರುವ ಕಂಪೆನಿ ವಿರುದ್ಧ ರಾಜ್ಯ ಸರಕಾರವೇ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕಾದ ಅನಿವಾರ್ಯತೆಯಿದೆ. ಕೇವಲ ಕೇಂದ್ರ ಸಾರಿಗೆ ಮಂತ್ರಾಲಯದ ಆದೇಶವೊಂದನ್ನು ಕೈಯಲ್ಲಿ ಇಟ್ಟುಕೊಂಡು ಎಲ್ಲರಿಂದಲೂ ಸುಲಿಗೆಗೆ ಮುಂದಾಗಿರುವ ನವಯುಗ ನಿರ್ಮಾಣ ಕಂಪೆನಿ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಸ್ಥಳೀಯ ಶಾಸಕರು, ಸಂಸದರು ಮುಂದಾಗಬೇಕಿದೆ.

ಇಂದಿನ ಸಭೆ ಮುಂದಕ್ಕೆ
ನವಯುಗ ನಿರ್ಮಾಣ ಕಂಪೆನಿ ಸ್ಥಳೀಯ ವಾಹನಗಳಿಗೂ ಸುಂಕ ವಸೂಲಿಗೆ ಮುಂದಾದಾಗ ಸ್ಥಳೀಯರ ವಿರೋಧದಿಂದಾಗಿ ಅದನ್ನು ನವಯುಗ ಕಂಪೆನಿ ಅಲ್ಲಿಗೇ ತಡೆಹಿಡಿದಿಟ್ಟಿತು. ಶುಕ್ರವಾರ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಸಭೆ ನಡೆಸುವುದಾಗಿ ತೀರ್ಮಾನಿಸಲಾಗಿತ್ತು. ಆದರೆ ಪಡುಬಿದ್ರಿ ಪಿಎಸ್‌ಐ ರಜೆಯಲ್ಲಿರುವುದರಿಂದ ಇದನ್ನು ಮುಂದೂಡಲಾಯಿತು. ಅದುವರೆಗೂ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಲು ತೀರ್ಮಾನಿಸಲಾಗಿದೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.