ಡಿಸೆಂಬರ್‌ನಿಂದ ಅಂಗನವಾಡಿಯಲ್ಲಿ ಎನ್‌ಇಪಿ ಜಾರಿ: ಕಾರ್ಯಕರ್ತೆಯರಿಗೆ ತರಬೇತಿ ಇನ್ನೂ ನೀಡಿಲ್ಲ


Team Udayavani, Sep 27, 2022, 12:39 PM IST

ಡಿಸೆಂಬರ್‌ನಿಂದ ಅಂಗನವಾಡಿಯಲ್ಲಿ ಎನ್‌ಇಪಿ ಜಾರಿ: ಕಾರ್ಯಕರ್ತೆಯರಿಗೆ ತರಬೇತಿ ಇನ್ನೂ ನೀಡಿಲ್ಲ

ಉಡುಪಿ: ರಾಜ್ಯ ಸರಕಾರ ಡಿಸೆಂಬರ್‌ನಿಂದ ಅಂಗನವಾಡಿಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನಕ್ಕೆ ಮುಂದಾಗಿದ್ದು, ಪೂರಕ ಪಠ್ಯಕ್ರಮ ರಚಿಸುವ ನಿಟ್ಟಿನಲ್ಲಿ ಕೇಂದ್ರದಿಂದ ಬರಬೇಕಾದ ಪಠ್ಯಕ್ರಮಕ್ಕಾಗಿ ಕಾಯುತ್ತಿದೆ.

ಈವರೆಗೂ ಅಂಗನವಾಡಿ ಮಕ್ಕಳ ಬೋಧನೆಗೆ ನಿರ್ದಿಷ್ಟ ಚೌಕಟ್ಟು ಇರಲಿಲ್ಲ. ಬಹುತೇಕ ಅಂಗನವಾಡಿಗಳಲ್ಲಿ ಮಕ್ಕಳು ಬೆಳಗ್ಗೆ ಬಂದು ತಿಂಡಿ, ಮಧ್ಯಾಹ್ನದ ಊಟ ಪೂರೈಸಿ ವಾಪಸಾಗುತ್ತಿದ್ದರು. ಕಲಿಕೆಗೆ ಆದ್ಯತೆ ತೀರಾ ಕಡಿಮೆಯಿತ್ತು. ಎನ್‌ಇಪಿ ಅನುಷ್ಠಾನದ ಅನಂತರ ಆಟದ ಮೂಲಕ ಕಲಿಕೆಗೆ ಆದ್ಯತೆ ಸಿಗಲಿದೆ.

ಸರಕಾರಿ ಶಾಲಾ ವ್ಯಾಪ್ತಿಗೆ ಅಂಗನವಾಡಿಯನ್ನು ತರಬೇಕು ಎಂಬ ಚರ್ಚೆ ಅನೇಕ ವರ್ಷಗಳಿಂದ ನಡೆಯುತ್ತಿದೆ. ಇದಕ್ಕಾಗಿ ತಜ್ಞರ ಸಮಿತಿ ರಚಿಸಲಾಗಿದೆ. ಆದರೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅವರ ಸಂಘಟನೆಯವರು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಶೈಕ್ಷಣಿಕ ಜವಾಬ್ದಾರಿಯನ್ನು ಶಾಲೆಗೆ, ಮಕ್ಕಳ ಆಹಾರ, ಪೌಷ್ಟಿಕತೆ ಜವಾಬ್ದಾರಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ವಹಿಸುವ ಬಗ್ಗೆ ಸರಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಇದು ಅಂತಿಮವಾದರೆ ಎನ್‌ಇಪಿ ಅನುಷ್ಠಾನ ಇನ್ನಷ್ಟು ಸಲೀಸಾಗಲಿದೆ.

ಕಾರ್ಯಕರ್ತೆಯರಿಗೆ ಕೈಪಿಡಿ
40 ವರ್ಷ ಮೇಲ್ಪಟ್ಟ ಹಾಗೂ ಎಸೆಸೆಲ್ಸಿ, ಪಿಯುಸಿ ಮತ್ತು ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ ಅಂಗನವಾಡಿ ಕಾರ್ಯಕರ್ತೆ (ಶಿಕ್ಷಕಿ) ಯರಿಗೆ ಎನ್‌ಇಪಿ ಬೋಧನಾ ತರಬೇತಿ ನೀಡಲಾಗುತ್ತದೆ. ಪಠ್ಯಕ್ರಮದ ಅನುಸಾರ ಕಾರ್ಯಕರ್ತೆಯರಿಗೆ ಬೋಧನ ಕೈಪಿಡಿ ನೀಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಡಿಸೆಂಬರ್‌ನಿಂದಲೇ ಅಂಗನವಾಡಿಗಳಲ್ಲಿ ಎನ್‌ಇಪಿ ಜಾರಿ ಮಾಡಲಿದ್ದೇವೆ. ರಾಷ್ಟ್ರ ಮಟ್ಟದ ಪಠ್ಯಕ್ರಮ ಶೀಘ್ರದಲ್ಲೇ ಸಿಗಲಿದ್ದು, ಅದರ ಆಧಾರದಲ್ಲಿ ರಾಜ್ಯಕ್ಕೆ ಅನ್ವಯವಾಗುವಂತಹ ಪಠ್ಯಕ್ರಮವನ್ನು ರಚಿಸಿಕೊಳ್ಳಲಿದ್ದೇವೆ. ಕಾರ್ಯಕರ್ತೆಯರಿಗೆ 6 ತಿಂಗಳಿಂದ 1 ವರ್ಷದ ತರಬೇತಿಯನ್ನು ಹಂತ ಹಂತವಾಗಿ ನೀಡಲಿದ್ದೇವೆ.
– ಬಿ.ಸಿ. ನಾಗೇಶ್‌, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಚಿವ

ಶಾಲಾ ಪೂರ್ವ ಶಿಕ್ಷಣದಲ್ಲಿ ಎನ್‌ಇಪಿ ಅನುಷ್ಠಾನಕ್ಕೆ ಈಗಾಗಲೇ 6 ಉಪಸಮಿತಿ ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ. ಅವುಗಳ ಶಿಫಾರಸಿನಂತೆ ಪ್ರತ್ಯೇಕ ಪಠ್ಯಕ್ರಮ ರಚಿಸಲಾಗುತ್ತದೆ. 20 ಸಾವಿರ ಅಂಗನವಾಡಿಗಳಲ್ಲಿ ಈ ವರ್ಷದಲ್ಲೇ ಅನುಷ್ಠಾನ ಮಾಡುವ ಗುರಿಯಿದೆ.
– ಹಾಲಪ್ಪ ಆಚಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ

ಇದನ್ನೂ ಓದಿ : ಯಾವುದೇ ಭ್ರಷ್ಟಾಚಾರ, ಗಳಿಕೆಗಿಂತ ಹೆಚ್ಚಿನ ಆಸ್ತಿ ವಿವರ ಇದ್ದರೆ ಹಂಚಿಕೊಳ್ಳಿ : ಎಸ್‌ಪಿ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.