ಉಪ್ಪು ನೀರು ತಡೆಗೆ ಶಾಂಭವಿಗೆ ಹೊಸ ಅಣೆಕಟ್ಟು
Team Udayavani, Apr 22, 2019, 1:01 PM IST
ಪಡುಬಿದ್ರಿ: ಸಣ್ಣ ನೀರಾವರಿ ಇಲಾಖೆ ಮೂಲಕ 6.5 ಕೋಟಿ ರೂಪಾಯಿ ವೆಚ್ಚದಲ್ಲಿ ಪಲಿಮಾರಿನಲ್ಲಿ ಶಾಂಭವಿ ನದಿಗೆ ಅಡ್ಡಲಾಗಿ ಉಪ್ಪು ನೀರಿನ ತಡೆಗಾಗಿ ಅಣೆಕಟ್ಟು ನಿರ್ಮಾಣ ಮಾಡಲಾಗುತ್ತಿದೆ.
ಸುಮಾರು 600 ಎಕರೆ ಪ್ರದೇಶಕ್ಕೆ ನೀರೊದಗಿಸುವ ಸಲುವಾಗಿ 25 ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ನಿರ್ಮಿಸಿದ್ದ ಅಣೆಕಟ್ಟಿನ ಕಾಮಗಾರಿ ದೋಷ ಪೂರಿತವಾಗಿದ್ದು ಹಲವಾರು ಬಾರಿ ದುರಸ್ತಿ ಮಾಡಿದ್ದರೂ ಸಮಸ್ಯೆಗೆ ಮುಕ್ತಿ ದೊರೆತಿರಲಿಲ್ಲ. ಈ ಹಿನ್ನಲೆಯಲ್ಲಿ ಹಳೆಯ ಅಣೆಕಟ್ಟೆ ಬಳಿಯಲ್ಲಿಯೇ ನೂತನ ಅಣೆಕಟ್ಟು ನಿರ್ಮಿಸಲಾಗುತ್ತಿದೆ.
ಹಿಂದಿನಷ್ಟೇ ಎತ್ತರ
ಮುಳುಗಡೆ ಭೀತಿಯಿಂದ ಈಗ ನಿರ್ಮಾಣವಾಗುತ್ತಿರುವ ಅಣೆಕಟ್ಟನ್ನೂ ಹಿಂದಿನ ಅಣೆಕಟ್ಟಿನಷ್ಟೇ ಅಂದರೆ 7.5 ಮೀಟರ್ನಷ್ಟು ಎತ್ತರಿಸಲಾಗುತ್ತ¤ದೆ. ಅಣೆಕಟ್ಟೆಯ ನಾಲ್ಕು ಕಡೆ 4×100 ಮೀಟರ್ ವ್ಯಾಪ್ತಿಯಲ್ಲಿ ನದಿಗೆ ತಡೆಗೋಡೆ ನಿರ್ಮಾಣ ಮಾಡಲಾಗುತ್ತದೆ. ಮೂವತ್ತಕ್ಕಿಂತ ಹೆಚ್ಚಿನ ಕಿಂಡಿಗಳನ್ನೂ ನಿರ್ಮಿಸಲಾಗುವುದು. ಕಿಂಡಿಗಳ ಸುತ್ತಳತೆಯನ್ನೂ ಹೆಚ್ಚಿಸಲಾಗುವುದು. ನಾಲ್ಕು ಕಡೆ ಗೇಟ್ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ನದಿಯಲ್ಲಿ ಬೆಡ್ ಹಾಕುವ ಕಾಮಗಾರಿ ನಡೆಯುತ್ತಿದೆ. ಮಳೆಗಾಲ ಆರಂಭಕ್ಕೂ ಮುನ್ನ ನೀರಿನ ಮೇಲ್ಮಟ್ಟದವರೆಗಿನ ಕಾಮಗಾರಿ ಪೂರ್ಣಗೊಳಿಸುವ ಇರಾದೆಯನ್ನು ಅಧಿಕಾರಿಗಳು ಹೊಂದಿದ್ದಾರೆ.
ಮರಳಿನ ಕೊರತೆಯಿಂದ ಹಿನ್ನಡೆ
ಚುನಾವಣೆ ಹಾಗೂ ಮರಳಿನ ಕೊರತೆಯಿಂದ ಯೋಜನೆ ಆರಂಭಕ್ಕೆ ಹಿನ್ನಡೆಯಾಗಿದೆ. ಮಳೆಗಾಲ ಸೇರಿದಂತೆ ಹನ್ನೆರಡು ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಹಿಂದಿನ ಅಣೆಕಟ್ಟೆಗೆ ಹೊಂದಿಕೊಂಡು ನಿರ್ಮಿಸಿದ್ದ ಶೆಡ್ಡು ಕೂಡಾ ಶಿಥಿಲವಾಗಿದ್ದು, ಅದನ್ನೂ ನಿರ್ಮಾಣ ಮಾಡಲಾಗುವುದು. ಅಣೆಕಟ್ಟು ನಿರ್ಮಾಣವಾದ ಬಳಿಕ ಹಳೆ ಅಣೆಕಟ್ಟನ್ನು ಕೆಡವಲಾಗುವುದು. ಅಣೆಕಟ್ಟಿಗೆ ಗೇಟ್ಗಳನ್ನು ನಿರ್ಮಿಸಲಾಗುತ್ತಿದೆ.
ಎಸ್. ಟಿ. ಗೌಡ, ಸಣ್ಣ ನೀರಾವರಿ ಇಲಾಖೆ ಸಹಾಯಕ ಎಂಜಿನಿಯರ್
ಅಂತರ್ಜಲ ಮಟ್ಟ ಏರಿಕೆ
ಅಣೆಕಟ್ಟಿನ ನಿರ್ಮಾಣದಿಂದಾಗಿ ಸುತ್ತಮುತ್ತಲಿನ ಬಾವಿಗಳ ಅಂತರ್ಜಲ ಮಟ್ಟ ಏರಿಕೆ ಹಾಗೂ ಕೃಷಿಗೂ ಅನುಕೂಲವಾಗಲಿದೆ. ಇದರಿಂದ ಬಳ್ಕುಂಜೆ, ಇನ್ನ, ಮುಂಡ್ಕೂರು, ಸಾಣೂರುವರೆಗಿನ ಗ್ರಾಮದ ಪ್ರದೇಶಗಳ ನೀರಿನ ಮಟ್ಟ ಏರಿಕೆಗೆ ಈ ಅಣೆಕಟ್ಟು ಕಾರಣವಾಗಲಿದೆ.
-ಜಿತೇಂದ್ರ ಫುಟಾಡೋ, ಪಲಿಮಾರು ಗ್ರಾ. ಪಂ. ಅಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ